AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ತರಗತಿ ಹುಡುಗನಿಂದ ಹೋಯ್ತು 4 ಮಹಿಳೆಯರ ಪ್ರಾಣ; ಕಣ್ಣುಜ್ಜಲು ಹೋಗಿ ಫೂಟ್​ಪಾತ್​​ಗೆ ಕಾರು ​ಹತ್ತಿಸಿದ ಹುಡುಗ

ಸದ್ಯ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.  ಮುಂಜಾನೆ 6.50ರ ಹೊತ್ತಿಗೆ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಸರಿಯಾಗಿ ದಾರಿ ಕಾಣುತ್ತಿರಲಿಲ್ಲ.

9ನೇ ತರಗತಿ ಹುಡುಗನಿಂದ ಹೋಯ್ತು 4 ಮಹಿಳೆಯರ ಪ್ರಾಣ; ಕಣ್ಣುಜ್ಜಲು ಹೋಗಿ ಫೂಟ್​ಪಾತ್​​ಗೆ ಕಾರು ​ಹತ್ತಿಸಿದ ಹುಡುಗ
ಕಾರು ಅಪಘಾತದ ಚಿತ್ರ
TV9 Web
| Edited By: |

Updated on:Jan 31, 2022 | 10:06 AM

Share

ಫೂಟ್​ಪಾತ್​ ಮೇಲೆ ಕುಳಿತಿದ್ದ ನಾಲ್ವರು ಮಹಿಳೆಯರ ಪ್ರಾಣ ಅಪ್ರಾಪ್ತನಿಂದಾಗಿ ಹೋಗಿದೆ. ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿದ ಬಾಲಕ, ವಾಹನವನ್ನು ಫೂಟ್​ಪಾತ್​ ಮೇಲೆ ಹರಿಸಿ, ಅಲ್ಲಿ ಕುಳಿತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆ ತೆಲಂಗಾಣದ (Telangana) ಕರೀಮ್​​ನಗರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾಗಿ ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.  

ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್​​ ಮಾಡುತ್ತಿದ್ದ. ಆದರೆ ನಿಯಂತ್ರಣ ತಪ್ಪಿದ ಕಾರಣ ಫೂಟ್​ಪಾತ್​ ಮೇಲೆ ಹರಿಯಿತು. ಅಲ್ಲಿ ಕುಳಿತಿದ್ದ ನಾಲ್ವರು ಮಹಿಳೆಯರ ಪ್ರಾಣ ಹೋಗಿದೆ. ಸದ್ಯ ಕಾರಿನಲ್ಲಿದ್ದ ಮೂವರು ಅಪ್ರಾಪ್ತರ ವಿರುದ್ಧ ಐಪಿಎಸ್​ ಸೆಕ್ಷನ್​ 304ರಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ, ಕಾರು ಡ್ರೈವ್​ ಮಾಡುತ್ತಿದ್ದ ಬಾಲಕನ ತಂದೆ ವಿರುದ್ಧವೂ ಕೇಸ್​ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.  ಮುಂಜಾನೆ 6.50ರ ಹೊತ್ತಿಗೆ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಸರಿಯಾಗಿ ದಾರಿ ಕಾಣುತ್ತಿರಲಿಲ್ಲ. ಈ ಮಧ್ಯೆ ಬಾಲಕ ತನ್ನ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್​​ನಿಂದ ಕೈ ತೆಗೆದಾದ ನಿಯಂತ್ರಣ ಕಳೆದುಕೊಂಡಿದ್ದಾನೆ. ಆಗ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದು, ಅಲ್ಲೇ ಫೂಟ್​ಪಾತ್​​ನ ತಾತ್ಕಾಲಿಕ ಗುಡಿಸಲಿನಲ್ಲಿದ್ದ ಮಹಿಳೆಯರಿಗೆ ಡಿಕ್ಕಿಯಾಗಿದೆ.  14 ವರ್ಷದ ಹುಡುಗಿ ಸೇರಿ 27-32 ವರ್ಷದೊಳಗಿನ ನಾಲ್ವರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಡ್ರೈವಿಂಗ್​​ಗೆ ಕುಳಿತಿದ್ದ ಬಾಲಕ ಸ್ಟೀರಿಂಗ್​ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಲ್ಲದೆ, ಬ್ರೇಕ್​ ಬದಲಿಗೆ ಆಕ್ಸಿಲರೇಟರ್​ ಪ್ರೆಸ್​ ಮಾಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಯಿತು ಎಂದಿದ್ದಾರೆ. ಈ ಬಾಲಕರೆಲ್ಲ 9ನೇ ತರಗತಿಯವರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಕಾರು ಅಲ್ಲೇ ಬಿಟ್ಟು, ಎಲ್ಲರೂ ಓಡಿಹೋಗಿದ್ದರು. ನಂತರ ಅವರನ್ನು ಹಿಡಿಯಲಾಯಿತು ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನಿರ್ಬಂಧಿತ ಬದುಕಿಗೆ ಕಡೆಗೂ ಸಿಕ್ತು ಬಿಗ್ ರಿಲೀಫ್; ಕೆಲವೆಡೆ ಆಕ್ರೋಶ, ಶಾಲೆಗಳತ್ತ ವಿದ್ಯಾರ್ಥಿಗಳು

Published On - 8:55 am, Mon, 31 January 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!