ಮೊಮ್ಮಕ್ಕಳಿಗಾಗಿ ವಡಾ ಪಾವ್ ತರಲು ಹೋದಾಗ ಬೈಕ್​​ನಲ್ಲಿದ್ದ 4.95 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಎಗರಿಸಿದ ಕಳ್ಳ

ವೃದ್ಧ ದಂಪತಿಗಳು ಬ್ಯಾಂಕ್‌ನಿಂದ ಮನೆಗೆ ಹೋಗುತ್ತಿದ್ದಾಗ ಮೊಮ್ಮಕ್ಕಳಿಗಾಗಿ ಶೆವಲೆವಾಡಿಯ ಅಂಗಡಿಯಿಂದ ವಡಾ ಪಾವ್ ತೆಗೆದುಕೊಂಡು ಹೋಗಲು ಬೈಕ್​​​ ನಿಲ್ಲಿಸಿದ್ದಾರೆ. ಈ ವೇಳೆ ಕಳ್ಳನೊಬ್ಬ ಬಂದ ಬೈಕ್​​ನಲ್ಲಿದ್ದ ₹4.95 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ಈ ಬಗ್ಗೆ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಮೊಮ್ಮಕ್ಕಳಿಗಾಗಿ ವಡಾ ಪಾವ್ ತರಲು ಹೋದಾಗ ಬೈಕ್​​ನಲ್ಲಿದ್ದ 4.95 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಎಗರಿಸಿದ ಕಳ್ಳ
ವಿಡಿಯೋ ಇಲ್ಲಿದೆ
Follow us
|

Updated on: Aug 31, 2024 | 1:00 PM

ಪುಣೆ, ಆ.31: ಪುಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವೃದ್ಧ ದಂಪತಿಗಳು ಬ್ಯಾಂಕ್‌ನಿಂದ ಮನೆಗೆ ಹೋಗುತ್ತಿದ್ದಾಗ ಮೊಮ್ಮಕ್ಕಳಿಗಾಗಿ ಶೆವಲೆವಾಡಿಯ ಅಂಗಡಿಯಿಂದ ವಡಾ ಪಾವ್ ತೆಗೆದುಕೊಂಡು ಹೋಗಲು ಬೈಕ್​​​ ನಿಲ್ಲಿಸಿದ್ದಾರೆ. ಈ ವೇಳೆ ಕಳ್ಳನೊಬ್ಬ ಬಂದ ಬೈಕ್​​ನಲ್ಲಿದ್ದ ₹4.95 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇದೀಗ ಈ ಬಗ್ಗೆ ಸಿಸಿಟಿವಿಯಲ್ಲಿ ವಿಡಿಯೋವೊಂದು ಸೆರೆಯಾಗಿದೆ.

ಇನ್ನು ಮಾಹಿತಿಗಳ ಪ್ರಕಾರ, ದಷ್ಟ್ರಥ್ ಬಾಬೌಲಾಲ್ ಧಾಮ್ನೆ ಮತ್ತು ಅವರ ಪತ್ನಿ ಜಯಶ್ರೀ ಅವರು ಉರುಳಿ ಕಾಂಚನ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಬ್ಯಾಂಕ್​​ನಲ್ಲಿ ಚಿನ್ನವನ್ನು ಅಡವಿಟ್ಟು ₹ 8 ಸಾಲ ಪಡೆದಿದ್ದರು. ಅಡವಿಟ್ಟ ಚಿನ್ನವನ್ನು ಬಿಡಿಸಲು ಬ್ಯಾಂಕ್‌ಗೆ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ. ಬ್ಯಾಂಕ್​​ನ ಕೆಲಸ ಮುಗಿಸಿ ಬರಬೇಕಾದರೆ ಮಧ್ಯಾಹ್ನ 3:45ಕ್ಕೆ ಪುಣೆ-ಸೋಲಾಪುರ ರಸ್ತೆಯ ಶೆವಲೆವಾಡಿಯ ವಡಾ ಪಾವ್ ಅಂಗಡಿಯಲ್ಲಿ ನಿಲ್ಲಿಸಿದರು. ದಷ್ಟ್ರಥ್ ಬಾಬೌಲಾಲ್ ಧಾಮ್ನೆ ಅವರು ವಡಾ ಪಾವ್ ತೆಗೆದುಕೊಳ್ಳಲು ಹೋದಾಗ ಜಯಶ್ರೀ ವಾಹನದ ಬಳಿಯೇ ನಿಂತಿದ್ದರು.

ಇದನ್ನೂ ಓದಿ: ಐಷಾರಾಮಿ ಕಾರಿಗೆ ಡಿಕ್ಕಿ ಹೊಡೆದ ಕ್ಯಾಬ್​​​​ ಡ್ರೈವರ್​ನನ್ನು ಎತ್ತಿ ನೆಲಕ್ಕೆ ಎಸೆದ ಮಾಲೀಕ

ವಿಡಿಯೋ ಇಲ್ಲಿದೆ ನೋಡಿ:

ಆಭರಣಗಳು, ಬ್ಯಾಂಕ್ ದಾಖಲೆಗಳು ಮತ್ತು ಮೊಬೈಲ್ ಫೋನ್ ಒಳಗೊಂಡ ಬಟ್ಟೆ ಚೀಲವನ್ನು ಬೈಕ್​​ನ ಹ್ಯಾಂಡಲ್ ಬಳಿ ಇಟ್ಟಿದ್ದರು. ಜಯಶ್ರೀ ಅವರ ಗಮನ ಬೇರೆರ ಕಡೆ ಹೋಗುತ್ತಿದ್ದಂತೆ, ಕಳ್ಳ ವಾಹನದ ಬಳಿ ಬಂದು ಬ್ಯಾಗ್ ಹಿಡಿದುಕೊಂಡು ಓಡಿ ಹೋಗಿದ್ದಾನೆ. ಜಯಶ್ರೀ ಅವರು ಬೊಬ್ಬೆ ಹೊಡೆಯುತ್ತ ಕಳ್ಳನ ಹಿಂದೆ ಓಡಿದ್ದಾರೆ. ಆ ಬ್ಯಾಗ್​ನಲ್ಲಿ ಚಿನ್ನದ ಬಳೆಗಳು, ಚಿನ್ನದ ಉಂಗುರ, ಮಂಗಳಸೂತ್ರ ಇತ್ಯಾದಿಗಳು ಇತ್ತು ಎಂದು ಹೇಳಲಾಗಿದೆ. ಇನ್ನು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 173 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!