AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ

ರಾಜಸ್ಥಾನದ ಡುಂಗರ್​​ಪುರ ಜಿಲ್ಲೆಯಲ್ಲಿ ಕಳೆದ 10-12ದಿನಗಳಲ್ಲಿ 18ವರ್ಷಕ್ಕಿಂತ ಕೆಳಗಿನ, 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ದೃಢಪಟ್ಟಿದೆ.

ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 5:16 PM

Share

ಮಾರಕ ಕೊವಿಡ್ 19 ಎರಡನೇ ಅಲೆಯ ವಿರುದ್ಧ ಭಾರತ ಅವಿರತವಾಗಿ ಹೋರಾಡುತ್ತಿದೆ. ಹೀಗಿರುವಾಗ ಕೊವಿಡ್​ ಮೂರನೇ ಅಲೆ ಬಂದರೆ ಅದು ಮಕ್ಕಳಿಗೇ ಆಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಈ ಮಧ್ಯೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 10-12ವರ್ಷದವರೆಗಿನ ಸುಮಾರು 345 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಕಳೆದ 10ದಿನಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಕಾಣಿಸಿಕೊಂಡಿದ್ದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕೊರೊನಾ ಎರಡನೇ ಅಲೆ, ಮೊದಲ ಅಲೆಗಿಂತಲೂ ವಿಭಿನ್ನವಾಗಿದ್ದು, ಪ್ರಸರಣದ ಪ್ರಭಾವ ಹೆಚ್ಚಾಗಿದೆ. ಹಳ್ಳಿಗಳಿಗೂ ವ್ಯಾಪಿಸಿದೆ. ಯುವಜನರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಷ್ಟೇ ಅಲ್ಲ, ಆರೋಗ್ಯವಂತ ಯುವಜನರೂ ಕೂಡ ಕೊರೊನಾದಿಂದ ಜೀವ ಬಿಡುತ್ತಿದ್ದಾರೆ.

ಡುಂಗರ್​ಪುರದಲ್ಲಿ 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊವಿಡ್​ ಸೋಂಕು ಇನ್ನು ರಾಜಸ್ಥಾನದ ಡುಂಗರ್​​ಪುರ ಜಿಲ್ಲೆಯಲ್ಲಿ ಕಳೆದ 10-12ದಿನಗಳಲ್ಲಿ 18ವರ್ಷಕ್ಕಿಂತ ಕೆಳಗಿನ, 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ದೃಢಪಟ್ಟಿದೆ. ಡುಂಗರ್​ಪುರ ಒಂದು ಗಡಿ ಜಿಲ್ಲೆಯಾಗಿದೆ. ವಲಸಿಗರು ಹೆಚ್ಚಾಗಿ ಇಲ್ಲಿಗೆ ಬರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸೋಂಕಿನ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಆಕ್ಸಿಜನ್​ ಸಾಂದ್ರಕಗಳನ್ನು ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಮಕ್ಕಳ ತಜ್ಞರು ಗಮನವಹಿಸುತ್ತಿದ್ದಾರೆ. ಅಗತ್ಯವಿರುವ ಔಷಧಿಗಳನ್ನೂ ಹಂಚಿಕೆ ಮಾಡಲಾಗಿದೆ ಎಂದು ಡುಂಗರ್​ಪುರ ಸಿಎಂಎಚ್​​ಒ ಡಾ. ರಾಜೇಶ್​ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಅನಗತ್ಯವಾಗಿ ಸುತ್ತಾಡುವ ಸವಾರರಿಗೆ ವಿಭಿನ್ನ ರೀತಿಯಲ್ಲಿ ಎಚ್ಚರಿಕೆ; ಹಾರ ಹಾಕಿ, ಕುಂಕುಮ ಇಟ್ಟು, ಆರತಿ ಬೆಳಗಿ ಸನ್ಮಾನ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ