AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೊವಿಡ್ ಸೋಂಕಿತರು ಗುಣಮುಖರಾಗಿದ್ದಾರೆ, ಈ ಟ್ರೆಂಡ್ ಮುಂದುವರೆಯಬೇಕು; ಲವ್ ಅಗರ್ವಾಲ್

Luv Agarwal: ರಾಷ್ಟ್ರವ್ಯಾಪಿ 3ನೇ ಹಂತದ ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ನೀಡಲಾದ ಕೊವಿಡ್‌-19 ಲಸಿಕೆ ಡೋಸ್‌ಗಳ  ಸಂಖ್ಯೆ ಇಂದು ಸುಮಾರು 18.44  ಕೋಟಿಗೆ ತಲುಪಿದೆ. ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೊವಿಡ್ ಸೋಂಕಿತರು ಗುಣಮುಖರಾಗಿದ್ದಾರೆ, ಈ ಟ್ರೆಂಡ್ ಮುಂದುವರೆಯಬೇಕು; ಲವ್ ಅಗರ್ವಾಲ್
ಲವ್ ಅಗರ್ವಾಲ್
guruganesh bhat
|

Updated on:May 18, 2021 | 5:47 PM

Share

ದೆಹಲಿ: ಕಳೆದ 24 ಗಂಟೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಕೊವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಪ್ರತಿದಿನ 3 ಲಕ್ಷಕ್ಕಿಂತ ಕಡಿಮೆ ಕೊವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಮಾರ್ಚ್ ಮಧ್ಯಭಾಗದಲ್ಲಿ 7 ಲಕ್ಷ ಕೊವಿಡ್​ ಟೆಸ್ಟ್ ಮಾಡಲಾಗುತ್ತಿತ್ತು. ಆದರೆ ಈಗ ಪ್ರತಿದಿನ 18 ಲಕ್ಷಕ್ಕೂ ಹೆಚ್ಚು ಟೆಸ್ಟ್ ಮಾಡಲಾಗುತ್ತಿದೆ. ಕಳೆದ ಒಂದು ವಾರದಿಂದ ದೇಶದಲ್ಲಿ ಕೊವಿಡ್ ಪಾಸಿಟಿವಿಟಿ ದರ ಕುಸಿದಿದೆ. ಕೊವಿಡ್ ಸೋಂಕಿನ ಹರಡುವಿಕೆಯಲ್ಲಿ ಇಳಿಮುಖವಾಗುವ ಇದೇ ಟ್ರೆಂಟ್ ಮುಂದುವರೆಯಬೇಕು ಎಂದು ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಹೇಳಿದರು. 

ಭಾರತದ ಒಟ್ಟಾರೆ ಕೊವಿಡ್ ಚೇತರಿಕೆ ಪ್ರಕರಣಗಳ ಸಂಖ್ಯೆ ಇಂದು 2,15,96,512 ಕ್ಕೆ ತಲುಪಿದೆ.  ರಾಷ್ಟ್ರೀಯ ಚೇತರಿಕೆ  ದರವು  ಮತ್ತಷ್ಟು ಸುಧಾರಿಸಿ ಶೇಕಡಾ 85. 60ಕ್ಕೆ ತಲುಪಿದೆ. ಕೊವಿಡ್ ಸೋಂಕಿನ ಹೊಸ ಚೇತರಿಕೆ ಪ್ರಕರಣಗಳಲ್ಲಿ ಹತ್ತು ರಾಜ್ಯಗಳು ಶೇಕಡಾ75.77 ರಷ್ಟು ಪಾಲು ಹೊಂದಿವೆ. ರಾಷ್ಟ್ರವ್ಯಾಪಿ 3ನೇ ಹಂತದ ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ನೀಡಲಾದ ಕೊವಿಡ್‌-19 ಲಸಿಕೆ ಡೋಸ್‌ಗಳ  ಸಂಖ್ಯೆ ಇಂದು ಸುಮಾರು 18.44  ಕೋಟಿಗೆ ತಲುಪಿದೆ. ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರತಿಯೊಂದು ಹಳ್ಳಿಯಲ್ಲಿಯೂ ಜನಸಾಮಾನ್ಯರಿಗೆ ದೊರೆಯುವಂತೆ ಪಲ್ಸ್ ಆಕ್ಸಿಮೀಟರ್​ನ ವ್ಯವಸ್ಥೆ ಇರಬೇಕು. ಶೇಕಡಾ 94ಕ್ಕಿಂತ ಕಡಿಮೆ ಸ್ಯಾಚುರೇಷನ್ ಇದ್ದರೆ ತಕ್ಷಣವೇ ಆಸ್ಪತ್ರೆಗೆ ಸೇರಿಸಬೇಕು ಎಂದು ಅವರು ಸೂಚಿಸಿದರು.

ಸದ್ಯ ಮಕ್ಕಳಲ್ಲಿ ಕೊರೊನಾ ಸೋಂಕಿನ ಲಕ್ಷಣ ಗಂಭೀರವಾಗಿರಲ್ಲ. ಮಕ್ಕಳಲ್ಲಿ ಕೊವಿಡ್ ಕಂಡುಬಂದರೂ ಸಾವು ಆಗದಿದ್ದರೆ ಗುರುತಿಸಲು ಸವಾಲು ಉಂಟಾಗಲಿದೆ. ಸಾವು ಉಂಟಾದಲ್ಲಿ ಸಾವು ವರದಿ ಯಾವುದೇ ಕಾರಣಕ್ಕೂ ಮುಚ್ಚಿಡದೇ ವರದಿ ಮಾಡಲು ರಾಜ್ಯಗಳಿಗೆ ಸೂಚನೆ ನೀಡಿದ್ದೇವೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,329 ಸಾವುಗಳು  ವರದಿಯಾಗಿವೆ. ಸದ್ಯ ರಾಷ್ಟ್ರೀಯ ಮರಣ ದರವು ಶೇಕಡಾ1.10 ರಷ್ಟಿದೆ.  ಹೊಸ ಸಾವುಗಳಲ್ಲಿ ಹತ್ತು ರಾಜ್ಯಗಳ ಪಾಲು ಶೇಕಡಾ 75.98ರಷ್ಟಿದೆ. ಮಹಾರಾಷ್ಟ್ರದಲ್ಲಿ  ಗರಿಷ್ಠ ಸಾವುನೋವುಗಳು  ಸಂಭವಿಸಿವೆ. ಕರ್ನಾಟಕವು  476  ದೈನಂದಿನ  ಸಾವುಗಳೊಂದಿಗೆ  ನಂತರದ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ:  ಕೊವಿಡ್ ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸ; ಬಿಹಾರ ಸರ್ಕಾರಕ್ಕೆ ಪಾಟ್ನಾ ಹೈಕೋರ್ಟ್ ತರಾಟೆ

ಕೊವಿಡ್-19 ಮಹಾಮಾರಿ ವಯಸ್ಕರಲ್ಲಿ ಖಿನ್ನತೆ, ಹತಾಶೆ, ಒಂಟಿತನದಂಥ ಮಾನಸಿಕ ಅಸ್ವಸ್ಥತೆಗಳನ್ನು ಸೃಷ್ಟಿಸುತ್ತಿದೆ

(4 lakh covid patients recovered in last 24 hours this trend must continue says union health ministry Luv Agarwal)

Published On - 5:26 pm, Tue, 18 May 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್