AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಪಶ್ಚಿಮ ಬಂಗಾಳ: ಮುರ್ಷಿದಾಬಾದ್ ಜಿಲ್ಲೆಯಲ್ಲಿ ಟಿಎಂಸಿ ಸಂಸದರ ಕಾರು ಡಿಕ್ಕಿ ಹೊಡೆದು ಮಗು ಸಾವು

ಪ್ರಾಥಮಿಕ ಮಾಹಿತಿ ಪ್ರಕಾರ ಅಪಘಾತ ನಡೆದಾಗ ಸಂಸದ ಅಬು ತಾಹೆರ್ ಖಾನ್ ಕಾರಿನೊಳಗೆ ಇದ್ದರು. ಮಗು ಕಾರಿನ ಮುಂದೆ ಬಂದಿತ್ತು ಎಂದು ಸಚಿವರು ಹೇಳಿದ್ದಾರೆ.

Breaking News ಪಶ್ಚಿಮ ಬಂಗಾಳ: ಮುರ್ಷಿದಾಬಾದ್ ಜಿಲ್ಲೆಯಲ್ಲಿ ಟಿಎಂಸಿ ಸಂಸದರ ಕಾರು ಡಿಕ್ಕಿ ಹೊಡೆದು ಮಗು ಸಾವು
ಸಾಂದರ್ಭಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 16, 2022 | 7:55 PM

Share

ಪಶ್ಚಿಮ ಬಂಗಾಳದ (West Bengal)ಮುರ್ಷಿದಾಬಾದ್ (Murshidabad) ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದ ಅಬು ತಾಹೆರ್ ಖಾನ್ ಅವರ ಕಾರಿಗೆ ಡಿಕ್ಕಿ ಹೊಡೆದು 4 ವರ್ಷದ ಮಗು ಬುಧವಾರ ಸಾವಿಗೀಡಾಗಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಮೂಲಗಳು ವರದಿ ಮಾಡಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಅಪಘಾತ ನಡೆದಾಗ ಸಂಸದ ಅಬು ತಾಹೆರ್ ಖಾನ್ ಕಾರಿನೊಳಗೆ ಇದ್ದರು. ಮಗು ಕಾರಿನ ಮುಂದೆ ಬಂದಿತ್ತು ಎಂದು ಸಚಿವರು ಹೇಳಿದ್ದಾರೆ. ಖಾನ್  ಅವರೇ  ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.ಮಗು ಇದ್ದಕ್ಕಿದ್ದಂತೆ ನಮ್ಮ ವಾಹನದ ಮುಂದೆ ಬಂದಿತು. ಚಿಕ್ಕ ಮಗು, ಅವನಿಗೆ ಐದು ಅಥವಾ ಆರು ವರ್ಷ. ನಾವು ಅವನನ್ನು ಆಸ್ಪತ್ರೆಗೆ ಸೇರಿಸಿದ್ದೇವೆ. ಇದು ನನ್ನ ಮುಂದೆ ಸಂಭವಿಸಿತು. ಬಹುಶಃ ಅವರು ಮಿದುಳಿನ ಗಾಯವಾಗಿರಬೇಕು ಎಂದು ಖಾನ್ ಆಸ್ಪತ್ರೆಯ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. ಆಸ್ಪತ್ರೆಯಲ್ಲಿ, ಮಗುವಿನ ಪೋಷಕರು ಅಳುತ್ತಿರುವ ದೃಶ್ಯ ಅಲ್ಲಿ ಕಂಡು ಬಂತು.

ಅಪಘಾತ ಸಂಭವಿಸಿದಾಗ ತೃಣಮೂಲ ಕಾಂಗ್ರೆಸ್ ನಾಯಕ  ಮುರ್ಷಿದಾಬಾದ್‌ನ ಬೆಹ್ರಾಂಪೋರ್‌ಗೆ ತೆರಳುತ್ತಿದ್ದರು.  ಮಗು ತನ್ನ ತಾಯಿಯೊಂದಿಗೆ ಬ್ಯಾಂಕ್ ಬಳಿಗೆ ಹೋಗುತ್ತಿದ್ದಾಗ  ಟಿಎಂಸಿ ಸಂಸದರ ಕಾರುಡಿಕ್ಕಿ ಹೊಡೆದಿದೆ. ಕಾರು ಹಾದು ಹೋಗುತ್ತಿದ್ದಾಗ  ಮಗು  ರಸ್ತೆ ದಾಟಿದ್ದು, ಕಾರು ಗುದ್ದಿ ರಸ್ತೆಗೆ ಬಿದ್ದು ತಲೆಗೆ ಪೆಟ್ಟಾಗಿದೆ. ತಾಹೆರ್ ಮಗುವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಮಗು ಕೊನೆಯುಸಿರೆಳಿದಿದೆ.

Published On - 7:14 pm, Wed, 16 November 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!