AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ತರಗತಿ ಹುಡುಗನಿಂದ ಹೋಯ್ತು 4 ಮಹಿಳೆಯರ ಪ್ರಾಣ; ಕಣ್ಣುಜ್ಜಲು ಹೋಗಿ ಫೂಟ್​ಪಾತ್​​ಗೆ ಕಾರು ​ಹತ್ತಿಸಿದ ಹುಡುಗ

ಸದ್ಯ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.  ಮುಂಜಾನೆ 6.50ರ ಹೊತ್ತಿಗೆ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಸರಿಯಾಗಿ ದಾರಿ ಕಾಣುತ್ತಿರಲಿಲ್ಲ.

9ನೇ ತರಗತಿ ಹುಡುಗನಿಂದ ಹೋಯ್ತು 4 ಮಹಿಳೆಯರ ಪ್ರಾಣ; ಕಣ್ಣುಜ್ಜಲು ಹೋಗಿ ಫೂಟ್​ಪಾತ್​​ಗೆ ಕಾರು ​ಹತ್ತಿಸಿದ ಹುಡುಗ
ಕಾರು ಅಪಘಾತದ ಚಿತ್ರ
TV9 Web
| Edited By: |

Updated on:Jan 31, 2022 | 10:06 AM

Share

ಫೂಟ್​ಪಾತ್​ ಮೇಲೆ ಕುಳಿತಿದ್ದ ನಾಲ್ವರು ಮಹಿಳೆಯರ ಪ್ರಾಣ ಅಪ್ರಾಪ್ತನಿಂದಾಗಿ ಹೋಗಿದೆ. ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿದ ಬಾಲಕ, ವಾಹನವನ್ನು ಫೂಟ್​ಪಾತ್​ ಮೇಲೆ ಹರಿಸಿ, ಅಲ್ಲಿ ಕುಳಿತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆ ತೆಲಂಗಾಣದ (Telangana) ಕರೀಮ್​​ನಗರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾಗಿ ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.  

ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್​​ ಮಾಡುತ್ತಿದ್ದ. ಆದರೆ ನಿಯಂತ್ರಣ ತಪ್ಪಿದ ಕಾರಣ ಫೂಟ್​ಪಾತ್​ ಮೇಲೆ ಹರಿಯಿತು. ಅಲ್ಲಿ ಕುಳಿತಿದ್ದ ನಾಲ್ವರು ಮಹಿಳೆಯರ ಪ್ರಾಣ ಹೋಗಿದೆ. ಸದ್ಯ ಕಾರಿನಲ್ಲಿದ್ದ ಮೂವರು ಅಪ್ರಾಪ್ತರ ವಿರುದ್ಧ ಐಪಿಎಸ್​ ಸೆಕ್ಷನ್​ 304ರಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ, ಕಾರು ಡ್ರೈವ್​ ಮಾಡುತ್ತಿದ್ದ ಬಾಲಕನ ತಂದೆ ವಿರುದ್ಧವೂ ಕೇಸ್​ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.  ಮುಂಜಾನೆ 6.50ರ ಹೊತ್ತಿಗೆ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಸರಿಯಾಗಿ ದಾರಿ ಕಾಣುತ್ತಿರಲಿಲ್ಲ. ಈ ಮಧ್ಯೆ ಬಾಲಕ ತನ್ನ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್​​ನಿಂದ ಕೈ ತೆಗೆದಾದ ನಿಯಂತ್ರಣ ಕಳೆದುಕೊಂಡಿದ್ದಾನೆ. ಆಗ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದು, ಅಲ್ಲೇ ಫೂಟ್​ಪಾತ್​​ನ ತಾತ್ಕಾಲಿಕ ಗುಡಿಸಲಿನಲ್ಲಿದ್ದ ಮಹಿಳೆಯರಿಗೆ ಡಿಕ್ಕಿಯಾಗಿದೆ.  14 ವರ್ಷದ ಹುಡುಗಿ ಸೇರಿ 27-32 ವರ್ಷದೊಳಗಿನ ನಾಲ್ವರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಡ್ರೈವಿಂಗ್​​ಗೆ ಕುಳಿತಿದ್ದ ಬಾಲಕ ಸ್ಟೀರಿಂಗ್​ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಲ್ಲದೆ, ಬ್ರೇಕ್​ ಬದಲಿಗೆ ಆಕ್ಸಿಲರೇಟರ್​ ಪ್ರೆಸ್​ ಮಾಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಯಿತು ಎಂದಿದ್ದಾರೆ. ಈ ಬಾಲಕರೆಲ್ಲ 9ನೇ ತರಗತಿಯವರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಕಾರು ಅಲ್ಲೇ ಬಿಟ್ಟು, ಎಲ್ಲರೂ ಓಡಿಹೋಗಿದ್ದರು. ನಂತರ ಅವರನ್ನು ಹಿಡಿಯಲಾಯಿತು ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನಿರ್ಬಂಧಿತ ಬದುಕಿಗೆ ಕಡೆಗೂ ಸಿಕ್ತು ಬಿಗ್ ರಿಲೀಫ್; ಕೆಲವೆಡೆ ಆಕ್ರೋಶ, ಶಾಲೆಗಳತ್ತ ವಿದ್ಯಾರ್ಥಿಗಳು

Published On - 8:55 am, Mon, 31 January 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್