AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಕ್ಕಳಿಗಾಗಿ ವಡಾ ಪಾವ್ ತರಲು ಹೋದಾಗ ಬೈಕ್​​ನಲ್ಲಿದ್ದ 4.95 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಎಗರಿಸಿದ ಕಳ್ಳ

ವೃದ್ಧ ದಂಪತಿಗಳು ಬ್ಯಾಂಕ್‌ನಿಂದ ಮನೆಗೆ ಹೋಗುತ್ತಿದ್ದಾಗ ಮೊಮ್ಮಕ್ಕಳಿಗಾಗಿ ಶೆವಲೆವಾಡಿಯ ಅಂಗಡಿಯಿಂದ ವಡಾ ಪಾವ್ ತೆಗೆದುಕೊಂಡು ಹೋಗಲು ಬೈಕ್​​​ ನಿಲ್ಲಿಸಿದ್ದಾರೆ. ಈ ವೇಳೆ ಕಳ್ಳನೊಬ್ಬ ಬಂದ ಬೈಕ್​​ನಲ್ಲಿದ್ದ ₹4.95 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ಈ ಬಗ್ಗೆ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಮೊಮ್ಮಕ್ಕಳಿಗಾಗಿ ವಡಾ ಪಾವ್ ತರಲು ಹೋದಾಗ ಬೈಕ್​​ನಲ್ಲಿದ್ದ 4.95 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಎಗರಿಸಿದ ಕಳ್ಳ
ವಿಡಿಯೋ ಇಲ್ಲಿದೆ
Follow us
ಅಕ್ಷಯ್​ ಪಲ್ಲಮಜಲು​​
|

Updated on: Aug 31, 2024 | 1:00 PM

ಪುಣೆ, ಆ.31: ಪುಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವೃದ್ಧ ದಂಪತಿಗಳು ಬ್ಯಾಂಕ್‌ನಿಂದ ಮನೆಗೆ ಹೋಗುತ್ತಿದ್ದಾಗ ಮೊಮ್ಮಕ್ಕಳಿಗಾಗಿ ಶೆವಲೆವಾಡಿಯ ಅಂಗಡಿಯಿಂದ ವಡಾ ಪಾವ್ ತೆಗೆದುಕೊಂಡು ಹೋಗಲು ಬೈಕ್​​​ ನಿಲ್ಲಿಸಿದ್ದಾರೆ. ಈ ವೇಳೆ ಕಳ್ಳನೊಬ್ಬ ಬಂದ ಬೈಕ್​​ನಲ್ಲಿದ್ದ ₹4.95 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇದೀಗ ಈ ಬಗ್ಗೆ ಸಿಸಿಟಿವಿಯಲ್ಲಿ ವಿಡಿಯೋವೊಂದು ಸೆರೆಯಾಗಿದೆ.

ಇನ್ನು ಮಾಹಿತಿಗಳ ಪ್ರಕಾರ, ದಷ್ಟ್ರಥ್ ಬಾಬೌಲಾಲ್ ಧಾಮ್ನೆ ಮತ್ತು ಅವರ ಪತ್ನಿ ಜಯಶ್ರೀ ಅವರು ಉರುಳಿ ಕಾಂಚನ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಬ್ಯಾಂಕ್​​ನಲ್ಲಿ ಚಿನ್ನವನ್ನು ಅಡವಿಟ್ಟು ₹ 8 ಸಾಲ ಪಡೆದಿದ್ದರು. ಅಡವಿಟ್ಟ ಚಿನ್ನವನ್ನು ಬಿಡಿಸಲು ಬ್ಯಾಂಕ್‌ಗೆ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ. ಬ್ಯಾಂಕ್​​ನ ಕೆಲಸ ಮುಗಿಸಿ ಬರಬೇಕಾದರೆ ಮಧ್ಯಾಹ್ನ 3:45ಕ್ಕೆ ಪುಣೆ-ಸೋಲಾಪುರ ರಸ್ತೆಯ ಶೆವಲೆವಾಡಿಯ ವಡಾ ಪಾವ್ ಅಂಗಡಿಯಲ್ಲಿ ನಿಲ್ಲಿಸಿದರು. ದಷ್ಟ್ರಥ್ ಬಾಬೌಲಾಲ್ ಧಾಮ್ನೆ ಅವರು ವಡಾ ಪಾವ್ ತೆಗೆದುಕೊಳ್ಳಲು ಹೋದಾಗ ಜಯಶ್ರೀ ವಾಹನದ ಬಳಿಯೇ ನಿಂತಿದ್ದರು.

ಇದನ್ನೂ ಓದಿ: ಐಷಾರಾಮಿ ಕಾರಿಗೆ ಡಿಕ್ಕಿ ಹೊಡೆದ ಕ್ಯಾಬ್​​​​ ಡ್ರೈವರ್​ನನ್ನು ಎತ್ತಿ ನೆಲಕ್ಕೆ ಎಸೆದ ಮಾಲೀಕ

ವಿಡಿಯೋ ಇಲ್ಲಿದೆ ನೋಡಿ:

ಆಭರಣಗಳು, ಬ್ಯಾಂಕ್ ದಾಖಲೆಗಳು ಮತ್ತು ಮೊಬೈಲ್ ಫೋನ್ ಒಳಗೊಂಡ ಬಟ್ಟೆ ಚೀಲವನ್ನು ಬೈಕ್​​ನ ಹ್ಯಾಂಡಲ್ ಬಳಿ ಇಟ್ಟಿದ್ದರು. ಜಯಶ್ರೀ ಅವರ ಗಮನ ಬೇರೆರ ಕಡೆ ಹೋಗುತ್ತಿದ್ದಂತೆ, ಕಳ್ಳ ವಾಹನದ ಬಳಿ ಬಂದು ಬ್ಯಾಗ್ ಹಿಡಿದುಕೊಂಡು ಓಡಿ ಹೋಗಿದ್ದಾನೆ. ಜಯಶ್ರೀ ಅವರು ಬೊಬ್ಬೆ ಹೊಡೆಯುತ್ತ ಕಳ್ಳನ ಹಿಂದೆ ಓಡಿದ್ದಾರೆ. ಆ ಬ್ಯಾಗ್​ನಲ್ಲಿ ಚಿನ್ನದ ಬಳೆಗಳು, ಚಿನ್ನದ ಉಂಗುರ, ಮಂಗಳಸೂತ್ರ ಇತ್ಯಾದಿಗಳು ಇತ್ತು ಎಂದು ಹೇಳಲಾಗಿದೆ. ಇನ್ನು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 173 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್