AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್​ ಪವಾರ್​ ಪಕ್ಷ ತೊರೆದ ನಾಲ್ವರು ಪ್ರಮುಖ ನಾಯಕರು, ಶರದ್​ ಪವಾರ್​ ಬಣಕ್ಕೆ ಮತ್ತೆ ಸೇರ್ಪಡೆ ಸಾಧ್ಯತೆ

ನಾಲ್ವರು ಪ್ರಮುಖ ನಾಯಕರು ಅಜಿತ್​ ಪವಾರ್​ ಅವರ ಎನ್​ಸಿಪಿ ಪಕ್ಷವನ್ನು ತೊರೆದಿದ್ದಾರೆ. ಶರದ್​ ಪವಾರ್​ ಪಾಳಯವನ್ನು ಸೇರುವ ಸಾಧ್ಯತೆ ಇದೆ ಎನ್ನುವ ಗುಸುಗುಸು ಶುರುವಾಗಿದೆ.

ಅಜಿತ್​ ಪವಾರ್​ ಪಕ್ಷ ತೊರೆದ ನಾಲ್ವರು ಪ್ರಮುಖ ನಾಯಕರು, ಶರದ್​ ಪವಾರ್​ ಬಣಕ್ಕೆ ಮತ್ತೆ ಸೇರ್ಪಡೆ ಸಾಧ್ಯತೆ
ಅಜಿತ್ ಪವಾರ್
ನಯನಾ ರಾಜೀವ್
|

Updated on: Jul 17, 2024 | 10:14 AM

Share

ಅಜಿತ್ ಪವಾರ್ ನೇತೃತ್ವದ ಎನ್​ಸಿಪಿಗೆ ಹಿನ್ನಡೆಯಾಗಿದೆ. ಪಿಂಪ್ರಿ-ಚಿಂಚ್‌ವಾಡ ಘಟಕದ ನಾಲ್ವರು ಉನ್ನತ ನಾಯಕರು ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಶರದ್ ಪವಾರ್ ಬಣಕ್ಕೆ ಸೇರುವ ಸಾಧ್ಯತೆಯಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಹಿಂದೆ ಈ ಬೆಳವಣಿಗೆ ನಡೆದಿದೆ.

ಎನ್‌ಸಿಪಿಯ ಪಿಂಪ್ರಿ-ಚಿಂಚ್‌ವಾಡ ಘಟಕದ ಮುಖ್ಯಸ್ಥ ಅಜಿತ್ ಗವಾಹನೆ, ಪಿಂಪ್ರಿ-ಚಿಂಚ್‌ವಾಡ್ ವಿದ್ಯಾರ್ಥಿಗಳ ವಿಭಾಗದ ಮುಖ್ಯಸ್ಥ ಯಶ್ ಸಾನೆ ಮತ್ತು ಮಾಜಿ ಕಾರ್ಪೊರೇಟರ್‌ಗಳಾದ ರಾಹುಲ್ ಭೋಸ್ಲೆ ಮತ್ತು ಪಂಕಜ್ ಭಾಲೇಕರ್ ಅವರು ಅಜಿತ್ ಪವಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಭೋಸಾರಿ ವಿಧಾನಸಭಾ ಸ್ಥಾನಕ್ಕೆ ಟಿಕೆಟ್ ಪಡೆಯುವ ಪ್ರಯತ್ನ ವಿಫಲವಾದ ನಂತರ ಅಜಿತ್ ಗವಾಹನೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಎರಡು ಅವಧಿಗೆ ಭೋಸಾರಿ ಕ್ಷೇತ್ರದಿಂದ ಬಿಜೆಪಿ ಶಾಸಕ ಮಹೇಶ್ ಲಾಂಜೆ ಆಯ್ಕೆಯಾಗಿದ್ದಾರೆ.

ಮತ್ತಷ್ಟು ಓದಿ:ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: ಬಿಜೆಪಿ-ಎನ್‌ಸಿಪಿ-ಶಿವಸೇನಾ ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳಿಗೆ ಗೆಲುವು

ಲೋಕಸಭೆ ಚುನಾವಣೆಯಲ್ಲಿ, ಮಹಾ ವಿಕಾಸ್ ಅಘಾಡಿ (ಎಂವಿಎ) ಮಹಾರಾಷ್ಟ್ರದಲ್ಲಿ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವನ್ನು ಬೆರಗುಗೊಳಿಸಿತು. ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ರಾಯಗಡದಲ್ಲಿ ಕೇವಲ ಒಂದು ಸ್ಥಾನವನ್ನು ಗೆದ್ದರೆ, ಶರದ್ ಪವಾರ್ ಬಣ ಎಂಟು ಸ್ಥಾನಗಳನ್ನು ಗಳಿಸಿತು.

ಅಜಿತ್ ಪವಾರ್ ಪಾಳೆಯದ ಕೆಲವು ನಾಯಕರು ಶರದ್ ಪವಾರ್ ಪಾಳಯಕ್ಕೆ ಮರಳಲು ಸಿದ್ಧರಿದ್ದಾರೆ ಎಂಬ ಗುಸುಗುಸು ನಡುವೆಯೇ ರಾಜೀನಾಮೆ ಸುದ್ದಿ ಮುನ್ನೆಲೆಗೆ ಬಂದಿದೆ. ಈ ತಿಂಗಳ ಆರಂಭದಲ್ಲಿ, ಶರದ್ ಪವಾರ್ ಅವರು ತಮ್ಮ ಪಕ್ಷದ ಹಿರಿಯ ನಾಯಕ ಜಯಂತ್ ಪಾಟೀಲ್ ಅವರನ್ನು ಭೇಟಿಯಾದ ಎನ್‌ಸಿಪಿ ಬಣದ ಕೆಲವು ಶಾಸಕರು ಹೇಳಿದ್ದಾರೆ.

ಮಹಾರಾಷ್ಟ್ರದ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಕೂಡ ಬಣ ತೊರೆಯಬಹುದು ಎನ್ನುವ ಊಹಾಪೋಹಗಳಿವೆ. ಕಳೆದ ತಿಂಗಳು, ಮಹಾ ವಿಕಾಸ್ ಅಘಾಡಿಯ ಭಾಗವಾದ ಶಿವಸೇನೆಯ (ಯುಬಿಟಿ) ಹಿರಿಯ ನಾಯಕರೊಬ್ಬರು ಭುಜಬಲ್ ಅವರನ್ನು ಭೇಟಿಯಾಗಿದ್ದರು.

ಬಾರಾಮತಿ ಲೋಕಸಭಾ ಚುನಾವಣೆಯಲ್ಲಿ ಸುಪ್ರಿಯಾ ಸುಳೆ ವಿರುದ್ಧ ಸೋತ ನಂತರ ಅಜಿತ್ ಪವಾರ್ ಅವರು ತಮ್ಮ ಪತ್ನಿ ಸುನೇತ್ರಾ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಬಗ್ಗೆ ಭುಜಬಲ್ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!