AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ ಮಾಡಿದವರು ಎಷ್ಟು ಮಂದಿ?-ಇಲ್ಲಿದೆ ನೋಡಿ ಕೇಂದ್ರ ನೀಡಿದ ಮಾಹಿತಿ

ಕಳೆದ ವರ್ಷ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಇದುವರೆಗೆ ಹೊರಗಿನವರು ಇಬ್ಬರು ಜಮ್ಮು-ಕಾಶ್ಮೀರದಲ್ಲಿ ಭೂಮಿ ಖರೀದಿ ಮಾಡಿದ್ದಾಗಿ ಹೇಳಿತ್ತು. ಆದರೆ ಒಂದೇ ವರ್ಷದಲ್ಲಿ 32 ಜನರು ಹೆಚ್ಚಾಗಿದ್ದು, ಈ ಬಾರಿಯ ವಿವರಣೆಯಿಂದ ಗೊತ್ತಾಗಿದೆ.

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ ಮಾಡಿದವರು ಎಷ್ಟು ಮಂದಿ?-ಇಲ್ಲಿದೆ ನೋಡಿ ಕೇಂದ್ರ ನೀಡಿದ ಮಾಹಿತಿ
ಜಮ್ಮು-ಕಾಶ್ಮೀರ
TV9 Web
| Edited By: |

Updated on: Mar 29, 2022 | 3:26 PM

Share

ಜಮ್ಮು-ಕಾಶ್ಮೀರದಲ್ಲಿ 2019ರಲ್ಲಿ ಆರ್ಟಿಕಲ್​ 370ನ್ನು (Article 370) ರದ್ದುಗೊಳಿಸಿದ ಮೇಲೆ ಇಲ್ಲಿಯವರೆಗೆ ಒಟ್ಟು 34 ಜನರು ಇಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ಇಂದು ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ. ಜಮ್ಮು-ಕಾಶ್ಮೀರಕ್ಕೆ (Jammu-Kashmir) ವಿಶೇಷ ಸ್ಥಾನ-ಮಾನ ಕಲ್ಪಿಸಿದ್ದ ಆರ್ಟಿಕಲ್​ 370ನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದುಗೊಳಿಸಿದೆ. ಹೀಗಾಗಿ ಅಲ್ಲಿ ದೇಶದ ವಿವಿಧ ಭಾಗಗಳ ಜನರೂ ಆಸ್ತಿ, ಭೂಮಿ ಖರೀದಿ ಮಾಡಬಹುದಾಗಿದೆ. ಆದರೆ ಈ ಸ್ಥಾನಮಾನ ಇದ್ದಾಗ  ಇಂದು ಸಂಸತ್ತಿನಲ್ಲಿ ಲಿಖಿತ ದಾಖಲೆಗೊಂದಿಗೆ ಮಾಹಿತಿ ನೀಡಿದ ರೈ, ಜಮ್ಮು, ರಿಯಾಸಿ, ಉಧಾಂಪುರ್ ಮತ್ತು ಗಂದರ್ಬಾಲ್​​ಗಳಲ್ಲಿ ಆಸ್ತಿ ಖರೀದಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಆಸ್ತಿಗಳ ಬಗೆಗಾಗಲೀ, ಅವುಗಳ ಮಾಲೀಕರ ಬಗ್ಗೆಯಾಗಲೀ ತುಂಬ ವಿವರ ನೀಡಿಲ್ಲ.

ಕಳೆದ ವರ್ಷ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಇದುವರೆಗೆ ಹೊರಗಿನವರು ಇಬ್ಬರು ಜಮ್ಮು-ಕಾಶ್ಮೀರದಲ್ಲಿ ಭೂಮಿ ಖರೀದಿ ಮಾಡಿದ್ದಾಗಿ ಹೇಳಿತ್ತು. ಆದರೆ ಒಂದೇ ವರ್ಷದಲ್ಲಿ 32 ಜನರು ಹೆಚ್ಚಾಗಿದ್ದು, ಈ ಬಾರಿಯ ವಿವರಣೆಯಿಂದ ಗೊತ್ತಾಗಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್​ 370ನ್ನು ರದ್ದುಗೊಳಿಸಿದ ಮೇಲೆ ಕೇಂದ್ರ ಸರ್ಕಾರ ಇಲ್ಲಿನ ಭೂಮಿ ಖರೀದಿ ನಿಯಮಗಳನ್ನು ಬದಲಾವಣೆ ಮಾಡಿದೆ. ಜಮ್ಮು-ಕಾಶ್ಮೀರದ ಅಭಿವೃದ್ಧಿ ಕಾಯ್ದೆಯ ಸೆಕ್ಷನ್​ 17ರಲ್ಲಿದ್ದ ರಾಜ್ಯದ ಶಾಶ್ವತ ನಿವಾಸಿ ಎಂಬ ಶಬ್ದವನ್ನು ಕೈಬಿಟ್ಟಿದೆ. ಇದು ಹೊರಗಿನವರು ಇಲ್ಲಿನ ಭೂಮಿ ಖರೀದಿ ಮಾಡುವುದಕ್ಕೆ ಸಂಬಂಧಪಟ್ಟು ಇರುವ ಸೆಕ್ಷನ್​. ಅದರಲ್ಲಿ ಬದಲಾವಣೆ ಮಾಡಿದ ಬಳಿಕ ಕೃಷಿಯೇತರ ಭೂಮಿಯನ್ನು ಹೊರಗಿನವರೂ ಖರೀದಿ ಮಾಡಲು ಅನುಮತಿ ಸಿಕ್ಕಿದೆ.

ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನ ಮಾನ ರದ್ದುಗೊಳಿಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು ಎಲ್ಲರಿಗೂ ನೆನಪಿದೆ. ಅಲ್ಲಿನ ಸ್ಥಳೀಯ ರಾಜಕೀಯ ಪಕ್ಷಗಳ ನಾಯಕರಂತೂ ಈಗಲೂ ಸಹ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಅಲ್ಲಿನ ಭೂಮಿ ಖರೀದಿ ನಿಯಮಗಳ ಬದಲಾವಣೆ ಮಾಡಿದ್ದೂ ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ 2ನೇ ದಿನಕ್ಕೆ; ರೈತರು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಆಗ್ರಹ

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ