AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ 33 ಜಿಲ್ಲೆಗಳು ಕೊರೊನಾ ಮುಕ್ತ; ಸಕ್ರಿಯ ಪ್ರಕರಣಗಳ ಸಂಖ್ಯೆ ಸೊನ್ನೆ

Uttar Pradesh: ಉತ್ತರ ಪ್ರದೇಶದಲ್ಲಿ 199 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಹಾಗೂ ಕೊವಿಡ್ ಪಾಸಿಟಿವಿಟಿ ದರ 0.01 ಶೇಕಡಾಕ್ಕಿಂತಲೂ ಇಳಿಕೆ ಕಂಡಿದೆ. ಕೊವಿಡ್​ನಿಂದ ಗುಣಮುಖರಾಗುವ ಪ್ರಮಾಣ 98.7 ಶೇಕಡಾಗೆ ಹೆಚ್ಚಿದೆ.

ಉತ್ತರ ಪ್ರದೇಶದ 33 ಜಿಲ್ಲೆಗಳು ಕೊರೊನಾ ಮುಕ್ತ; ಸಕ್ರಿಯ ಪ್ರಕರಣಗಳ ಸಂಖ್ಯೆ ಸೊನ್ನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 10, 2021 | 4:20 PM

Share

ದೆಹಲಿ: ಕೊರೊನಾ ಸೋಂಕಿನ ಮೂರನೇ ಅಲೆ ಎಂಬ ಆತಂಕದ ನಡುವೆ ಹಾಗೂ ಎರಡನೇ ಅಲೆಯ ಪ್ರಕರಣಗಳ ಇಳಿಕೆಯ ಹಂತದಲ್ಲಿ ಭಾರತ ಇದೆ. ಬಹುತೇಕ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಳುವಂತೆ ಕಂಡುಬರುತ್ತಿದೆ. ಮೂರನೇ ಅಲೆ ಎದುರಾಗದೇ ಇರಲಿ ಎಂಬ ಆಶಯದೊಂದಿಗೆ ಜನರು ಜೀವನ ನಡೆಸುತ್ತಿದ್ದಾರೆ. ಲಸಿಕೆ ನೀಡಿಕೆ ಪ್ರಕ್ರಿಯೆ ಕೂಡ ವೇಗ ಭರದಿಂದ ನಡೆಯುತ್ತಿದೆ. ಈ ಮಧ್ಯೆ ಒಳ್ಳೆ ಸುದ್ದಿಯೊಂದು ಕೇಳಿಬಂದಿದೆ. ಅದೇನೆಂದರೆ, ಉತ್ತರ ಪ್ರದೇಶದ 33 ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಸೋಂಕು ಪ್ರಕರಣಗಳು ಸಕ್ರಿಯವಾಗಿಲ್ಲ. ಈ ಬಗ್ಗೆ, ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

ಉತ್ತರ ಪ್ರದೇಶದ 33 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿಲ್ಲ. ಹಾಗೂ ಕಳೆದ 24 ಗಂಟೆಗಳಲ್ಲಿ ಸುಮಾರು 67 ಜಿಲ್ಲೆಗಳಲ್ಲಿ ಒಂದೇ ಒಂದು ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಕೊರೊನಾ ಸೋಂಕು ಮುಕ್ತವಾಗಿರುವ 33 ಜಿಲ್ಲೆಗಳ ಪೈಕಿ ಆಲಿಘರ್, ಅಮ್ರೊಹಾ, ಅಯೋಧ್ಯಾ, ಬಾಘ್​ಪತ್, ಬಲ್ಲಿಯಾ, ಬಲ್ರಾಮ್​ಪುರ್, ಬಂಡಾ, ಬಸ್ತಿ, ಬಹ್ರಾಯ್ಚ್​, ಬಿಜ್ನೂರ್, ಭಡೋಹಿ, ಚಿತ್ರಕೂಟ್, ಚಂಡೌಳಿ, ಎಟಾಹ್, ಡೆಒರಿಯಾ, ಫತೇಪುರ್, ಘಾಜಿಪುರ್, ಗೋಂಡಾ, ಹಮೀರ್​ಪುರ್, ಹಪುರ್, ಹರ್ದೊಯಿ, ಹತ್ರಾಸ್, ಕಾಸ್​ಗಂಜ್, ಲಲಿತ್​ಪುರ್ ಮತ್ತು ಮಹೋಬಾ ಇದೆ. ಮೊರಾದಾಬಾದ್, ಮುಜಾಫರ್​ನಗರ್, ಪಿಲಿಭಿಟ್, ರಾಂಪುರ್, ಸಹರನ್​ಪುರ್, ಶಾಮ್ಲಿ, ಸಿದ್ಧಾರ್ಥ್ ನಗರ್, ಸೊನ್​ಭದ್ರಾ ಕೂಡ ಇದೆ.

ಒಟ್ಟಾರೆ, ರಾಜ್ಯದಲ್ಲಿ 199 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಹಾಗೂ ಕೊವಿಡ್ ಪಾಸಿಟಿವಿಟಿ ದರ 0.01 ಶೇಕಡಾಕ್ಕಿಂತಲೂ ಇಳಿಕೆ ಕಂಡಿದೆ. ಕೊವಿಡ್​ನಿಂದ ಗುಣಮುಖರಾಗುವ ಪ್ರಮಾಣ 98.7 ಶೇಕಡಾಗೆ ಹೆಚ್ಚಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 11 ಕೊರೊನಾ ಪ್ರಕರಣಗಳು ದಾಖಲಾಗಿವೆ ಹಾಗೂ ಯಾವುದೇ ಸಾವು ಸಂಭವಿಸಿಲ್ಲ.

ಕೊರೊನಾ ಬಗ್ಗೆ 2.26 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿತ್ತು. ಅವುಗಳಲ್ಲಿ ಕೇವಲ 199 ಮಾದರಿಗಳು ಪಾಸಿಟಿವ್ ಆಗಿದೆ. ಶುಕ್ರವಾರದ ಮಾಹಿತಿಯಂತೆ ಉತ್ತರ ಪ್ರದೇಶ ಇದುವರೆಗೆ ಒಟ್ಟು 7.42 ಕೊರೊನಾ ಪರೀಕ್ಷೆ ನಡೆಸಿದೆ. ಉತ್ತರ ಪ್ರದೇಶದ ಲಸಿಕೆ ನೀಡಿಕೆ ವಿವರಣೆ ನೀಡಲಾಗಿದೆ. ಅದರಂತೆ ರಾಜ್ಯದ ಸುಮಾರು 7 ಕೋಟಿ ಜನರು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಕಳೆದ 2 ಗಂಟೆಗಳಲ್ಲಿ 12 ಲಕ್ಷ ಮಂದಿ ಕೊವಿಡ್19 ವಿರುದ್ಧದ ಲಸಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Delta Sub-lineages in Bangalore: ರಾಜ್ಯದ ಜನರೇ ಎಚ್ಚರ ಎಚ್ಚರ, ಪತ್ತೆಯಾಗಿದೆ ಕೊರೊನಾ ಉಪ ರೂಪಾಂತರಿ!

ಇದನ್ನೂ ಓದಿ: ಕೊವಿಡ್ ಲಸಿಕೆ ಅಭಿಯಾನಕ್ಕೆ ಮುಂದಿನ ತಿಂಗಳೇ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಯೂ ಸೇರ್ಪಡೆಯಾಗುವ ಸಾಧ್ಯತೆ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!