AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ 4 ಸಾವು, 10 ಮಂದಿಗೆ ಗಾಯ

ಜಾರ್ಖಂಡ್​​ನ ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದಾರೆ.

Jharkhand: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ 4 ಸಾವು, 10 ಮಂದಿಗೆ ಗಾಯ
ಮೊಹರಂ ಮೆರವಣಿಗೆ
TV9 Web
| Edited By: |

Updated on:Jul 29, 2023 | 11:24 AM

Share

ಜಾರ್ಖಂಡ್, ಜು.29: ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಇಂದು (ಜು.29) ಬೆಳಿಗ್ಗೆ ಜಾರ್ಖಂಡ್​​ನ (Jharkhand) ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, 10 ಮಂದಿಗೆ ಸುಟ್ಟಗಾಯಗಳಾಗಿವೆ. ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ, ಇದೀಗ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಸ್ಥಳಕ್ಕೆ ಧಾವಿಸಿದ ಬೊಕಾರೊನ ಪೊಲೀಸ್​​ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್​​ ಅವರು ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಘಟನೆಯ ಬಗ್ಗೆ ವರದಿ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಮೊರಹಂ ಮೆರವಣಿಗೆ ಪ್ರಾರಂಭವಾಗಿತ್ತು. ಮುಸ್ಲಿಂ ಸಮುದಾಯದ ಧ್ವಜ 11,000 ವೋಲ್ಟ್​​ ಹೈ-ಟೆನ್ಶನ್​​ ವಿದ್ಯುತ್​​ ತಂತಿಗೆ ತಗುಲಿದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಈ ಘಟನೆಯಿಂದ 4 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು

ಇದಕ್ಕೂ ಮುನ್ನ ಜು.28ರಂದು ಮೊರಹಂ ಪ್ರಯುಕ್ತ ಬಿಹಾರದ ಗೋಪಾಲ್​​ಗಂಜ್​​​ ಜಿಲ್ಲೆಯಲ್ಲಿ ನಡೆದ ಮೆರವಣಿಗೆಯಲ್ಲಿ ವಿದ್ಯುತ್​​ ಸ್ಪರ್ಶಿಸಿ 11 ಜನರಿಗೆ ಗಾಯಗಳಾಗಿವೆ. ಜಿಲ್ಲೆಯ ಹರ್ಪುರ್​ ತೋಲಾ ಮತ್ತು ಧರ್ಮಚಕ್​ ಗ್ರಾಮ ನಡುವೆ ಮೆರವಣಿಗೆ ಹೋಗುತ್ತಿರುವ ಈ ಘಟನೆ ನಡೆದಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sat, 29 July 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ