AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚಳ; 24ಗಂಟೆಯಲ್ಲಿ 3205 ಪ್ರಕರಣಗಳು ದಾಖಲು, 31ಮಂದಿ ಸಾವು

ದೇಶದಲ್ಲಿ ಇದುವರೆಗೆ 5,23,920 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಅತಿ ಹೆಚ್ಚು ಸಾವು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ. ಅಲ್ಲಿ ಇವತ್ತಿನವರೆ 1,47,845 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚಳ; 24ಗಂಟೆಯಲ್ಲಿ 3205 ಪ್ರಕರಣಗಳು ದಾಖಲು, 31ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 04, 2022 | 12:08 PM

Share

ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24ಗಂಟೆಯಲ್ಲಿ 3205 ಹೊಸ ಕೇಸ್​ಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,509ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ  4,30,88,118 ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದಲ್ಲಿ 24ಗಂಟೆಯಲ್ಲಿ 31 ಮಂದಿ ಕೊರೊನಾ ಸೊಂಕಿನಿಂದ ಸತ್ತಿದ್ದು, ಅದರಲ್ಲಿ 29 ಜನ ಕೇರಳದವರೇ ಆಗಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾದಿಂದ ಮೃತಪಟ್ಟವರು  5,23,920 ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವಿಕೆಯ ಪ್ರಮಾಣ ಶೇ.98.74ರಷ್ಟಿದೆ. ದೈನಂದಿನ ಪಾಸಿಟಿವಿಟಿ ರೇಟ್​ ಶೇ.0.98ರಷ್ಟಿದ್ದು, ವಾರದ ಪಾಸಿಟಿವಿಟಿ ರೇಟ್​ 0.76 ಇದೆ. ಹಾಗೇ, ಸಾವಿನ ಪ್ರಮಾಣ ಶೇ.1.22ರಷ್ಟಿದ್ದು ಇದುವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,25,44,689. ಇದರೊಂದಿಗೆ ದೇಶದಲ್ಲಿ ಕೊರೊನಾ ಲಸಿಕೆ ನೀಡಿಕೆ ಅಭಿಯಾನವೂ ಕೂಡ ವೇಗವಾಗಿ ನಡೆಯುತ್ತಿದ್ದು, 189.48 ಕೋಟಿ ಜನರಿಗೆ ಎರಡೂ ಡೋಸ್​ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಇದುವರೆಗೆ 5,23,920 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಅತಿ ಹೆಚ್ಚು ಸಾವು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ. ಅಲ್ಲಿ ಇವತ್ತಿನವರೆ 1,47,845 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಅದಾದ ಬಳಿಕ ಕೇರಳದಲ್ಲಿ 69,112, ಕರ್ನಾಟಕದಲ್ಲಿ 40,102,  ತಮಿಳುನಾಡಲ್ಲಿ 38,025, ದೆಹಲಿಯಲ್ಲಿ 26,176 ಮತ್ತು ಉತ್ತರಪ್ರದೇಶದಿಂದ 23,508, ಪಶ್ಚಿಮ ಬಂಗಾಳದಲ್ಲಿ  21,202 ಜನರು ಸಾವನ್ನಪ್ಪಿದ್ದಾರೆ. ಇಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ ಶೇ70ರಷ್ಟು ಜನರಿಗೆ ಬೇರೆ ಕೆಲವು ಕಾಯಿಲೆಗಳು ಇದ್ದವು ಎಂಬುದನ್ನು ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನಷ್ಟು ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Wed, 4 May 22

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ