AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ ಮಾಡಿದವರು ಎಷ್ಟು ಮಂದಿ?-ಇಲ್ಲಿದೆ ನೋಡಿ ಕೇಂದ್ರ ನೀಡಿದ ಮಾಹಿತಿ

ಕಳೆದ ವರ್ಷ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಇದುವರೆಗೆ ಹೊರಗಿನವರು ಇಬ್ಬರು ಜಮ್ಮು-ಕಾಶ್ಮೀರದಲ್ಲಿ ಭೂಮಿ ಖರೀದಿ ಮಾಡಿದ್ದಾಗಿ ಹೇಳಿತ್ತು. ಆದರೆ ಒಂದೇ ವರ್ಷದಲ್ಲಿ 32 ಜನರು ಹೆಚ್ಚಾಗಿದ್ದು, ಈ ಬಾರಿಯ ವಿವರಣೆಯಿಂದ ಗೊತ್ತಾಗಿದೆ.

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ ಮಾಡಿದವರು ಎಷ್ಟು ಮಂದಿ?-ಇಲ್ಲಿದೆ ನೋಡಿ ಕೇಂದ್ರ ನೀಡಿದ ಮಾಹಿತಿ
ಜಮ್ಮು-ಕಾಶ್ಮೀರ
TV9 Web
| Edited By: |

Updated on: Mar 29, 2022 | 3:26 PM

Share

ಜಮ್ಮು-ಕಾಶ್ಮೀರದಲ್ಲಿ 2019ರಲ್ಲಿ ಆರ್ಟಿಕಲ್​ 370ನ್ನು (Article 370) ರದ್ದುಗೊಳಿಸಿದ ಮೇಲೆ ಇಲ್ಲಿಯವರೆಗೆ ಒಟ್ಟು 34 ಜನರು ಇಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ಇಂದು ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ. ಜಮ್ಮು-ಕಾಶ್ಮೀರಕ್ಕೆ (Jammu-Kashmir) ವಿಶೇಷ ಸ್ಥಾನ-ಮಾನ ಕಲ್ಪಿಸಿದ್ದ ಆರ್ಟಿಕಲ್​ 370ನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದುಗೊಳಿಸಿದೆ. ಹೀಗಾಗಿ ಅಲ್ಲಿ ದೇಶದ ವಿವಿಧ ಭಾಗಗಳ ಜನರೂ ಆಸ್ತಿ, ಭೂಮಿ ಖರೀದಿ ಮಾಡಬಹುದಾಗಿದೆ. ಆದರೆ ಈ ಸ್ಥಾನಮಾನ ಇದ್ದಾಗ  ಇಂದು ಸಂಸತ್ತಿನಲ್ಲಿ ಲಿಖಿತ ದಾಖಲೆಗೊಂದಿಗೆ ಮಾಹಿತಿ ನೀಡಿದ ರೈ, ಜಮ್ಮು, ರಿಯಾಸಿ, ಉಧಾಂಪುರ್ ಮತ್ತು ಗಂದರ್ಬಾಲ್​​ಗಳಲ್ಲಿ ಆಸ್ತಿ ಖರೀದಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಆಸ್ತಿಗಳ ಬಗೆಗಾಗಲೀ, ಅವುಗಳ ಮಾಲೀಕರ ಬಗ್ಗೆಯಾಗಲೀ ತುಂಬ ವಿವರ ನೀಡಿಲ್ಲ.

ಕಳೆದ ವರ್ಷ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಇದುವರೆಗೆ ಹೊರಗಿನವರು ಇಬ್ಬರು ಜಮ್ಮು-ಕಾಶ್ಮೀರದಲ್ಲಿ ಭೂಮಿ ಖರೀದಿ ಮಾಡಿದ್ದಾಗಿ ಹೇಳಿತ್ತು. ಆದರೆ ಒಂದೇ ವರ್ಷದಲ್ಲಿ 32 ಜನರು ಹೆಚ್ಚಾಗಿದ್ದು, ಈ ಬಾರಿಯ ವಿವರಣೆಯಿಂದ ಗೊತ್ತಾಗಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್​ 370ನ್ನು ರದ್ದುಗೊಳಿಸಿದ ಮೇಲೆ ಕೇಂದ್ರ ಸರ್ಕಾರ ಇಲ್ಲಿನ ಭೂಮಿ ಖರೀದಿ ನಿಯಮಗಳನ್ನು ಬದಲಾವಣೆ ಮಾಡಿದೆ. ಜಮ್ಮು-ಕಾಶ್ಮೀರದ ಅಭಿವೃದ್ಧಿ ಕಾಯ್ದೆಯ ಸೆಕ್ಷನ್​ 17ರಲ್ಲಿದ್ದ ರಾಜ್ಯದ ಶಾಶ್ವತ ನಿವಾಸಿ ಎಂಬ ಶಬ್ದವನ್ನು ಕೈಬಿಟ್ಟಿದೆ. ಇದು ಹೊರಗಿನವರು ಇಲ್ಲಿನ ಭೂಮಿ ಖರೀದಿ ಮಾಡುವುದಕ್ಕೆ ಸಂಬಂಧಪಟ್ಟು ಇರುವ ಸೆಕ್ಷನ್​. ಅದರಲ್ಲಿ ಬದಲಾವಣೆ ಮಾಡಿದ ಬಳಿಕ ಕೃಷಿಯೇತರ ಭೂಮಿಯನ್ನು ಹೊರಗಿನವರೂ ಖರೀದಿ ಮಾಡಲು ಅನುಮತಿ ಸಿಕ್ಕಿದೆ.

ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನ ಮಾನ ರದ್ದುಗೊಳಿಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು ಎಲ್ಲರಿಗೂ ನೆನಪಿದೆ. ಅಲ್ಲಿನ ಸ್ಥಳೀಯ ರಾಜಕೀಯ ಪಕ್ಷಗಳ ನಾಯಕರಂತೂ ಈಗಲೂ ಸಹ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಅಲ್ಲಿನ ಭೂಮಿ ಖರೀದಿ ನಿಯಮಗಳ ಬದಲಾವಣೆ ಮಾಡಿದ್ದೂ ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ 2ನೇ ದಿನಕ್ಕೆ; ರೈತರು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಆಗ್ರಹ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು