ಆಂಧ್ರ ಪ್ರದೇಶದ ಗ್ರಾಮದಲ್ಲಿ ನಾಲ್ಕು ಹುಲಿ ಮರಿಗಳು ಪತ್ತೆ; ಅಮ್ಮ ಹುಲಿ ಪತ್ತೆಗಾಗಿ ಮುಂದುವರಿದ ಹುಡುಕಾಟ

ಮರಿಗಳನ್ನು ಮೃಗಾಲಯಕ್ಕೆ ಸ್ಥಳಾಂತರಿಸುವುದೇ ಕೊನೆಯ ಆಯ್ಕೆ. ಆದರೆ ನಾವು ಅದನ್ನು ತಾಯಿಯೊಂದಿಗೆ ಮತ್ತೆ ಸೇರಿಸಲು ಬಯಸುತ್ತೇವೆ. ಅದು ಮರಿಗಳನ್ನು ಸ್ವೀಕರಿಸಿ, ಮತ್ತೆ ಕಾಡಿಗೆ ಕರೆದೊಯ್ಯುಲಿದೆ ಎಂಬುದು ನಮ್ಮ ಭಾವನೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಆಂಧ್ರ ಪ್ರದೇಶದ ಗ್ರಾಮದಲ್ಲಿ ನಾಲ್ಕು ಹುಲಿ ಮರಿಗಳು ಪತ್ತೆ; ಅಮ್ಮ ಹುಲಿ ಪತ್ತೆಗಾಗಿ ಮುಂದುವರಿದ ಹುಡುಕಾಟ
ಹುಲಿಮರಿಗಳುImage Credit source: Parveen Kaswan, IFS/ Twitter
Follow us
|

Updated on:Mar 09, 2023 | 8:09 PM

ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ನಂದ್ಯಾಲ್-ಕರ್ನೂಲ್ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳು ನಾಲ್ಕು ಮರಿಗಳನ್ನು ಅಮ್ಮ ಹುಲಿಗೆ (tigress) ಹಿಂದಿರುಗಿಸಲು ಹುಡುಕುತ್ತಿದ್ದಾರೆ. ಕಳೆದ 72 ಗಂಟೆಗಳಿಂದ ಈ ಹುಡುಕಾಟ ನಡೆದಿದೆ.ದಾರಿ ತಪ್ಪಿ ಕೃಷಿ ಹೊಲಕ್ಕೆ ನುಗ್ಗಿದ್ದ ಮರಿಗಳು ಗ್ರಾಮಸ್ಥರಿಗೆ ಪತ್ತೆಯಾಗಿವೆ. ಬೀದಿ ನಾಯಿಗಳಿಂದ ರಕ್ಷಿಸಲು ಅವರು ಮೊದಲು ಅವುಗಳನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದರು. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ನಂತರ ಪಶುವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.  ಮರಿಗಳನ್ನು ಕಳೆದುಕೊಂಡಿದ್ದಕ್ಕೆ ಬೇಸರಗೊಂಡಿರುವ ಹುಲಿ ಈಗ ಆಕ್ರಮಣಕಾರಿಯಾಗಿ ವರ್ತಿಸಬಹುದು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆ ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಿದ್ದು, 300 ಸದಸ್ಯರ ತಂಡ ಹುಲಿಗಾಗಿ ಹುಡುಕಾಟ ನಡೆಸುತ್ತಿದೆ. ಅವರು ಮರಿ ಹುಲಿಗಳ ಗುರುತುಗಳನ್ನು ಕಂಡುಕೊಂಡಿದ್ದಾರೆ ಮತ್ತು ಶೀಘ್ರದಲ್ಲೇ ದೊಡ್ಡ ಹುಲಿಯನ್ನು ಪತ್ತೆಹಚ್ಚುವ ಭರವಸೆ ಇದೆ ಎಂದು ಹೇಳಲಾಗುತ್ತದೆ. ಹುಲಿ ಟಿ-108 ಇರಬಹುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಮರಿಗಳನ್ನು ಮೃಗಾಲಯಕ್ಕೆ ಸ್ಥಳಾಂತರಿಸುವುದೇ ಕೊನೆಯ ಆಯ್ಕೆ. ಆದರೆ ನಾವು ಅದನ್ನು ತಾಯಿಯೊಂದಿಗೆ ಮತ್ತೆ ಸೇರಿಸಲು ಬಯಸುತ್ತೇವೆ. ಅದು ಮರಿಗಳನ್ನು ಸ್ವೀಕರಿಸಿ, ಮತ್ತೆ ಕಾಡಿಗೆ ಕರೆದೊಯ್ಯುಲಿದೆ ಎಂಬುದು ನಮ್ಮ ಭಾವನೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

“ನಾವು ಅವುಗಳನ್ನು ಸ್ವಲ್ಪ ಸಮಯದವರೆಗೆ ಸಾಕುತ್ತೇವೆ. ನಂತರ ಅವುಗಳನ್ನು ಮೃಗಾಲಯಕ್ಕೆ ಕೊಂಡೊಯ್ಯುತ್ತೇವೆ ಅಥವಾ ಅದಕ್ಕೆ ಸೂಕ್ತವಾದ ವಾತಾವರಣವನ್ನು ಹೊಂದಿದ್ದೇವೆಯೇ? ಅದಕ್ಕಾಗಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದಿಂದ (NTCA) ಸಾಕಷ್ಟು ಅನುಮತಿಗಳ ಅಗತ್ಯವಿದೆ. ಮುಖ್ಯ ವನ್ಯಜೀವಿ ವಾರ್ಡನ್‌ನ ನಾಮಿನಿ ನೇತೃತ್ವವಿರುವ ಸಮಿತಿಯನ್ನು ರಚಿಸಬೇಕಾಗಿದೆ ಎಂದು ಪ್ರೋಟೋಕಾಲ್ ಹೇಳುತ್ತದೆಎಂದು ಅರಣ್ಯ ಅಧಿಕಾರಿ ಶಾಂತಿ ಪ್ರಿಯಾ ಪಾಂಡೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಇದನ್ನೂ ಓದಿ: ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸದಸ್ಯರು ನಕಲಿ ಸುದ್ದಿ ಹರಡುತ್ತಿದ್ದಾರೆ: ತಮಿಳುನಾಡು ಸಿಎಂ ಸ್ಟಾಲಿನ್

ಮರಿಗಳ ಮೇಲೆ ಮಾನವನ ಕುರುಹು ಬಿಡದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅಧಿಕಾರಿ ಹೇಳಿದರು. ಮಾನವನ ಕುರುಹು ಇದ್ದರೆ ಹುಲಿ ಅವುಗಳನ್ನು ತಿರಸ್ಕರಿಸಬಹುದು.ಅನಾಥ ಅಥವಾ ಪರಿತ್ಯಕ್ತ ಮರಿಗಳನ್ನು ನಿರ್ವಹಿಸಲು ಎನ್‌ಟಿಸಿಎಯ ಪ್ರೋಟೋಕಾಲ್ ಅನ್ನು ಅನುಸರಿಸುತ್ತಿದ್ದೇವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳ ಪ್ರಕಾರ, ಮರಿಗಳು ಕಾಡಿಗೆ ಮರಳಿದರೆ ಬದುಕುಳಿಯುವ ಸಾಧ್ಯತೆ ಹೆಚ್ಚು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Thu, 9 March 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು