AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ದುರ್ಗಮ ಪ್ರದೇಶದ ಹಳ್ಳಿಯಲ್ಲಿ ಮೇಘಸ್ಫೋಟ; ನಾಲ್ವರು ಸಾವು, 30ಕ್ಕೂ ಹೆಚ್ಚು ಜನ ನಾಪತ್ತೆ

Cloudburst : ಜಮ್ಮುವಿನ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿದೆ. ಜುಲೈ ಅಂತ್ಯದವರೆಗೂ ಇಲ್ಲಿ ಹೆಚ್ಚಿನ ಮಳೆಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಮ್ಮು-ಕಾಶ್ಮೀರದ ದುರ್ಗಮ ಪ್ರದೇಶದ ಹಳ್ಳಿಯಲ್ಲಿ ಮೇಘಸ್ಫೋಟ; ನಾಲ್ವರು ಸಾವು, 30ಕ್ಕೂ ಹೆಚ್ಚು ಜನ ನಾಪತ್ತೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 28, 2021 | 10:30 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್​ ಜಿಲ್ಲೆಯ ದುರ್ಗಮ ಪ್ರದೇಶದಲ್ಲಿರುವ ಹಳ್ಳಿಯಲ್ಲಿ ಮೇಘಸ್ಫೋಟ ಉಂಟಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ ಹಾಗೂ 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 8 ಮನೆಗಳು ಕೊಚ್ಚಿಕೊಂಡು ಹೋಗಿವೆ. ಇಂದು (ಬುಧವಾರ) ಮುಂಜಾನೆ ಡಚ್ಚನ್ ತಹಸಿಲ್​ ಪ್ರದೇಶದಲ್ಲಿರುವ ಹೊಂಝಾರ್​ ಎಂಬ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಈ ಹಳ್ಳಿಗೆ ರಸ್ತೆ ಸಂಪರ್ಕವೂ ಇಲ್ಲ.

ಘಟನೆ ಬಗ್ಗೆ ಇಂಡಿಯಾ ಟುಡೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಿಶ್ತ್ವಾರ್​ ಜಿಲ್ಲೆಯ ಜಿಲ್ಲಾಧಿಕಾರಿ, ಗ್ರಾಮದಲ್ಲಿ ರಸ್ತೆ ಸಂಪರ್ಕವಿಲ್ಲ. ಇದೀಗ ಸೇನಾ ಸಿಬ್ಬಂದಿ ಮತ್ತು ಪೊಲೀಸ್​ ತಂಡ ಅಲ್ಲಿನ ಜನರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಜಮ್ಮುವಿನ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿದೆ. ಜುಲೈ ಅಂತ್ಯದವರೆಗೂ ಇಲ್ಲಿ ಹೆಚ್ಚಿನ ಮಳೆಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಕಿಶ್ತ್ವಾರದಲ್ಲಿ, ನದಿ, ನಾಲೆಗಳೆಲ್ಲ ತುಂಬಿ ಹರಿಯುತ್ತಿದ್ದು, ಜಲಪ್ರದೇಶದ ಸುತ್ತಮುತ್ತ ವಾಸಿಸುತ್ತಿರುವವರು ಆದಷ್ಟು ಸುರಕ್ಷಿತ ಪ್ರದೇಶಗಳಿಗೆ ಹೋಗಿ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: Basavaraj Bommai: ಸಿಎಂ ಆಗಿ ಬಸವರಾಜ ಬೊಮ್ಮಾಯಿ; ರೇಸ್​ನಲ್ಲಿದ್ದ ಇತರರು ಹಿಂದೆ ಬಿದ್ದದ್ದೆಲ್ಲಿ?

4 people killed over 30 were reported missing after a cloudburst in Jammu Kashmir

Published On - 9:30 am, Wed, 28 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ