AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ 4 ಸಾವು, 10 ಮಂದಿಗೆ ಗಾಯ

ಜಾರ್ಖಂಡ್​​ನ ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದಾರೆ.

Jharkhand: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ 4 ಸಾವು, 10 ಮಂದಿಗೆ ಗಾಯ
ಮೊಹರಂ ಮೆರವಣಿಗೆ
TV9 Web
| Edited By: |

Updated on:Jul 29, 2023 | 11:24 AM

Share

ಜಾರ್ಖಂಡ್, ಜು.29: ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಇಂದು (ಜು.29) ಬೆಳಿಗ್ಗೆ ಜಾರ್ಖಂಡ್​​ನ (Jharkhand) ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, 10 ಮಂದಿಗೆ ಸುಟ್ಟಗಾಯಗಳಾಗಿವೆ. ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ, ಇದೀಗ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಸ್ಥಳಕ್ಕೆ ಧಾವಿಸಿದ ಬೊಕಾರೊನ ಪೊಲೀಸ್​​ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್​​ ಅವರು ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಘಟನೆಯ ಬಗ್ಗೆ ವರದಿ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಮೊರಹಂ ಮೆರವಣಿಗೆ ಪ್ರಾರಂಭವಾಗಿತ್ತು. ಮುಸ್ಲಿಂ ಸಮುದಾಯದ ಧ್ವಜ 11,000 ವೋಲ್ಟ್​​ ಹೈ-ಟೆನ್ಶನ್​​ ವಿದ್ಯುತ್​​ ತಂತಿಗೆ ತಗುಲಿದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಈ ಘಟನೆಯಿಂದ 4 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು

ಇದಕ್ಕೂ ಮುನ್ನ ಜು.28ರಂದು ಮೊರಹಂ ಪ್ರಯುಕ್ತ ಬಿಹಾರದ ಗೋಪಾಲ್​​ಗಂಜ್​​​ ಜಿಲ್ಲೆಯಲ್ಲಿ ನಡೆದ ಮೆರವಣಿಗೆಯಲ್ಲಿ ವಿದ್ಯುತ್​​ ಸ್ಪರ್ಶಿಸಿ 11 ಜನರಿಗೆ ಗಾಯಗಳಾಗಿವೆ. ಜಿಲ್ಲೆಯ ಹರ್ಪುರ್​ ತೋಲಾ ಮತ್ತು ಧರ್ಮಚಕ್​ ಗ್ರಾಮ ನಡುವೆ ಮೆರವಣಿಗೆ ಹೋಗುತ್ತಿರುವ ಈ ಘಟನೆ ನಡೆದಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sat, 29 July 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​