ವಾರಾಣಸಿಯ ಜನನಿಬಿಡ ರಸ್ತೆಯಲ್ಲಿ ವಿದ್ಯುತ್ ತಗುಲಿ ಒದ್ದಾಡುತ್ತಿದ್ದ ಬಾಲಕನ್ನು ರಕ್ಷಿಸಿದ ವೃದ್ಧರು

ಬನಾರಸ್ ನಗರದಲ್ಲಿ ನಿನ್ನೆ ಬೆಳಗ್ಗೆಯಿಂದಲೇ ಹಿತಕರವಾದ ಮಳೆ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಸ್ಥಳದಲ್ಲಿ ಚರಂಡಿಗಳೂ ತುಂಬಿ ಹರಿಯುತ್ತಿವೆ. ಈ ಚರಂಡಿಗಳು ತುಂಬಿ ಹರಿಯುತ್ತಿದ್ದರಿಂದ 4 ವರ್ಷದ ಮಗುವೊಂದು ವಿದ್ಯುತ್ ಸ್ಪರ್ಶಿಸಿದ್ದು, ವೃದ್ಧರೊಬ್ಬರು ಬಾಲಕನನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ

ವಾರಾಣಸಿಯ ಜನನಿಬಿಡ ರಸ್ತೆಯಲ್ಲಿ ವಿದ್ಯುತ್ ತಗುಲಿ ಒದ್ದಾಡುತ್ತಿದ್ದ ಬಾಲಕನ್ನು ರಕ್ಷಿಸಿದ ವೃದ್ಧರು
ಬಾಲಕImage Credit source: Free Press Journal
Follow us
|

Updated on: Sep 27, 2023 | 8:20 AM

ವಾರಾಣಸಿ, ಸೆಪ್ಟೆಂಬರ್ 27: ಬನಾರಸ್ ನಗರದಲ್ಲಿ ನಿನ್ನೆ ಬೆಳಗ್ಗೆಯಿಂದಲೇ ಹಿತಕರವಾದ ಮಳೆ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಸ್ಥಳದಲ್ಲಿ ಚರಂಡಿಗಳೂ ತುಂಬಿ ಹರಿಯುತ್ತಿವೆ. ಈ ಚರಂಡಿಗಳು ತುಂಬಿ ಹರಿಯುತ್ತಿದ್ದರಿಂದ 4 ವರ್ಷದ ಮಗುವೊಂದು ವಿದ್ಯುತ್ ಸ್ಪರ್ಶಿಸಿದ್ದು, ವೃದ್ಧರೊಬ್ಬರು ಬಾಲಕನನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ.

ಚೆಟ್‌ಗಂಜ್ ಪೊಲೀಸ್ ಠಾಣೆಯ ಹಬೀಬ್‌ಪುರ ಪ್ರದೇಶದ ಜಂಜಿರಾ ಶಾ ಬಾಬಾ ಸಮಾಧಿ ಬಳಿ ಈ ಘಟನೆ ನಡೆದಿದೆ. ಮಗುವನ್ನು ರಕ್ಷಿಸಿದ ನಂತರ, ಅವರು ಬಾಲಕನನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಿ, ಕರೆ ಮಾಡಿ ವಿದ್ಯುತ್ ಸರಬರಾಜನ್ನು ನಿಲ್ಲಿಸಿದ್ದಾರೆ.

ಮಗುವಿಗೆ ವಿದ್ಯುತ್ ಸ್ಪರ್ಶವಾಗಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ ಎಂದು ಪೊಲೀಸ್ ಠಾಣೆ ಪ್ರಭಾರಿ ಚೇಟ್‌ಗಂಜ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕಲಬುರಗಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ ವಿದ್ಯುತ್ ಶಾಕ್​ನಿಂದ ಸಾವು; ಮಗಳದ್ದು ಕೊಲೆ ಅಂತಿರೋ ಹೆತ್ತವರು, ಇಲ್ಲಿದೆ ವಿವರ

ಸ್ಥಳೀಯ ಹಿರಿಯರು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸ್ಥಳೀಯ ನಿವಾಸಿ ಜಿತೇಂದ್ರ ಕುಮಾರ್ ಅವರ ನಾಲ್ಕು ವರ್ಷದ ಮಗ ಕಾರ್ತಿಕ್ ಮಳೆ ನಿಂತ ನಂತರ ನೀರಿನಲ್ಲಿ ಆಟವಾಡುತ್ತಿದ್ದ. ಮನೆಯ ಸಮೀಪದಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ನೀರಿನ ಮೂಲಕ ಪ್ರವಹಿಸಿತ್ತು. ಕಾರ್ತಿಕ್​ಗೆ ವಿದ್ಯುತ್ ತಗುಲಿದ ನಂತರ ಕಿರುಚುತ್ತಾ ಗೋಳಾಡುತ್ತಿದ್ದ.

ಅಷ್ಟರಲ್ಲಿಆ ದಾರಿಯಲ್ಲಿ ಹೋಗುತ್ತಿದ್ದ ಇಬ್ಬರು ಹಿರಿಯರಲ್ಲಿ ಒಬ್ಬರು ನೆಲದ ಮೇಲೆ ಬಿದ್ದು ಅಳುತ್ತಿದ್ದ ಬಾಲಕನನ್ನು ಎತ್ತಿಕೊಳ್ಳಲು ಪ್ರಯತ್ನಿಸಿದ್ದಾರೆ ಆಗ ಅವರಿಗೆ ವಿದ್ಯುತ್ ತಗುಲಿದೆ. ಬಳಿಕ ಮರದ ಕೋಲಿನ ಸಹಾಯದಿಂದ ಬಾಲಕನನ್ನು ಕಾಪಾಡಿದ್ದಾರೆ.

ಈ ಸಂಪೂರ್ಣ ಘಟನೆಯು ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ, ಈ ಹಿರಿಯರ ಕಾರ್ಯವನ್ನು ಎಲ್ಲರೂ ಶ್ಲಾಘಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ