Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ

ರಾಜಸ್ಥಾನದ ಡುಂಗರ್​​ಪುರ ಜಿಲ್ಲೆಯಲ್ಲಿ ಕಳೆದ 10-12ದಿನಗಳಲ್ಲಿ 18ವರ್ಷಕ್ಕಿಂತ ಕೆಳಗಿನ, 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ದೃಢಪಟ್ಟಿದೆ.

ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 23, 2021 | 5:16 PM

ಮಾರಕ ಕೊವಿಡ್ 19 ಎರಡನೇ ಅಲೆಯ ವಿರುದ್ಧ ಭಾರತ ಅವಿರತವಾಗಿ ಹೋರಾಡುತ್ತಿದೆ. ಹೀಗಿರುವಾಗ ಕೊವಿಡ್​ ಮೂರನೇ ಅಲೆ ಬಂದರೆ ಅದು ಮಕ್ಕಳಿಗೇ ಆಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಈ ಮಧ್ಯೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 10-12ವರ್ಷದವರೆಗಿನ ಸುಮಾರು 345 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಕಳೆದ 10ದಿನಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಕಾಣಿಸಿಕೊಂಡಿದ್ದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕೊರೊನಾ ಎರಡನೇ ಅಲೆ, ಮೊದಲ ಅಲೆಗಿಂತಲೂ ವಿಭಿನ್ನವಾಗಿದ್ದು, ಪ್ರಸರಣದ ಪ್ರಭಾವ ಹೆಚ್ಚಾಗಿದೆ. ಹಳ್ಳಿಗಳಿಗೂ ವ್ಯಾಪಿಸಿದೆ. ಯುವಜನರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಷ್ಟೇ ಅಲ್ಲ, ಆರೋಗ್ಯವಂತ ಯುವಜನರೂ ಕೂಡ ಕೊರೊನಾದಿಂದ ಜೀವ ಬಿಡುತ್ತಿದ್ದಾರೆ.

ಡುಂಗರ್​ಪುರದಲ್ಲಿ 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊವಿಡ್​ ಸೋಂಕು ಇನ್ನು ರಾಜಸ್ಥಾನದ ಡುಂಗರ್​​ಪುರ ಜಿಲ್ಲೆಯಲ್ಲಿ ಕಳೆದ 10-12ದಿನಗಳಲ್ಲಿ 18ವರ್ಷಕ್ಕಿಂತ ಕೆಳಗಿನ, 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ದೃಢಪಟ್ಟಿದೆ. ಡುಂಗರ್​ಪುರ ಒಂದು ಗಡಿ ಜಿಲ್ಲೆಯಾಗಿದೆ. ವಲಸಿಗರು ಹೆಚ್ಚಾಗಿ ಇಲ್ಲಿಗೆ ಬರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸೋಂಕಿನ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಆಕ್ಸಿಜನ್​ ಸಾಂದ್ರಕಗಳನ್ನು ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಮಕ್ಕಳ ತಜ್ಞರು ಗಮನವಹಿಸುತ್ತಿದ್ದಾರೆ. ಅಗತ್ಯವಿರುವ ಔಷಧಿಗಳನ್ನೂ ಹಂಚಿಕೆ ಮಾಡಲಾಗಿದೆ ಎಂದು ಡುಂಗರ್​ಪುರ ಸಿಎಂಎಚ್​​ಒ ಡಾ. ರಾಜೇಶ್​ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಅನಗತ್ಯವಾಗಿ ಸುತ್ತಾಡುವ ಸವಾರರಿಗೆ ವಿಭಿನ್ನ ರೀತಿಯಲ್ಲಿ ಎಚ್ಚರಿಕೆ; ಹಾರ ಹಾಕಿ, ಕುಂಕುಮ ಇಟ್ಟು, ಆರತಿ ಬೆಳಗಿ ಸನ್ಮಾನ

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್