AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ್ರು

ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ವಿಜಯಯಾತ್ರೆ ನಡೆಸಲಾಯಿತು.

ಮಧ್ಯಪ್ರದೇಶ: ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ್ರು
ಪ್ರಾತಿನಿಧಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Dec 05, 2023 | 8:13 AM

Share

ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ವಿಜಯಯಾತ್ರೆ ನಡೆಸಲಾಯಿತು.

ಭಾನುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೆರವಣಿಗೆ ವಕೀಲ ಪಠಾಣ್ ಎಂಬುವವರ ಮನೆಯ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಠಾಣ್ ಮೆರವಣಿಗೆಯನ್ನು ವಿರೋಧಿಸಿದರು ಮತ್ತು ವಾಗ್ವಾದವನ್ನು ಪ್ರಾರಂಭಿಸಿದರು. ನಂತರ ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದರು ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ಓದಿ:ವಿಧಾನಸಭೆ ಚುನಾವಣೆ ಫಲಿತಾಂಶ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಬಿಜೆಪಿ ತೆಕ್ಕೆಗೆ, ತೆಲಂಗಾಣಕ್ಕೆ ಕಾಂಗ್ರೆಸ್ ‘ಗ್ಯಾರಂಟಿ’

ಅವರ ಪತ್ನಿ ಶಬನಂ ಅವರ ಮನವಿ ಮೇರೆಗೆ ಮನೆಯ ಮೇಲ್ಛಾವಣಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕುದಿಯುವ ನೀರನ್ನು ಹಾಕಿದ್ದಾರೆ. ಪಠಾಣ್, ಅವರ ಪತ್ನಿ ಮತ್ತು ಅವರ ಇಬ್ಬರು ಪುತ್ರರ ವಿರುದ್ಧ ಭಾರತೀಯ ದಂಡ ಸಂಹಿತೆ 294, 323, 324 ಹಾಗೂ 506ರ ಅಡಿ ಆರೋಪ ಹೊರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಉಸ್ತುವಾರಿ ಉಮ್ರಾವ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್