AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಎನ್​ಕೌಂಟರ್​, ಪೊಲೀಸರಿಂದ ನಾಲ್ವರು ನಕ್ಸಲರ ಹತ್ಯೆ

ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ಎನ್​ಕೌಂಟರ್​ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಹೀಗಾಗಿ ಗಡ್ಚಿರೋಲಿ ಅರಣ್ಯದಲ್ಲಿ ಅಡಗಿ ಕೂತಿದ್ದರು.

ಮಹಾರಾಷ್ಟ್ರದಲ್ಲಿ ಎನ್​ಕೌಂಟರ್​, ಪೊಲೀಸರಿಂದ ನಾಲ್ವರು ನಕ್ಸಲರ ಹತ್ಯೆ
ನಕ್ಸಲರು-ಸಾಂದರ್ಭಿಕ ಚಿತ್ರImage Credit source: India TV
ನಯನಾ ರಾಜೀವ್
|

Updated on: Mar 19, 2024 | 9:18 AM

Share

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮಂಗಳವಾರ ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರ ಪೊಲೀಸರು ಉತ್ತಮ ಯಶಸ್ಸನ್ನು ಸಾಧಿಸಿದ್ದಾರೆ, ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಹೀಗಾಗಿ ಗಡ್ಚಿರೋಲಿ ಅರಣ್ಯದಲ್ಲಿ ಅಡಗಿ ಕೂತಿದ್ದರು. ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಮತ್ತು ಸಿಆರ್‌ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದರು.

ಬಳಿಕ ನಕ್ಸಲರಿಂದ ಕೆ 47 ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಕ್ಸಲರ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ, ಇವರನ್ನು ಹಿಡಿದುಕೊಟ್ಟವರಿಗೆ 36 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗಡ್ಚಿರೋಲಿ ಮಹಾರಾಷ್ಟ್ರದ ನಕ್ಸಲ್ ಪೀಡಿತ ಪ್ರದೇಶವಾಗಿದೆ.

ಮತ್ತಷ್ಟು ಓದಿ: Chhattisgarh: ಕಂಕೇರ್​ನಲ್ಲಿ ಎನ್​ಕೌಂಟರ್​, ಮೂವರು ನಕ್ಸಲರ ಕೊಂದ ಯೋಧರು

ಛತ್ತೀಸ್‌ಗಢದ ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಲ್ಲಿ ಶನಿವಾರದಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್​ನನ್ನು ಹತ್ಯೆ ಮಾಡಲಾಗಿತ್ತು. ಕೊಯ್ಲಿಬೆರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಗಳ ಜಂಟಿ ತಂಡವನ್ನು ಕಳುಹಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ