AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ಬೆಳಗ್ಗೆ ಎರಡು ಬಾರಿ ಭೂಕಂಪ..

Andaman and Nicobar: ಇತ್ತೀಚೆಗೆ ಹಲವು ಕಡೆಗಳಲ್ಲಿ ಭೂಕಂಪ ಉಂಟಾಗುತ್ತಿದೆ. ರಾಜಸ್ಥಾನದ ಬಿಕಾನೇರ್​​ನಲ್ಲಿ ಈಗಾಗಲೇ ಎರಡು ಬಾರಿ ಭೂಕಂಪವಾಗಿದೆ. ಈ ಎರಡೂ ಬಾರಿಯೂ ತೀವ್ರತೆ 5ಕ್ಕಿಂತ ಜಾಸ್ತಿಯಿತ್ತು.

ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ಬೆಳಗ್ಗೆ ಎರಡು ಬಾರಿ ಭೂಕಂಪ..
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 03, 2021 | 9:24 AM

Share

ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪ (Andaman and Nicobar)ದಲ್ಲಿ ಇಂದು ಬೆಳಗ್ಗೆ ಎರಡು ಕಡೆಗಳಲ್ಲಿ ಭೂಕಂಪ(Earthquake) ಉಂಟಾಗಿದೆ. ಮೊದಲ ಭೂಕಂಪ ಅಂಡಮಾನ್​ ಮತ್ತು ನಿಕೋಬಾರ್​ನ ಪೋರ್ಟ್​ಬ್ಲೇರ್​ ಬಳಿ ಉಂಟಾಗಿದ್ದು, ರಿಕ್ಟರ್​ ಮಾಪಕ (Rictor Scale)ದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇಲ್ಲಿ ಮುಂಜಾನೆ 6.27ರಹೊತ್ತಿಗೆ ಭೂಮಿ ನಡುಗಿದೆ.

ಒಮ್ಮೆ ಭೂಕಂಪ ನಿಂತರೂ ಮತ್ತೆ ಬೆಳಗ್ಗೆ 7.21ರ ಹೊತ್ತಿಗೆ ಮತ್ತೊಮ್ಮೆ ಭೂಮಿ ನಡುಗಿದೆ. ಆಗ ಅದರ ತೀವ್ರತೆ ಮತ್ತಷ್ಟು ಹೆಚ್ಚಾಗಿತ್ತು. ಅಂದರೆ ರಿಕ್ಟರ್​ ಮಾಪಕದಲ್ಲಿ 4.6ರಷ್ಟು ದಾಖಲಾಗಿದೆ ಎಂದು ಎನ್​​ಸಿಎಸ್​ ತಿಳಿಸಿದೆ.

ಇತ್ತೀಚೆಗೆ ಹಲವು ಕಡೆಗಳಲ್ಲಿ ಭೂಕಂಪ ಉಂಟಾಗುತ್ತಿದೆ. ರಾಜಸ್ಥಾನದ ಬಿಕಾನೇರ್​​ನಲ್ಲಿ ಈಗಾಗಲೇ ಎರಡು ಬಾರಿ ಭೂಕಂಪವಾಗಿದೆ. ಈ ಎರಡೂ ಬಾರಿಯೂ ತೀವ್ರತೆ 5ಕ್ಕಿಂತ ಜಾಸ್ತಿಯಿತ್ತು. ಹಾಗೇ ಮೇಘಾಲಯ, ಹೈದರಾಬಾದ್​​ಗಳಲ್ಲೂ ಭೂಮಿ ನಡುಗಿತ್ತು. ಈ ಮಧ್ಯೆ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಒಂದು ಆತಂಕಕಾರಿ ವರದಿಯನ್ನೂ ನೀಡಿದೆ. ದೇಶದ ಶೇ59ರಷ್ಟು ಭಾಗಗಳಲ್ಲಿ ವಿವಿಧ ರೀತಿಯ ಭೂಕಂಪನಗಳು ಸಂಭವಿಸುವ ಸಾಧ್ಯತೆ ಇರುವುದಾಗಿ ಎನ್​ಸಿಎಸ್​ ಮಾಹಿತಿ ನೀಡಿದೆ. ಸದ್ಯದವರೆಗೆ ಯಾವುದೇ ಪ್ರದೇಶದಲ್ಲಿ ಭೀಕರವಾಗಿ ಭೂಕಂಪನವಾಗಿಲ್ಲ ಎಂದೂ ತಿಳಿಸಿದೆ.

ಇದನ್ನೂ ಒದಿ:ಚಿತ್ರದುರ್ಗ: ಅಪ್ರಾಪ್ತೆ ಅತ್ಯಾಚಾರ-ಕೊಲೆ ಪ್ರಕರಣ ಸಂಬಂಧ ಆರೋಪಿ ಬಿಡುಗಡೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಯುವಕ ಅರೆಸ್ಟ್

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು