AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಕ್ಕಳಿಗಾಗಿ ವಡಾ ಪಾವ್ ತರಲು ಹೋದಾಗ ಬೈಕ್​​ನಲ್ಲಿದ್ದ 4.95 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಎಗರಿಸಿದ ಕಳ್ಳ

ವೃದ್ಧ ದಂಪತಿಗಳು ಬ್ಯಾಂಕ್‌ನಿಂದ ಮನೆಗೆ ಹೋಗುತ್ತಿದ್ದಾಗ ಮೊಮ್ಮಕ್ಕಳಿಗಾಗಿ ಶೆವಲೆವಾಡಿಯ ಅಂಗಡಿಯಿಂದ ವಡಾ ಪಾವ್ ತೆಗೆದುಕೊಂಡು ಹೋಗಲು ಬೈಕ್​​​ ನಿಲ್ಲಿಸಿದ್ದಾರೆ. ಈ ವೇಳೆ ಕಳ್ಳನೊಬ್ಬ ಬಂದ ಬೈಕ್​​ನಲ್ಲಿದ್ದ ₹4.95 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ಈ ಬಗ್ಗೆ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಮೊಮ್ಮಕ್ಕಳಿಗಾಗಿ ವಡಾ ಪಾವ್ ತರಲು ಹೋದಾಗ ಬೈಕ್​​ನಲ್ಲಿದ್ದ 4.95 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಎಗರಿಸಿದ ಕಳ್ಳ
ವಿಡಿಯೋ ಇಲ್ಲಿದೆ
ಅಕ್ಷಯ್​ ಪಲ್ಲಮಜಲು​​
|

Updated on: Aug 31, 2024 | 1:00 PM

Share

ಪುಣೆ, ಆ.31: ಪುಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವೃದ್ಧ ದಂಪತಿಗಳು ಬ್ಯಾಂಕ್‌ನಿಂದ ಮನೆಗೆ ಹೋಗುತ್ತಿದ್ದಾಗ ಮೊಮ್ಮಕ್ಕಳಿಗಾಗಿ ಶೆವಲೆವಾಡಿಯ ಅಂಗಡಿಯಿಂದ ವಡಾ ಪಾವ್ ತೆಗೆದುಕೊಂಡು ಹೋಗಲು ಬೈಕ್​​​ ನಿಲ್ಲಿಸಿದ್ದಾರೆ. ಈ ವೇಳೆ ಕಳ್ಳನೊಬ್ಬ ಬಂದ ಬೈಕ್​​ನಲ್ಲಿದ್ದ ₹4.95 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇದೀಗ ಈ ಬಗ್ಗೆ ಸಿಸಿಟಿವಿಯಲ್ಲಿ ವಿಡಿಯೋವೊಂದು ಸೆರೆಯಾಗಿದೆ.

ಇನ್ನು ಮಾಹಿತಿಗಳ ಪ್ರಕಾರ, ದಷ್ಟ್ರಥ್ ಬಾಬೌಲಾಲ್ ಧಾಮ್ನೆ ಮತ್ತು ಅವರ ಪತ್ನಿ ಜಯಶ್ರೀ ಅವರು ಉರುಳಿ ಕಾಂಚನ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಬ್ಯಾಂಕ್​​ನಲ್ಲಿ ಚಿನ್ನವನ್ನು ಅಡವಿಟ್ಟು ₹ 8 ಸಾಲ ಪಡೆದಿದ್ದರು. ಅಡವಿಟ್ಟ ಚಿನ್ನವನ್ನು ಬಿಡಿಸಲು ಬ್ಯಾಂಕ್‌ಗೆ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ. ಬ್ಯಾಂಕ್​​ನ ಕೆಲಸ ಮುಗಿಸಿ ಬರಬೇಕಾದರೆ ಮಧ್ಯಾಹ್ನ 3:45ಕ್ಕೆ ಪುಣೆ-ಸೋಲಾಪುರ ರಸ್ತೆಯ ಶೆವಲೆವಾಡಿಯ ವಡಾ ಪಾವ್ ಅಂಗಡಿಯಲ್ಲಿ ನಿಲ್ಲಿಸಿದರು. ದಷ್ಟ್ರಥ್ ಬಾಬೌಲಾಲ್ ಧಾಮ್ನೆ ಅವರು ವಡಾ ಪಾವ್ ತೆಗೆದುಕೊಳ್ಳಲು ಹೋದಾಗ ಜಯಶ್ರೀ ವಾಹನದ ಬಳಿಯೇ ನಿಂತಿದ್ದರು.

ಇದನ್ನೂ ಓದಿ: ಐಷಾರಾಮಿ ಕಾರಿಗೆ ಡಿಕ್ಕಿ ಹೊಡೆದ ಕ್ಯಾಬ್​​​​ ಡ್ರೈವರ್​ನನ್ನು ಎತ್ತಿ ನೆಲಕ್ಕೆ ಎಸೆದ ಮಾಲೀಕ

ವಿಡಿಯೋ ಇಲ್ಲಿದೆ ನೋಡಿ:

ಆಭರಣಗಳು, ಬ್ಯಾಂಕ್ ದಾಖಲೆಗಳು ಮತ್ತು ಮೊಬೈಲ್ ಫೋನ್ ಒಳಗೊಂಡ ಬಟ್ಟೆ ಚೀಲವನ್ನು ಬೈಕ್​​ನ ಹ್ಯಾಂಡಲ್ ಬಳಿ ಇಟ್ಟಿದ್ದರು. ಜಯಶ್ರೀ ಅವರ ಗಮನ ಬೇರೆರ ಕಡೆ ಹೋಗುತ್ತಿದ್ದಂತೆ, ಕಳ್ಳ ವಾಹನದ ಬಳಿ ಬಂದು ಬ್ಯಾಗ್ ಹಿಡಿದುಕೊಂಡು ಓಡಿ ಹೋಗಿದ್ದಾನೆ. ಜಯಶ್ರೀ ಅವರು ಬೊಬ್ಬೆ ಹೊಡೆಯುತ್ತ ಕಳ್ಳನ ಹಿಂದೆ ಓಡಿದ್ದಾರೆ. ಆ ಬ್ಯಾಗ್​ನಲ್ಲಿ ಚಿನ್ನದ ಬಳೆಗಳು, ಚಿನ್ನದ ಉಂಗುರ, ಮಂಗಳಸೂತ್ರ ಇತ್ಯಾದಿಗಳು ಇತ್ತು ಎಂದು ಹೇಳಲಾಗಿದೆ. ಇನ್ನು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 173 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರಿ ಅನಾಹುತ
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರಿ ಅನಾಹುತ
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 
ರಾಜಕೀಯ ನಾಯಕರ ಕರೆಗಳ ರೆಕಾರ್ಡ್?: ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪ
ರಾಜಕೀಯ ನಾಯಕರ ಕರೆಗಳ ರೆಕಾರ್ಡ್?: ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪ