AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ: ಮತ್ತೆ 4 ಮಂದಿ ಬಂಧನ; ಅದರಲ್ಲೊಬ್ಬ ಬಿಜೆಪಿ ಕಾರ್ಯಕರ್ತ

ಲಖಿಂಪುರ ಖೇರಿ ಪೊಲೀಸ್​ ಕ್ರೈಂಬ್ರ್ಯಾಂಚ್​ ಇದೀಗ ನಾಲ್ವರನ್ನು ಬಂಧಿಸಿದೆ. ಇದೀಗ ಬಂಧಿತರಾಗಿರುವ ನಾಲ್ವರನ್ನು ಎಸ್​ಐಟಿ ಅಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ: ಮತ್ತೆ 4 ಮಂದಿ ಬಂಧನ; ಅದರಲ್ಲೊಬ್ಬ ಬಿಜೆಪಿ ಕಾರ್ಯಕರ್ತ
ಲಖಿಂಪುರ ಖೇರಿ ಹಿಂಸಾಚಾರ ಚಿತ್ರಣ
TV9 Web
| Edited By: |

Updated on:Oct 19, 2021 | 10:04 AM

Share

ದೆಹಲಿ: ಲಖಿಂಪುರ ಖೇರಿ (Lakhimpur Kheri)ಯಲ್ಲಿ ಅಕ್ಟೋಬರ್​ 3ರಂದು ರೈತರ ಮೇಲೆ ಕಾರು ಹರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಮವಾರ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲ ಆಶೀಶ್​ ಮಿಶ್ರಾ ಆಪ್ತರು ಎಂದು ಹೇಳಲಾಗಿದ್ದು, ಒಬ್ಬ ಬಿಜೆಪಿ ಕಾರ್ಯಕರ್ತ ಇದ್ದಾರೆ. ಘಟನೆ ನಡೆದಾಗ ಈ ನಾಲ್ವರೂ ಎಸ್​ಯುವಿ ವಾಹನದ ಮೇಲೆ ಇದ್ದರು . ಅಲ್ಲಿಗೆ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 10ಕ್ಕೇರಿಕೆಯಾಗಿದೆ.  

ಲಖಿಂಪುರ ಖೇರಿ ಪೊಲೀಸ್​ ಕ್ರೈಂಬ್ರ್ಯಾಂಚ್​ ಇದೀಗ ನಾಲ್ವರನ್ನು ಬಂಧಿಸಿದೆ. ಇದೀಗ ಬಂಧಿತರಾಗಿರುವ ನಾಲ್ವರನ್ನು ಎಸ್​ಐಟಿ ಅಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನೂ ವಿಚಾರಣೆ ನಡೆಯುತ್ತಿದೆ. ಬಂಧಿತರ ಹೇಳಿಕೆ ಆಧಾರದ ಮೇಲೆ ತನಿಖೆಯೂ ನಡೆಯುತ್ತಿದೆ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.  ನಿನ್ನೆ ಬಂಧನಕ್ಕೆ ಒಳಗಾದವರನ್ನು ಸುಮಿತ್​ ಜೈಸ್ವಾಲ್​, ಶಿಶಿಪಾಲ್​, ಸತ್ಯ ಪ್ರಕಾಶ್​ ತ್ರಿಪಾಠಿ ಮತ್ತು ನಂದನ್​ ಸಿಂಗ್​ ಬಿಸ್ತ್​ ಎಂದು ಹೇಳಲಾಗಿದೆ. ಇನ್ನು ಪ್ರಕರಣದಲ್ಲಿ ಮುಖ್ಯ ಆರೋಪಿಗಳೆನಿಸಿರುವ ಆಶೀಶ್ ಮಿಶ್ರಾ, ಅಂಕಿತ್​ ದಾಸ್​, ಆಶೀಶ್​ ಪಾಂಡೆ, ಲವಕುಶ್​ ರಾಣಾ, ಶೇಖರ್​ ಭಾರ್ತಿ ಮತ್ತು ಲತೀಫ್​ ಎಂಬುವರನ್ನು ಈಗಾಗಲೇ ಬಂಧಿಸಲಾಗಿದೆ.

ಇವರಲ್ಲಿ ಸುಮಿತ್​ ಜೈಸ್ವಾಲ್​ ತನ್ನನ್ನು ತಾನು ಬಿಜೆಪಿ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದಾರೆ. ಅಯೋಧ್ಯಾಪುರಿ ನಿವಾಸಿಯಾಗಿದ್ದು, ಅಂದು ಘಟನೆ ನಡೆದಾಗ ಬನ್​ಬೀರ್​​ ಪುರದಲ್ಲಿ ನಡೆಯಲಿದ್ದ ಕುಸ್ತಿ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಡೆಪ್ಯೂಟಿ ಸಿಎಂ ಕೇಶವ್​ ಮೌರ್ಯ ಅವರನ್ನು ಸ್ವಾಗತಿಸಲು ಹೊರಟಿದ್ದಾಗಿ ಹೇಳಿಕೊಂಡಿದ್ದಾರೆ. ಹಾಗೇ, ರೈತರ ಮೇಲೆ ಕಾರು ಹರಿದ ವಿಡಿಯೋ ವೈರಲ್​ ಆದಾಗ, ಅದರಲ್ಲೊಂದು ಎಸ್​ಯುವಿ ವಾಹನದಿಂದ ವ್ಯಕ್ತಿಯೊಬ್ಬ ಓಡಿದ ದೃಶ್ಯ ಕಂಡುಬಂದಿತ್ತು. ಆ ವ್ಯಕ್ತಿ ಇದೇ ಸುಮಿತ್ ಎಂದೂ ಹೇಳಲಾಗಿದೆ.  ಇನ್ನು ಘಟನೆಯನ್ನು ವಿವರಿಸಿದ ಜೈಸ್ವಾಲ್​, ಅಂದು ತುಂಬ ಭೀಕರ ಸನ್ನಿವೇಶ ಇತ್ತು. ಅಲ್ಲಿದ್ದವರ ಕೈಯಲ್ಲಿ (ರೈತರು) ಕೋಲು, ಕಲ್ಲು, ಬಡಿಗೆಗಳು ಇದ್ದವು. ಅವರೆಲ್ಲ ನಮ್ಮ ಮೇಲೆ ದಾಳಿ ಮಾಡಿದರು. ನಿಂದಿಸಿದರು..ಅಷ್ಟೇ ಅಲ್ಲ, ಖಲಿಸ್ತಾನ್ ಜಿಂದಾಬಾದ್ ಎಂದು ಕೂಗುತ್ತಿದ್ದರು..ಎಂದು ಹೇಳಿದ್ದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ‘ಬಿಕ್ಷೆ ಬೇಡಲು ಬಯಸೋದಿಲ್ಲ’ ಪುಣೆ ಬೀದಿಗಳಲ್ಲಿ ಪೆನ್ನು ಮಾರಿ ಜೀವನ ನಡೆಸುತ್ತಿದ್ದಾರೆ ಸ್ವಾವಲಂಬಿ ವೃದ್ಧೆ

Video: ರೈಲಿನಡಿ ಬೀಳುತ್ತಿದ್ದ ಗರ್ಭಿಣಿಯನ್ನು ರಕ್ಷಿಸಿದ ಆರ್​ಪಿಎಫ್​ ಕಾನ್​ಸ್ಟೆಬಲ್​; ಹೊಟ್ಟೆ ನೆಲಕ್ಕೆ ತಾಗದಂತೆ ಬಚಾವ್​ ಮಾಡಿದರು

Published On - 9:56 am, Tue, 19 October 21

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?