AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ವೇಗವಾಗಿ ಬಂದು ದೆಹಲಿ ರಸ್ತೆಯ ಡಿವೈಡರ್ ಮೇಲೆ ಮಲಗಿದ್ದವರ ಮೇಲೆ ಹತ್ತಿದ ಟ್ರಕ್; 4 ಜನ ಸಾವು

ಈ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯ ನಂತರ ಚಾಲಕ ಟ್ರಕ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ.

Accident: ವೇಗವಾಗಿ ಬಂದು ದೆಹಲಿ ರಸ್ತೆಯ ಡಿವೈಡರ್ ಮೇಲೆ ಮಲಗಿದ್ದವರ ಮೇಲೆ ಹತ್ತಿದ ಟ್ರಕ್; 4 ಜನ ಸಾವು
ಡಿವೈಡರ್ ಮೇಲೆ ಟ್ರಕ್ ಹತ್ತಿ ನಾಲ್ವರು ಸಾವು
TV9 Web
| Edited By: |

Updated on: Sep 21, 2022 | 9:15 AM

Share

ನವದೆಹಲಿ: ರಸ್ತೆ ವಿಭಜಕದ (ಡಿವೈಡರ್) ಮೇಲೆ ಮಲಗಿ ನಿದ್ರೆ ಮಾಡುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಟ್ರಕ್ ಒಂದು ಹತ್ತಿದ ಪರಿಣಾಮ ಗಾಢ ನಿದ್ರೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯರಾತ್ರಿ 1.51ರ ಸುಮಾರಿಗೆ ಈ ಘಟನೆ ನಡೆದಿದೆ. ದೆಹಲಿಯ ಸೀಮಾಪುರಿಯಲ್ಲಿ (Delhi Accident) ಡಿಟಿಸಿ ಡಿಪೋ ರೆಡ್‌ಲೈಟ್ ದಾಟುತ್ತಿರುವಾಗ ವೇಗವಾಗಿ ಬಂದ ಟ್ರಕ್ (Truck) ಜನರ ಮೇಲೆ ಹರಿದು ಎಲ್ಲರನ್ನೂ ಅಪ್ಪಚ್ಚಿ ಮಾಡಿದೆ.

ಈ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ 4 ವ್ಯಕ್ತಿಗಳನ್ನು 52 ವರ್ಷದ ಕರೀಮ್, 25 ವರ್ಷದ ಚೊಟ್ಟೆ ಖಾನ್ಸ್, 38 ವರ್ಷದ ಶಾ ಆಲಂ ಮತ್ತು 45 ವರ್ಷದ ರಾಹುಲ್ ಎಂದು ಗುರುತಿಸಲಾಗಿದೆ. 16 ವರ್ಷದ ಮನೀಶ್ ಮತ್ತು 30 ವರ್ಷದ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಒಳಚರಂಡಿ ದುರಸ್ತಿ ಕಾಮಗಾರಿ ವೇಳೆ ವಸತಿ ಗಡಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು

ಈ ಘಟನೆಯ ನಂತರ ಚಾಲಕ ಟ್ರಕ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಆ ವಾಹನವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ಅನೇಕ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?