AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ

ರಾಜಸ್ಥಾನದ ಡುಂಗರ್​​ಪುರ ಜಿಲ್ಲೆಯಲ್ಲಿ ಕಳೆದ 10-12ದಿನಗಳಲ್ಲಿ 18ವರ್ಷಕ್ಕಿಂತ ಕೆಳಗಿನ, 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ದೃಢಪಟ್ಟಿದೆ.

ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 5:16 PM

Share

ಮಾರಕ ಕೊವಿಡ್ 19 ಎರಡನೇ ಅಲೆಯ ವಿರುದ್ಧ ಭಾರತ ಅವಿರತವಾಗಿ ಹೋರಾಡುತ್ತಿದೆ. ಹೀಗಿರುವಾಗ ಕೊವಿಡ್​ ಮೂರನೇ ಅಲೆ ಬಂದರೆ ಅದು ಮಕ್ಕಳಿಗೇ ಆಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಈ ಮಧ್ಯೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 10-12ವರ್ಷದವರೆಗಿನ ಸುಮಾರು 345 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಕಳೆದ 10ದಿನಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಕಾಣಿಸಿಕೊಂಡಿದ್ದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕೊರೊನಾ ಎರಡನೇ ಅಲೆ, ಮೊದಲ ಅಲೆಗಿಂತಲೂ ವಿಭಿನ್ನವಾಗಿದ್ದು, ಪ್ರಸರಣದ ಪ್ರಭಾವ ಹೆಚ್ಚಾಗಿದೆ. ಹಳ್ಳಿಗಳಿಗೂ ವ್ಯಾಪಿಸಿದೆ. ಯುವಜನರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಷ್ಟೇ ಅಲ್ಲ, ಆರೋಗ್ಯವಂತ ಯುವಜನರೂ ಕೂಡ ಕೊರೊನಾದಿಂದ ಜೀವ ಬಿಡುತ್ತಿದ್ದಾರೆ.

ಡುಂಗರ್​ಪುರದಲ್ಲಿ 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊವಿಡ್​ ಸೋಂಕು ಇನ್ನು ರಾಜಸ್ಥಾನದ ಡುಂಗರ್​​ಪುರ ಜಿಲ್ಲೆಯಲ್ಲಿ ಕಳೆದ 10-12ದಿನಗಳಲ್ಲಿ 18ವರ್ಷಕ್ಕಿಂತ ಕೆಳಗಿನ, 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ದೃಢಪಟ್ಟಿದೆ. ಡುಂಗರ್​ಪುರ ಒಂದು ಗಡಿ ಜಿಲ್ಲೆಯಾಗಿದೆ. ವಲಸಿಗರು ಹೆಚ್ಚಾಗಿ ಇಲ್ಲಿಗೆ ಬರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸೋಂಕಿನ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಆಕ್ಸಿಜನ್​ ಸಾಂದ್ರಕಗಳನ್ನು ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಮಕ್ಕಳ ತಜ್ಞರು ಗಮನವಹಿಸುತ್ತಿದ್ದಾರೆ. ಅಗತ್ಯವಿರುವ ಔಷಧಿಗಳನ್ನೂ ಹಂಚಿಕೆ ಮಾಡಲಾಗಿದೆ ಎಂದು ಡುಂಗರ್​ಪುರ ಸಿಎಂಎಚ್​​ಒ ಡಾ. ರಾಜೇಶ್​ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಅನಗತ್ಯವಾಗಿ ಸುತ್ತಾಡುವ ಸವಾರರಿಗೆ ವಿಭಿನ್ನ ರೀತಿಯಲ್ಲಿ ಎಚ್ಚರಿಕೆ; ಹಾರ ಹಾಕಿ, ಕುಂಕುಮ ಇಟ್ಟು, ಆರತಿ ಬೆಳಗಿ ಸನ್ಮಾನ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ