AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆರ್ಭಟದ ಮಧ್ಯೆ ಮಧ್ಯಾಹ್ನ ಅಪ್ಪಳಿಸಲಿದೆ ‘ಮಹಾ ಅಲೆ’..!

ಮುಂಬೈ: ಕೊರೊನಾ ಮಹಾಮಾರಿಯಿಂದ ವಾಣಿಜ್ಯ ನಗರಿ ಮುಂಬೈ ತತ್ತರಿಸಿಹೋಗಿದೆ. ವೈರಸ್​ ಆರ್ಭಟದಿಂದ ನಗರದಲ್ಲಿ ಪ್ರತಿದಿನ ಸಾವು ನೋವು ಸಂಭವಿಸುತ್ತಿದೆ. ಈ ಮಧ್ಯೆ ಮಳೆಗಾಲವು ಶುರುವಾಗಿದ್ದು ಇದೀಗ ಮುಂಬೈಗೆ ಮತ್ತೊಂದು ಕಂಟಕ ಎದುರಾಗಿದೆ. ಹೌದು, ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಮಧ್ಯೆ ಇಂದು ಬರೋಬ್ಬರಿ 4.67 ಮೀಟರ್​ ಎತ್ತರದ ಮಹಾ ಅಲೆಯೊಂದು (Tidal wave) ಮುಂಬೈ ಕಡಲತೀರಕ್ಕೆ ಅಪ್ಪಳಿಸಲಿದೆ ಎಂಬ ಸೂಚನೆ ಸಿಕ್ಕಿದೆ. ಮಧ್ಯಾಹ್ನ ಸುಮಾರು 1.30ಕ್ಕೆ ಈ ಮಹಾ ಅಲೆ ನಗರದ ಕಡಲ ತೀರಕ್ಕೆ ಅಪ್ಪಳಿಸಲಿದೆ ಎಂದು […]

ಕೊರೊನಾ ಆರ್ಭಟದ ಮಧ್ಯೆ ಮಧ್ಯಾಹ್ನ ಅಪ್ಪಳಿಸಲಿದೆ ‘ಮಹಾ ಅಲೆ’..!
KUSHAL V
| Edited By: |

Updated on:Jul 06, 2020 | 1:18 PM

Share

ಮುಂಬೈ: ಕೊರೊನಾ ಮಹಾಮಾರಿಯಿಂದ ವಾಣಿಜ್ಯ ನಗರಿ ಮುಂಬೈ ತತ್ತರಿಸಿಹೋಗಿದೆ. ವೈರಸ್​ ಆರ್ಭಟದಿಂದ ನಗರದಲ್ಲಿ ಪ್ರತಿದಿನ ಸಾವು ನೋವು ಸಂಭವಿಸುತ್ತಿದೆ. ಈ ಮಧ್ಯೆ ಮಳೆಗಾಲವು ಶುರುವಾಗಿದ್ದು ಇದೀಗ ಮುಂಬೈಗೆ ಮತ್ತೊಂದು ಕಂಟಕ ಎದುರಾಗಿದೆ.

ಹೌದು, ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಮಧ್ಯೆ ಇಂದು ಬರೋಬ್ಬರಿ 4.67 ಮೀಟರ್​ ಎತ್ತರದ ಮಹಾ ಅಲೆಯೊಂದು (Tidal wave) ಮುಂಬೈ ಕಡಲತೀರಕ್ಕೆ ಅಪ್ಪಳಿಸಲಿದೆ ಎಂಬ ಸೂಚನೆ ಸಿಕ್ಕಿದೆ. ಮಧ್ಯಾಹ್ನ ಸುಮಾರು 1.30ಕ್ಕೆ ಈ ಮಹಾ ಅಲೆ ನಗರದ ಕಡಲ ತೀರಕ್ಕೆ ಅಪ್ಪಳಿಸಲಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಪ್ರಕಟಿಸಿದೆ.

ಮಹಾ ಅಲೆಯಿಂದ ಮುಂಬೈಗೆ ಎದುರಾಗುವ ಸಮಸ್ಯೆ ಏನು..? ಸಮುದ್ರ ಉಬ್ಬರದಿಂದ (HighTide) ಉಂಟಾಗುತ್ತಿರುವ ಈ ಮಹಾ ಅಲೆಯಿಂದ ನಗರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರಕ್ಕೆ ಅಂಟಿಕೊಂಡಿರುವ ನಗರದ ಪ್ರಮುಖ ರಾಜಕಾಲುವೆಗಳು ಮತ್ತು ಚರಂಡಿ ವ್ಯವಸ್ಥೆಯ ಮೂಲಕ ಸಮುದ್ರದ ನೀರು ನಗರಕ್ಕೆ ಪ್ರವೇಶಿಸಿ ರಸ್ತೆ ಮತ್ತು ಬಡಾವಣೆಗಳನ್ನು ಜಲಾವೃತಗೊಳಿಸಬಹುದು. ಹೀಗಾಗಿ ಮುಂಬೈ ಪಾಲಿಕೆಯು ಆಯಾ ಚರಂಡಿಗಳ ಹೊರಹರಿವಿನ ಗೇಟ್​ಗಳನ್ನು ಬಂದ್​ ಮಾಡಲಿದೆ. ಈ ಮೂಲಕ ಸಮುದ್ರದ ನೀರು ಒಳಕ್ಕೆ ಹರಿಯುವುದನ್ನು ತಡೆಯೋಕೆ ಮುಂದಾಗಿದೆ.

ಇದರೊಟ್ಟಿಗೆ ಹವಾಮಾನ ಇಲಾಖೆಯು ಮುಂದಿನ 24 ಗಂಟೆಯಲ್ಲಿ ನಗರದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಮಾಡಿದೆ. ಹೀಗಾಗಿ ಮೀನುಗಾರರು ಮತ್ತು ಸ್ಥಳೀಯರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಹ ನೀಡಿದೆ.

Published On - 12:06 pm, Mon, 6 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ