AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ 33 ಜಿಲ್ಲೆಗಳು ಕೊರೊನಾ ಮುಕ್ತ; ಸಕ್ರಿಯ ಪ್ರಕರಣಗಳ ಸಂಖ್ಯೆ ಸೊನ್ನೆ

Uttar Pradesh: ಉತ್ತರ ಪ್ರದೇಶದಲ್ಲಿ 199 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಹಾಗೂ ಕೊವಿಡ್ ಪಾಸಿಟಿವಿಟಿ ದರ 0.01 ಶೇಕಡಾಕ್ಕಿಂತಲೂ ಇಳಿಕೆ ಕಂಡಿದೆ. ಕೊವಿಡ್​ನಿಂದ ಗುಣಮುಖರಾಗುವ ಪ್ರಮಾಣ 98.7 ಶೇಕಡಾಗೆ ಹೆಚ್ಚಿದೆ.

ಉತ್ತರ ಪ್ರದೇಶದ 33 ಜಿಲ್ಲೆಗಳು ಕೊರೊನಾ ಮುಕ್ತ; ಸಕ್ರಿಯ ಪ್ರಕರಣಗಳ ಸಂಖ್ಯೆ ಸೊನ್ನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 10, 2021 | 4:20 PM

Share

ದೆಹಲಿ: ಕೊರೊನಾ ಸೋಂಕಿನ ಮೂರನೇ ಅಲೆ ಎಂಬ ಆತಂಕದ ನಡುವೆ ಹಾಗೂ ಎರಡನೇ ಅಲೆಯ ಪ್ರಕರಣಗಳ ಇಳಿಕೆಯ ಹಂತದಲ್ಲಿ ಭಾರತ ಇದೆ. ಬಹುತೇಕ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಳುವಂತೆ ಕಂಡುಬರುತ್ತಿದೆ. ಮೂರನೇ ಅಲೆ ಎದುರಾಗದೇ ಇರಲಿ ಎಂಬ ಆಶಯದೊಂದಿಗೆ ಜನರು ಜೀವನ ನಡೆಸುತ್ತಿದ್ದಾರೆ. ಲಸಿಕೆ ನೀಡಿಕೆ ಪ್ರಕ್ರಿಯೆ ಕೂಡ ವೇಗ ಭರದಿಂದ ನಡೆಯುತ್ತಿದೆ. ಈ ಮಧ್ಯೆ ಒಳ್ಳೆ ಸುದ್ದಿಯೊಂದು ಕೇಳಿಬಂದಿದೆ. ಅದೇನೆಂದರೆ, ಉತ್ತರ ಪ್ರದೇಶದ 33 ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಸೋಂಕು ಪ್ರಕರಣಗಳು ಸಕ್ರಿಯವಾಗಿಲ್ಲ. ಈ ಬಗ್ಗೆ, ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

ಉತ್ತರ ಪ್ರದೇಶದ 33 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿಲ್ಲ. ಹಾಗೂ ಕಳೆದ 24 ಗಂಟೆಗಳಲ್ಲಿ ಸುಮಾರು 67 ಜಿಲ್ಲೆಗಳಲ್ಲಿ ಒಂದೇ ಒಂದು ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಕೊರೊನಾ ಸೋಂಕು ಮುಕ್ತವಾಗಿರುವ 33 ಜಿಲ್ಲೆಗಳ ಪೈಕಿ ಆಲಿಘರ್, ಅಮ್ರೊಹಾ, ಅಯೋಧ್ಯಾ, ಬಾಘ್​ಪತ್, ಬಲ್ಲಿಯಾ, ಬಲ್ರಾಮ್​ಪುರ್, ಬಂಡಾ, ಬಸ್ತಿ, ಬಹ್ರಾಯ್ಚ್​, ಬಿಜ್ನೂರ್, ಭಡೋಹಿ, ಚಿತ್ರಕೂಟ್, ಚಂಡೌಳಿ, ಎಟಾಹ್, ಡೆಒರಿಯಾ, ಫತೇಪುರ್, ಘಾಜಿಪುರ್, ಗೋಂಡಾ, ಹಮೀರ್​ಪುರ್, ಹಪುರ್, ಹರ್ದೊಯಿ, ಹತ್ರಾಸ್, ಕಾಸ್​ಗಂಜ್, ಲಲಿತ್​ಪುರ್ ಮತ್ತು ಮಹೋಬಾ ಇದೆ. ಮೊರಾದಾಬಾದ್, ಮುಜಾಫರ್​ನಗರ್, ಪಿಲಿಭಿಟ್, ರಾಂಪುರ್, ಸಹರನ್​ಪುರ್, ಶಾಮ್ಲಿ, ಸಿದ್ಧಾರ್ಥ್ ನಗರ್, ಸೊನ್​ಭದ್ರಾ ಕೂಡ ಇದೆ.

ಒಟ್ಟಾರೆ, ರಾಜ್ಯದಲ್ಲಿ 199 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಹಾಗೂ ಕೊವಿಡ್ ಪಾಸಿಟಿವಿಟಿ ದರ 0.01 ಶೇಕಡಾಕ್ಕಿಂತಲೂ ಇಳಿಕೆ ಕಂಡಿದೆ. ಕೊವಿಡ್​ನಿಂದ ಗುಣಮುಖರಾಗುವ ಪ್ರಮಾಣ 98.7 ಶೇಕಡಾಗೆ ಹೆಚ್ಚಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 11 ಕೊರೊನಾ ಪ್ರಕರಣಗಳು ದಾಖಲಾಗಿವೆ ಹಾಗೂ ಯಾವುದೇ ಸಾವು ಸಂಭವಿಸಿಲ್ಲ.

ಕೊರೊನಾ ಬಗ್ಗೆ 2.26 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿತ್ತು. ಅವುಗಳಲ್ಲಿ ಕೇವಲ 199 ಮಾದರಿಗಳು ಪಾಸಿಟಿವ್ ಆಗಿದೆ. ಶುಕ್ರವಾರದ ಮಾಹಿತಿಯಂತೆ ಉತ್ತರ ಪ್ರದೇಶ ಇದುವರೆಗೆ ಒಟ್ಟು 7.42 ಕೊರೊನಾ ಪರೀಕ್ಷೆ ನಡೆಸಿದೆ. ಉತ್ತರ ಪ್ರದೇಶದ ಲಸಿಕೆ ನೀಡಿಕೆ ವಿವರಣೆ ನೀಡಲಾಗಿದೆ. ಅದರಂತೆ ರಾಜ್ಯದ ಸುಮಾರು 7 ಕೋಟಿ ಜನರು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಕಳೆದ 2 ಗಂಟೆಗಳಲ್ಲಿ 12 ಲಕ್ಷ ಮಂದಿ ಕೊವಿಡ್19 ವಿರುದ್ಧದ ಲಸಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Delta Sub-lineages in Bangalore: ರಾಜ್ಯದ ಜನರೇ ಎಚ್ಚರ ಎಚ್ಚರ, ಪತ್ತೆಯಾಗಿದೆ ಕೊರೊನಾ ಉಪ ರೂಪಾಂತರಿ!

ಇದನ್ನೂ ಓದಿ: ಕೊವಿಡ್ ಲಸಿಕೆ ಅಭಿಯಾನಕ್ಕೆ ಮುಂದಿನ ತಿಂಗಳೇ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಯೂ ಸೇರ್ಪಡೆಯಾಗುವ ಸಾಧ್ಯತೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ