AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು

ಉದ್ಯೋಗಕ್ಕಾಗಿ ಕುವೈತ್‌ನ ಅಬ್ಬಾಸಿಯಾದಲ್ಲಿ ನೆಲೆಸಿದ್ದ ಕುಟುಂಬ ಕೇರಳದ ತಾಯಿಯ ಮನೆಗೆ ಹೋಗಿ ರಜೆ ಮುಗಿಸಿಕೊಂಡು ಬಂದು ರಾತ್ರಿ ಮಲಗಿದ್ದರು. ಆದರೆ ತಡರಾತ್ರಿ ಅಗ್ನಿ ದುರಂತ ಸಂಭವಿಸಿದ್ದು ಇಡೀ ಕುಟುಂಬ ಮೃತಪಟ್ಟಿದೆ. ಗಂಡ, ಹೆಂಡತಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು
ಕುವೈತ್​ನಲ್ಲಿ ಅಗ್ನಿ ಅವಘಡ: ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು
ಆಯೇಷಾ ಬಾನು
|

Updated on: Jul 21, 2024 | 9:28 AM

Share

ಕೇರಳ, ಜುಲೈ.21: ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕೇರಳದ ಅಲಪ್ಪುಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ (Death) ಘಟನೆ ಕುವೈತ್‌ನ ಅಬ್ಬಾಸಿಯಾದಲ್ಲಿ ನಡೆದಿದೆ. ಮ್ಯಾಥ್ಯೂಸ್ ವರ್ಗೀಸ್ ಮುಳಕಲ್ (40), ಅವರ ಪತ್ನಿ ಲಿನಿ ಅಬ್ರಹಾಂ (35) ಮತ್ತು ಅವರ ಮಕ್ಕಳಾದ ಐರಿನ್ (14) ಮತ್ತು ಇಸಾಕ್ (9) ಮೃತ ದುರ್ದೈವಿಗಳು.

ಮ್ಯಾಥ್ಯೂ ಅವರು ಉದ್ಯೋಗಕ್ಕಾಗಿ ಕುವೈತ್‌ನ ಅಬ್ಬಾಸಿಯಾದಲ್ಲಿ ಕಳೆದ 15 ವರ್ಷಗಳಿಂದ ಕುಟುಂಬದೊಂದಿಗೆ ನೆಲೆಸಿದ್ದರು. ಲಿನಿ ಆರೋಗ್ಯ ಸಚಿವಾಲಯದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಐರಿನ್ ಮತ್ತು ಇಸಾಕ್ 9 ಮತ್ತು 4 ನೇ ತರಗತಿಯಲ್ಲಿ ಓದುತ್ತಿದ್ದರು. ಶುಕ್ರವಾರ ರಾತ್ರಿ ಅವರು ಮಲಗುವ ಕೋಣೆಯಲ್ಲಿದ್ದ ಎ.ಸಿ ಯಂತ್ರದ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಇದರಿಂದ ಇಡೀ ಕುಟುಂಬ ಸಜೀವ ದಹನವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪದವಿ ಪಡೆದ ಪವನ್ ಕಲ್ಯಾಣ್ ಪತ್ನಿ, ಎಷ್ಟು ಓದಿದ್ದಾರೆ ಗೊತ್ತೆ?

ಕೇರಳದ ಕೊಚ್ಚಿ ಬಳಿಯ ನೆಡುಂಬಸ್ಸರಿ ಮೂಲದವರಾದ ಮ್ಯಾಥ್ಯೂ ಮುಜಾಕಲ್ ತಾಯಿ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಕಳೆದ ಗುರುವಾರವಷ್ಟೇ ಅವರು ತಮ್ಮ ಮಕ್ಕಳು ಹಾಗೂ ಪತ್ನಿ ಜೊತೆ ರಜೆ ಮುಗಿಸಿಕೊಂಡು ಕುವೈತ್‌ಗೆ ತೆರಳಿದ್ದರು. ಶುಕ್ರವಾರ ಅಗ್ನಿ ದುರಂತ ಸಂಭವಿಸಿದೆ. ಮ್ಯಾಥ್ಯೂ ಕೇರಳದಿಂದ ಕುವೈತ್​ನ ಮನೆ ಬಂದ ಬಳಿಕ ತಾಯಿಗೆ ಕರೆ ಮಾಡಿ ನಾವು ಸುರಕ್ಷಿತವಾಗಿ ಮನೆ ತಲುಪಿದ್ದೇವೆ. ದಣಿದಿರುವುದರಿಂದ ವಿಶ್ರಾಂತಿ ಪಡೆಯಬೇಕೆಂದು ಹೇಳಿ ಮಲಗಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಇನ್ನು ಬೆಂಕಿ ಅವಘಡದ ವೇಳೆ ನೆರೆಹೊರೆಯವರು ಅಗ್ನಿಶಾಮಕ ಮತ್ತು ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು ಅಗ್ನಿ ನಂದಿಸಿ ಕುಟುಂಬವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕೇರಳದಲ್ಲಿರುವ ಕುಟುಂಬದ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದೆ ಮತ್ತು ಪಾರ್ಥಿವ ಶರೀರವನ್ನು ಆದಷ್ಟು ಬೇಗ ಮನೆಗೆ ಕಳುಹಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಹೇಳಿದೆ. ಶನಿವಾರ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?