Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವಸತಿ ಖಾಲಿ ಮಾಡುವಂತೆ ಪಿಡಿಪಿ ಪಕ್ಷದ ನಾಲ್ವರಿಗೆ ಸೂಚನೆ; ಮೆಹಬೂಬಾ ಮುಫ್ತಿ ತೀವ್ರ ಆಕ್ರೋಶ

ಜಮ್ಮು-ಕಾಶ್ಮೀರದ ಆಡಳಿತ ಸದ್ಯ ಕೆಲವು ಹಳೇ ಪದ್ಧತಿಗಳನ್ನು ತೆಗೆದುಹಾಕಲು ನಿರ್ಧರಿಸಿದ್ದು, ಅದರ ಭಾಗವಾಗಿ ಸರ್ಕಾರಿ ಅಧಿಕಾರಿಗಳಿಗೆ ನೀಡಲಾಗಿದ್ದ ಸರ್ಕಾರಿ ವಸತಿಗಳನ್ನೂ ತೆರವುಗೊಳಿಸಿದೆ.

ಸರ್ಕಾರಿ ವಸತಿ ಖಾಲಿ ಮಾಡುವಂತೆ ಪಿಡಿಪಿ ಪಕ್ಷದ ನಾಲ್ವರಿಗೆ ಸೂಚನೆ; ಮೆಹಬೂಬಾ ಮುಫ್ತಿ ತೀವ್ರ ಆಕ್ರೋಶ
ಮೆಹಬೂಬಾ ಮುಫ್ತಿ
Follow us
TV9 Web
| Updated By: Lakshmi Hegde

Updated on: Jul 10, 2021 | 9:59 AM

ಶ್ರೀನಗರ: ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ(ಪಿಡಿಪಿ)ದ ನಾಲ್ವರು ನಾಯಕರಿಗೆ ಸರ್ಕಾರಿ ವಸತಿಯನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಪಿಡಿಪಿಯ ಮಾಜಿ ಸಚಿವ, ಪಾಂಪೋರ್​ ಶಾಸಕ ಝಹೂರ್​ ಮಿರ್​, ಮಾಜಿ ಶಾಸಕ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ನಿಜಾಮುದ್ದೀನ್​ ಭಟ್​, ಶೋಪಿಯಾನಾದ ಮಾಜಿ ಶಾಸಕ ಯೂಸುಫ್​ ಭಟ್​ ಮತ್ತು ಮಾಜಿ ಶಾಸಕ ಐಜಾಜ್​ ಮಿರ್​ ಅವರಿನ್ನೂ ಶ್ರೀನಗರದ ಸರ್ಕಾರಿ ವಸತಿಗಳಲ್ಲೇ ಇದ್ದರು. ಇದೀಗ ನಾಲ್ಕೂ ಮಂದಿಯ ಬಳಿ ಆ ಸರ್ಕಾರಿ ವಸತಿಯನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ.

ಆದರೆ ಹೀಗೆ ತಮ್ಮ ಪಕ್ಷದ ನಾಲ್ವರ ಬಳಿ ಸರ್ಕಾರಿ ವಸತಿ ಖಾಲಿ ಮಾಡಲು ಸೂಚಿಸಿದ್ದರಿಂದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ತೀವ್ರ ಕೋಪಗೊಂಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್​ ಮನೋಜ್​ ಸಿನ್ಹಾ ಮಧ್ಯಪ್ರವೇಶ ಮಾಡಬೇಕು. ವಿಷಯ ಇತ್ಯರ್ಥ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ನಮ್ಮ ಪಕ್ಷ ಪಿಡಿಪಿಯನ್ನು ಇಲ್ಲಿನ ಆಡಳಿತ ಟಾರ್ಗೆಟ್​ ಮಾಡುತ್ತಿದೆ. ಈ ನಾಲ್ವರೂ ಶಾಸಕರಿಗೆ ಪರ್ಯಾಯವಾಗಿ ಯಾವುದೇ ವ್ಯವಸ್ಥೆ ಮಾಡದೆ, ಏಕಾಏಕಿ ಸರ್ಕಾರಿ ವಸತಿ ತೊರೆಯುವಂತೆ ಹೇಳಲಾಗುತ್ತಿದೆ. ಹಾಗೇನಾದರೂ ಮಾಡಿದರೆ ನಾನು ಲೆಫ್ಟಿನಂಟ್​ ಗವರ್ನರ್​ ಆಡಳಿತವನ್ನೇ ಹೊಣೆ ಮಾಡುತ್ತೇನೆ ಎಂದು ಮನೋಜ್​ ಸಿನ್ಹಾರಿಗೆ ಪತ್ರವನ್ನೂ ಬರೆದಿದ್ದಾರೆ.

ಜಮ್ಮು-ಕಾಶ್ಮೀರದ ಆಡಳಿತ ಸದ್ಯ ಕೆಲವು ಹಳೇ ಪದ್ಧತಿಗಳನ್ನು ತೆಗೆದುಹಾಕಲು ನಿರ್ಧರಿಸಿದ್ದು, ಅದರ ಭಾಗವಾಗಿ ಸರ್ಕಾರಿ ಅಧಿಕಾರಿಗಳಿಗೆ ನೀಡಲಾಗಿದ್ದ ಸರ್ಕಾರಿ ವಸತಿಗಳನ್ನೂ ತೆರವುಗೊಳಿಸಿದೆ. ಇನ್ನು ಮಾಜಿ ಶಾಸಕರಿಗೂ ಖಾಲಿ ಮಾಡುವಂತೆ ಸೂಚಿಸಿದೆ.

ಇದನ್ನೂ ಓದಿ:Zika Virus: ಕೇರಳದಲ್ಲಿ 14 ಜನರಲ್ಲಿ ಝಿಕಾ ವೈರಸ್​ ಪತ್ತೆ; ರಾಜ್ಯ ಸರ್ಕಾರದ ಸಹಾಯಕ್ಕೆ ಆಗಮಿಸಿದ ಕೇಂದ್ರ ತಜ್ಞರ ತಂಡ

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ