AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ವೇಗವಾಗಿ ಬಂದು ದೆಹಲಿ ರಸ್ತೆಯ ಡಿವೈಡರ್ ಮೇಲೆ ಮಲಗಿದ್ದವರ ಮೇಲೆ ಹತ್ತಿದ ಟ್ರಕ್; 4 ಜನ ಸಾವು

ಈ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯ ನಂತರ ಚಾಲಕ ಟ್ರಕ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ.

Accident: ವೇಗವಾಗಿ ಬಂದು ದೆಹಲಿ ರಸ್ತೆಯ ಡಿವೈಡರ್ ಮೇಲೆ ಮಲಗಿದ್ದವರ ಮೇಲೆ ಹತ್ತಿದ ಟ್ರಕ್; 4 ಜನ ಸಾವು
ಡಿವೈಡರ್ ಮೇಲೆ ಟ್ರಕ್ ಹತ್ತಿ ನಾಲ್ವರು ಸಾವು
TV9 Web
| Edited By: |

Updated on: Sep 21, 2022 | 9:15 AM

Share

ನವದೆಹಲಿ: ರಸ್ತೆ ವಿಭಜಕದ (ಡಿವೈಡರ್) ಮೇಲೆ ಮಲಗಿ ನಿದ್ರೆ ಮಾಡುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಟ್ರಕ್ ಒಂದು ಹತ್ತಿದ ಪರಿಣಾಮ ಗಾಢ ನಿದ್ರೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯರಾತ್ರಿ 1.51ರ ಸುಮಾರಿಗೆ ಈ ಘಟನೆ ನಡೆದಿದೆ. ದೆಹಲಿಯ ಸೀಮಾಪುರಿಯಲ್ಲಿ (Delhi Accident) ಡಿಟಿಸಿ ಡಿಪೋ ರೆಡ್‌ಲೈಟ್ ದಾಟುತ್ತಿರುವಾಗ ವೇಗವಾಗಿ ಬಂದ ಟ್ರಕ್ (Truck) ಜನರ ಮೇಲೆ ಹರಿದು ಎಲ್ಲರನ್ನೂ ಅಪ್ಪಚ್ಚಿ ಮಾಡಿದೆ.

ಈ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ 4 ವ್ಯಕ್ತಿಗಳನ್ನು 52 ವರ್ಷದ ಕರೀಮ್, 25 ವರ್ಷದ ಚೊಟ್ಟೆ ಖಾನ್ಸ್, 38 ವರ್ಷದ ಶಾ ಆಲಂ ಮತ್ತು 45 ವರ್ಷದ ರಾಹುಲ್ ಎಂದು ಗುರುತಿಸಲಾಗಿದೆ. 16 ವರ್ಷದ ಮನೀಶ್ ಮತ್ತು 30 ವರ್ಷದ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಒಳಚರಂಡಿ ದುರಸ್ತಿ ಕಾಮಗಾರಿ ವೇಳೆ ವಸತಿ ಗಡಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು

ಈ ಘಟನೆಯ ನಂತರ ಚಾಲಕ ಟ್ರಕ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಆ ವಾಹನವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ಅನೇಕ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ