AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದಲ್ಲಿ ಮೂವರು ಮಾವೋವಾದಿಗಳ ಎನ್​ಕೌಂಟರ್, 33 ನಕ್ಸಲೀಯರು ಶರಣಾಗತಿ

ಛತ್ತೀಸ್​ಗಢ ರಾಜ್ಯದ ಬಸ್ತಾರ್ ಪ್ರದೇಶದ ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ 2 ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಮೂವರು ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಛತ್ತೀಸ್‌ಗಢ ಪೊಲೀಸರು ತಿಳಿಸಿದ್ದಾರೆ. ಎರಡೂ ಎನ್‌ಕೌಂಟರ್ ಸ್ಥಳಗಳಿಂದ ಶಸ್ತ್ರಾಸ್ತ್ರಗಳು, ಸ್ಫೋಟಕಗಳ ಸಂಗ್ರಹ ಮತ್ತು ಮಾವೋವಾದಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢದಲ್ಲಿ ಮೂವರು ಮಾವೋವಾದಿಗಳ ಎನ್​ಕೌಂಟರ್, 33 ನಕ್ಸಲೀಯರು ಶರಣಾಗತಿ
ನಕ್ಸಲರು
Follow us
ಸುಷ್ಮಾ ಚಕ್ರೆ
|

Updated on: May 25, 2024 | 9:36 PM

ಬಸ್ತಾರ್: ಛತ್ತೀಸ್​ಗಢದ ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ 2 ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಮೂವರು ನಕ್ಸಲರು (Naxalites) ಮೃತಪಟ್ಟಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಹತರಾದ ಮೂವರು ಮಾವೋವಾದಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಛತ್ತೀಸ್‌ಗಢ ಪೊಲೀಸರು ತಿಳಿಸಿದ್ದಾರೆ. ಇದರ ನಡುವೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 33 ನಕ್ಸಲೀಯರು ಭದ್ರತಾ ಪಡೆಯ ಸಿಬ್ಬಂದಿ ಮುಂದೆ ಶರಣಾಗಿದ್ದಾರೆ.

ಶರಣಾದ ನಕ್ಸಲೀಯರಿಗೆ ತಲಾ 25,000 ರೂ. ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಮೂವರನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ರೂ.ಗಳ ಬಹುಮಾನವನ್ನು ನೀಡುವುದಾಗಿ ಭದ್ರತಾ ಪಡೆ ಘೋಷಿಸಿತ್ತು. ಇದೀಗ ಅವರೇ ಶರಣಾಗಿದ್ದಾರೆ.

ಇದನ್ನೂ ಓದಿ: Chhattisgarh Encounter: ಛತ್ತೀಸ್‌ಗಢದಲ್ಲಿ ಗುಂಡಿನ ಚಕಮಕಿ; 7 ನಕ್ಸಲರ ಎನ್​ಕೌಂಟರ್

ಶರಣಾದ 33 ಕಾರ್ಯಕರ್ತರ ಪೈಕಿ ಇಬ್ಬರು ಮಹಿಳೆಯರು ಮಾವೋವಾದಿಗಳ ಗಂಗಲೂರು ಪ್ರದೇಶ ಸಮಿತಿಯ ವಿವಿಧ ವಿಭಾಗಗಳಲ್ಲಿ ಸಕ್ರಿಯರಾಗಿದ್ದರು. ರಾಜು ಹೇಮ್ಲಾ ಅಲಿಯಾಸ್ ಠಾಕೂರ್ (35), PLGA (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಬೆಟಾಲಿಯನ್ ನಂ. 1, ಮತ್ತು ಸಮೋ ಕರ್ಮ, ಪ್ಲಟೂನ್ ನಂ. ಒಬ್ಬ ಮಾವೋವಾದಿಗಳನ್ನು ಹಿಡಿದವರಿಗೆ ತಲಾ 2 ಲಕ್ಷ ರೂ. ಬಹುಮಾನವನ್ನು ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಮಾವೋವಾದಿಗಳ ಆರ್‌ಪಿಸಿ (ಕ್ರಾಂತಿಕಾರಿ ಪಕ್ಷದ ಸಮಿತಿ) ಜನತಾ ಸರ್ಕಾರ್ ಮುಖ್ಯಸ್ಥ ಸುದ್ರು ಪುಣೆಂ ಅವರನ್ನು ಹಿಡಿದುಕೊಟ್ಟವರಿಗೆ 1 ಲಕ್ಷ ರೂ. ಘೋಷಿಸಲಾಗಿತ್ತು.

ಬಹುಮಾನವನ್ನು ಹೊತ್ತಿರುವ ಮೂವರು ಈ ಹಿಂದೆ ಭದ್ರತಾ ಸಿಬ್ಬಂದಿಯ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಜಿಲ್ಲೆಯಲ್ಲಿ ಈ ವರ್ಷ 109 ನಕ್ಸಲೀಯರು ಹಿಂಸಾಚಾರ ತ್ಯಜಿಸಿದ್ದು, 189 ಮಂದಿಯನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ