AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ್ರು

ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ವಿಜಯಯಾತ್ರೆ ನಡೆಸಲಾಯಿತು.

ಮಧ್ಯಪ್ರದೇಶ: ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ್ರು
ಪ್ರಾತಿನಿಧಿಕ ಚಿತ್ರImage Credit source: NDTV
Follow us
ನಯನಾ ರಾಜೀವ್
|

Updated on: Dec 05, 2023 | 8:13 AM

ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ವಿಜಯಯಾತ್ರೆ ನಡೆಸಲಾಯಿತು.

ಭಾನುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೆರವಣಿಗೆ ವಕೀಲ ಪಠಾಣ್ ಎಂಬುವವರ ಮನೆಯ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಠಾಣ್ ಮೆರವಣಿಗೆಯನ್ನು ವಿರೋಧಿಸಿದರು ಮತ್ತು ವಾಗ್ವಾದವನ್ನು ಪ್ರಾರಂಭಿಸಿದರು. ನಂತರ ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದರು ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ಓದಿ:ವಿಧಾನಸಭೆ ಚುನಾವಣೆ ಫಲಿತಾಂಶ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಬಿಜೆಪಿ ತೆಕ್ಕೆಗೆ, ತೆಲಂಗಾಣಕ್ಕೆ ಕಾಂಗ್ರೆಸ್ ‘ಗ್ಯಾರಂಟಿ’

ಅವರ ಪತ್ನಿ ಶಬನಂ ಅವರ ಮನವಿ ಮೇರೆಗೆ ಮನೆಯ ಮೇಲ್ಛಾವಣಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕುದಿಯುವ ನೀರನ್ನು ಹಾಕಿದ್ದಾರೆ. ಪಠಾಣ್, ಅವರ ಪತ್ನಿ ಮತ್ತು ಅವರ ಇಬ್ಬರು ಪುತ್ರರ ವಿರುದ್ಧ ಭಾರತೀಯ ದಂಡ ಸಂಹಿತೆ 294, 323, 324 ಹಾಗೂ 506ರ ಅಡಿ ಆರೋಪ ಹೊರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಉಸ್ತುವಾರಿ ಉಮ್ರಾವ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ