AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು

ಉದ್ಯೋಗಕ್ಕಾಗಿ ಕುವೈತ್‌ನ ಅಬ್ಬಾಸಿಯಾದಲ್ಲಿ ನೆಲೆಸಿದ್ದ ಕುಟುಂಬ ಕೇರಳದ ತಾಯಿಯ ಮನೆಗೆ ಹೋಗಿ ರಜೆ ಮುಗಿಸಿಕೊಂಡು ಬಂದು ರಾತ್ರಿ ಮಲಗಿದ್ದರು. ಆದರೆ ತಡರಾತ್ರಿ ಅಗ್ನಿ ದುರಂತ ಸಂಭವಿಸಿದ್ದು ಇಡೀ ಕುಟುಂಬ ಮೃತಪಟ್ಟಿದೆ. ಗಂಡ, ಹೆಂಡತಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು
ಕುವೈತ್​ನಲ್ಲಿ ಅಗ್ನಿ ಅವಘಡ: ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Jul 21, 2024 | 9:28 AM

Share

ಕೇರಳ, ಜುಲೈ.21: ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕೇರಳದ ಅಲಪ್ಪುಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ (Death) ಘಟನೆ ಕುವೈತ್‌ನ ಅಬ್ಬಾಸಿಯಾದಲ್ಲಿ ನಡೆದಿದೆ. ಮ್ಯಾಥ್ಯೂಸ್ ವರ್ಗೀಸ್ ಮುಳಕಲ್ (40), ಅವರ ಪತ್ನಿ ಲಿನಿ ಅಬ್ರಹಾಂ (35) ಮತ್ತು ಅವರ ಮಕ್ಕಳಾದ ಐರಿನ್ (14) ಮತ್ತು ಇಸಾಕ್ (9) ಮೃತ ದುರ್ದೈವಿಗಳು.

ಮ್ಯಾಥ್ಯೂ ಅವರು ಉದ್ಯೋಗಕ್ಕಾಗಿ ಕುವೈತ್‌ನ ಅಬ್ಬಾಸಿಯಾದಲ್ಲಿ ಕಳೆದ 15 ವರ್ಷಗಳಿಂದ ಕುಟುಂಬದೊಂದಿಗೆ ನೆಲೆಸಿದ್ದರು. ಲಿನಿ ಆರೋಗ್ಯ ಸಚಿವಾಲಯದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಐರಿನ್ ಮತ್ತು ಇಸಾಕ್ 9 ಮತ್ತು 4 ನೇ ತರಗತಿಯಲ್ಲಿ ಓದುತ್ತಿದ್ದರು. ಶುಕ್ರವಾರ ರಾತ್ರಿ ಅವರು ಮಲಗುವ ಕೋಣೆಯಲ್ಲಿದ್ದ ಎ.ಸಿ ಯಂತ್ರದ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಇದರಿಂದ ಇಡೀ ಕುಟುಂಬ ಸಜೀವ ದಹನವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪದವಿ ಪಡೆದ ಪವನ್ ಕಲ್ಯಾಣ್ ಪತ್ನಿ, ಎಷ್ಟು ಓದಿದ್ದಾರೆ ಗೊತ್ತೆ?

ಕೇರಳದ ಕೊಚ್ಚಿ ಬಳಿಯ ನೆಡುಂಬಸ್ಸರಿ ಮೂಲದವರಾದ ಮ್ಯಾಥ್ಯೂ ಮುಜಾಕಲ್ ತಾಯಿ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಕಳೆದ ಗುರುವಾರವಷ್ಟೇ ಅವರು ತಮ್ಮ ಮಕ್ಕಳು ಹಾಗೂ ಪತ್ನಿ ಜೊತೆ ರಜೆ ಮುಗಿಸಿಕೊಂಡು ಕುವೈತ್‌ಗೆ ತೆರಳಿದ್ದರು. ಶುಕ್ರವಾರ ಅಗ್ನಿ ದುರಂತ ಸಂಭವಿಸಿದೆ. ಮ್ಯಾಥ್ಯೂ ಕೇರಳದಿಂದ ಕುವೈತ್​ನ ಮನೆ ಬಂದ ಬಳಿಕ ತಾಯಿಗೆ ಕರೆ ಮಾಡಿ ನಾವು ಸುರಕ್ಷಿತವಾಗಿ ಮನೆ ತಲುಪಿದ್ದೇವೆ. ದಣಿದಿರುವುದರಿಂದ ವಿಶ್ರಾಂತಿ ಪಡೆಯಬೇಕೆಂದು ಹೇಳಿ ಮಲಗಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಇನ್ನು ಬೆಂಕಿ ಅವಘಡದ ವೇಳೆ ನೆರೆಹೊರೆಯವರು ಅಗ್ನಿಶಾಮಕ ಮತ್ತು ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು ಅಗ್ನಿ ನಂದಿಸಿ ಕುಟುಂಬವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕೇರಳದಲ್ಲಿರುವ ಕುಟುಂಬದ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದೆ ಮತ್ತು ಪಾರ್ಥಿವ ಶರೀರವನ್ನು ಆದಷ್ಟು ಬೇಗ ಮನೆಗೆ ಕಳುಹಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಹೇಳಿದೆ. ಶನಿವಾರ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ