AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಷ್ಕರ್​ ಇ ತೊಯ್ಬಾ ಉಗ್ರರಿಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ ಬಂಡಿಪೋರಾ ಪೊಲೀಸರು !

ಅಜೀಜ್ ಭಟ್​ ಪಾಕಿಸ್ತಾನಿ ಮೂಲದ ಉಗ್ರ ಉಮರ್​ ಲಾಲಾ ಮತ್ತು ಕಾಶ್ಮೀರದ ಹಾಜಿನ್​ನ ಭಯೋತ್ಪಾದಕನಾಗಿದ್ದ ಮೃತ ಸಲೀಂ ಪರ್ರೆಯೊಟ್ಟಿಗೆ ನಿರಂತರವಾಗಿ ಸಂಪರ್ಕದಲ್ಲಿ ಇದ್ದವನಾಗಿದ್ದ.

ಲಷ್ಕರ್​ ಇ ತೊಯ್ಬಾ ಉಗ್ರರಿಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ ಬಂಡಿಪೋರಾ ಪೊಲೀಸರು !
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Apr 03, 2022 | 3:46 PM

Share

ಜಮ್ಮು-ಕಾಶ್ಮೀರದಾದ್ಯಂತ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ತೀವ್ರವಾಗಿ ನಡೆಯುತ್ತಿದೆ. ಇಂದು ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿದ್ದು, ಲಷ್ಕರ್​ ಇ ತೊಯಬಾ ಸಂಘಟನೆಗೆ ನೆರವು ನೀಡುತ್ತಿದ್ದ ನಾಲ್ವರನ್ನ ಬಂಧಿಸಿದ್ದಾರೆ. ಬಂಧಿತರು ಜಿಲ್ಲೆಯಲ್ಲಿನ ಲಷ್ಕರ್​ ಇ ತೊಯಬಾ ಸಂಘಟನೆಗೆ ಸಾಗಣೆಗೆ, ಸಂಚಾರಕ್ಕೆ ಸಹಾಯ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಬಂಡಿಪೋರಾದ ಅಷ್ಟಾಂಗೋ ಎಂಬ ಪ್ರದೇಶದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹಾಗೇ ಇನ್ನೊಬ್ಬಾತನನ್ನು ರಾಖ್​​ ಹಾಜಿನ್​ ಎಂಬಲ್ಲಿ ಅರೆಸ್ಟ್ ಮಾಡಲಾಗಿದೆ. ಇರ್ಫಾನ್ ಅಹ್ಮದ್​ ಭಟ್​, ಸಜದ್​ ಅಹ್ಮದ್​ ಮಿರ್​, ಇರ್ಫಾನ್​ ಅಹ್ಮದ್ ಜಾನ್​ ಎಂಬುವರು ಅಷ್ಟಾಂಗೋದಲ್ಲಿ ಬಂಧಿತರಾದವರಾಗಿದ್ದು, ಇರ್ಫಾನ್ ಅಜೀಜ್ ಭಟ್​ ರಾಖ್​​ ಹಾಜಿನ್​​ನಲ್ಲಿ ಅರೆಸ್ಟ್ ಆಗಿದ್ದಾನೆ. ಈತನಿಂದ ಚೈನೀಸ್ ಗ್ರನೇಡ್ ವಶಪಡಿಸಿಕೊಳ್ಳಲಾಗಿದೆ. 

ಇದರಲ್ಲಿ ಅಜೀಜ್ ಭಟ್​ ಪಾಕಿಸ್ತಾನಿ ಮೂಲದ ಉಗ್ರ ಉಮರ್​ ಲಾಲಾ ಮತ್ತು ಕಾಶ್ಮೀರದ ಹಾಜಿನ್​ನ ಭಯೋತ್ಪಾದಕನಾಗಿದ್ದ ಮೃತ ಸಲೀಂ ಪರ್ರೆಯೊಟ್ಟಿಗೆ ನಿರಂತರವಾಗಿ ಸಂಪರ್ಕದಲ್ಲಿ ಇದ್ದವನಾಗಿದ್ದ. ಈಗಂತೂ ಪಾಕಿಸ್ತಾನದಲ್ಲಿರುವ ತನ್ನ ಸಹಚರರೊಂದಿಗೆ ಸೇರಿಕೊಂಡು  ಹಾಜಿನ್​ನಲ್ಲಿ ಹಲವು ಉಗ್ರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ.  ಸದ್ಯ ಇವರನ್ನೆಲ್ಲ ಬಂಡಿಪೋರಾ ಮತ್ತು ಹಾಜಿನ್​ನ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮೂರು ಮದುವೆಯಾಗಿದ್ದವನ ಅಸ್ತಿಪಂಜರ ದಟ್ಟಾರಣ್ಯದ ಬಾವಿಯಲ್ಲಿ ಸಿಕ್ತು; ಕೊಲೆ ಮಾಡಿದ್ಯಾರು?-ಆರೋಪಿಗಳಿಗಾಗಿ ಹುಡುಕಾಟ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!