AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆರ್ಭಟದ ಮಧ್ಯೆ ಮಧ್ಯಾಹ್ನ ಅಪ್ಪಳಿಸಲಿದೆ ‘ಮಹಾ ಅಲೆ’..!

ಮುಂಬೈ: ಕೊರೊನಾ ಮಹಾಮಾರಿಯಿಂದ ವಾಣಿಜ್ಯ ನಗರಿ ಮುಂಬೈ ತತ್ತರಿಸಿಹೋಗಿದೆ. ವೈರಸ್​ ಆರ್ಭಟದಿಂದ ನಗರದಲ್ಲಿ ಪ್ರತಿದಿನ ಸಾವು ನೋವು ಸಂಭವಿಸುತ್ತಿದೆ. ಈ ಮಧ್ಯೆ ಮಳೆಗಾಲವು ಶುರುವಾಗಿದ್ದು ಇದೀಗ ಮುಂಬೈಗೆ ಮತ್ತೊಂದು ಕಂಟಕ ಎದುರಾಗಿದೆ. ಹೌದು, ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಮಧ್ಯೆ ಇಂದು ಬರೋಬ್ಬರಿ 4.67 ಮೀಟರ್​ ಎತ್ತರದ ಮಹಾ ಅಲೆಯೊಂದು (Tidal wave) ಮುಂಬೈ ಕಡಲತೀರಕ್ಕೆ ಅಪ್ಪಳಿಸಲಿದೆ ಎಂಬ ಸೂಚನೆ ಸಿಕ್ಕಿದೆ. ಮಧ್ಯಾಹ್ನ ಸುಮಾರು 1.30ಕ್ಕೆ ಈ ಮಹಾ ಅಲೆ ನಗರದ ಕಡಲ ತೀರಕ್ಕೆ ಅಪ್ಪಳಿಸಲಿದೆ ಎಂದು […]

ಕೊರೊನಾ ಆರ್ಭಟದ ಮಧ್ಯೆ ಮಧ್ಯಾಹ್ನ ಅಪ್ಪಳಿಸಲಿದೆ ‘ಮಹಾ ಅಲೆ’..!
KUSHAL V
| Updated By: |

Updated on:Jul 06, 2020 | 1:18 PM

Share

ಮುಂಬೈ: ಕೊರೊನಾ ಮಹಾಮಾರಿಯಿಂದ ವಾಣಿಜ್ಯ ನಗರಿ ಮುಂಬೈ ತತ್ತರಿಸಿಹೋಗಿದೆ. ವೈರಸ್​ ಆರ್ಭಟದಿಂದ ನಗರದಲ್ಲಿ ಪ್ರತಿದಿನ ಸಾವು ನೋವು ಸಂಭವಿಸುತ್ತಿದೆ. ಈ ಮಧ್ಯೆ ಮಳೆಗಾಲವು ಶುರುವಾಗಿದ್ದು ಇದೀಗ ಮುಂಬೈಗೆ ಮತ್ತೊಂದು ಕಂಟಕ ಎದುರಾಗಿದೆ.

ಹೌದು, ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಮಧ್ಯೆ ಇಂದು ಬರೋಬ್ಬರಿ 4.67 ಮೀಟರ್​ ಎತ್ತರದ ಮಹಾ ಅಲೆಯೊಂದು (Tidal wave) ಮುಂಬೈ ಕಡಲತೀರಕ್ಕೆ ಅಪ್ಪಳಿಸಲಿದೆ ಎಂಬ ಸೂಚನೆ ಸಿಕ್ಕಿದೆ. ಮಧ್ಯಾಹ್ನ ಸುಮಾರು 1.30ಕ್ಕೆ ಈ ಮಹಾ ಅಲೆ ನಗರದ ಕಡಲ ತೀರಕ್ಕೆ ಅಪ್ಪಳಿಸಲಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಪ್ರಕಟಿಸಿದೆ.

ಮಹಾ ಅಲೆಯಿಂದ ಮುಂಬೈಗೆ ಎದುರಾಗುವ ಸಮಸ್ಯೆ ಏನು..? ಸಮುದ್ರ ಉಬ್ಬರದಿಂದ (HighTide) ಉಂಟಾಗುತ್ತಿರುವ ಈ ಮಹಾ ಅಲೆಯಿಂದ ನಗರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರಕ್ಕೆ ಅಂಟಿಕೊಂಡಿರುವ ನಗರದ ಪ್ರಮುಖ ರಾಜಕಾಲುವೆಗಳು ಮತ್ತು ಚರಂಡಿ ವ್ಯವಸ್ಥೆಯ ಮೂಲಕ ಸಮುದ್ರದ ನೀರು ನಗರಕ್ಕೆ ಪ್ರವೇಶಿಸಿ ರಸ್ತೆ ಮತ್ತು ಬಡಾವಣೆಗಳನ್ನು ಜಲಾವೃತಗೊಳಿಸಬಹುದು. ಹೀಗಾಗಿ ಮುಂಬೈ ಪಾಲಿಕೆಯು ಆಯಾ ಚರಂಡಿಗಳ ಹೊರಹರಿವಿನ ಗೇಟ್​ಗಳನ್ನು ಬಂದ್​ ಮಾಡಲಿದೆ. ಈ ಮೂಲಕ ಸಮುದ್ರದ ನೀರು ಒಳಕ್ಕೆ ಹರಿಯುವುದನ್ನು ತಡೆಯೋಕೆ ಮುಂದಾಗಿದೆ.

ಇದರೊಟ್ಟಿಗೆ ಹವಾಮಾನ ಇಲಾಖೆಯು ಮುಂದಿನ 24 ಗಂಟೆಯಲ್ಲಿ ನಗರದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಮಾಡಿದೆ. ಹೀಗಾಗಿ ಮೀನುಗಾರರು ಮತ್ತು ಸ್ಥಳೀಯರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಹ ನೀಡಿದೆ.

Published On - 12:06 pm, Mon, 6 July 20

ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ