AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೆಂಥಾ ದುಬಾರಿ ಸಿಎಂ?-ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರಕ್ಕಾಗಿ 40 ಎಕರೆ ಗೋಧಿ ಬೆಳೆ ನಾಶ !

ಪಂಜಾಬ್​ ಸರ್ಕಾರ ಈಗಾಗಲೇ ಸಾಲದ ಸುಳಿಯಲ್ಲಿದೆ. ಹಾಗಿದ್ದಾಗ್ಯೂ ಒಂದು ತಾಸಿಗೂ ಕಡಿಮೆ ಅವಧಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರ 2.61 ಕೋಟಿ ರೂಪಾಯಿ ಖರ್ಚು ಮಾಡಲಿದೆ ಎಂದೂ ವರದಿಯಾಗಿದೆ.

ಇವರೆಂಥಾ ದುಬಾರಿ ಸಿಎಂ?-ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರಕ್ಕಾಗಿ 40 ಎಕರೆ ಗೋಧಿ ಬೆಳೆ ನಾಶ !
ಭಗವಂತ್ ಮಾನ್​
TV9 Web
| Edited By: |

Updated on: Mar 15, 2022 | 5:53 PM

Share

ಪಂಜಾಬ್​ನಲ್ಲಿ ಭಗವಂತ್ ಮಾನ್(Bhagwant Mann)​ ಮಾರ್ಚ್​ 16ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ (swearing-in) ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಅದರಲ್ಲೂ ಮಾನ್​, ರಾಜಭವನದ ಬದಲು ಕ್ರಾಂತಿಕಾರಿ ಭಗತ್​ಸಿಂಗ್​ ಪೂರ್ವಜನ ಹಳ್ಳಿಯಾದ ಖಟ್ಕರ್​ಕಲಾನ್​​ನಲ್ಲಿ ಮುಖ್ಯಮಂತ್ರಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸುವರು. ಆದರೆ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸುವುದಕ್ಕಾಗಿ ಸುಮಾರು 40 ಎಕರೆ ಪ್ರದೇಶದಲ್ಲಿ ಬೆಳೆದ ಗೋಧಿಯನ್ನು ನಾಶ ಮಾಡಲಾಗುತ್ತಿದೆ. ಸಿಎಂ ಪ್ರಮಾಣ ವಚನ ಕಾರ್ಯಕ್ರಮ ಅದ್ದೂರಿಯಾಗಿ ಮಾಡಲು ಆಪ್ ಸರ್ಕಾರ ನಿರ್ಧರಿಸಿದ್ದು, ಸಮಾರಂಭ ನಡೆಯಲಿರುವ ಸುತ್ತಲಿನ ಪ್ರದೇಶದಲ್ಲಿ ಪಾರ್ಕಿಂಗ್​ ವ್ಯವಸ್ಥೆ ಮಾಡುವುದಾಗಿ, ಗೋಧಿ ಬೆಳೆ ಕಟಾವು ಮಾಡುವಂತೆ ರೈತರಿಗೆ ಸೂಚನೆ ನೀಡಲಾಗಿದೆ. ಬೆಳೆಗಳನ್ನೂ ಇನ್ನೂ ಕಟಾವಿಗೆ ಬಾರದೆ ಇದ್ದರೂ, ಅವುಗಳನ್ನು ತೆಗೆಯಬೇಕಾಗಿದೆ ಎಂದು ಐಎಎನ್​ಎಸ್​ ವರದಿ ಮಾಡಿದೆ.

ಇನ್ನು ಪಂಜಾಬ್​ ಸರ್ಕಾರ ಈಗಾಗಲೇ ಸಾಲದ ಸುಳಿಯಲ್ಲಿದೆ. ಹಾಗಿದ್ದಾಗ್ಯೂ ಒಂದು ತಾಸಿಗೂ ಕಡಿಮೆ ಅವಧಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರ 2.61 ಕೋಟಿ ರೂಪಾಯಿ ಖರ್ಚು ಮಾಡಲಿದೆ ಎಂದೂ ವರದಿಯಾಗಿದೆ. ಇನ್ನು ಸಮಾರಂಭಕ್ಕಾಗಿ ಅವಧಿ ಪೂರ್ವದಲ್ಲೇ ಬೆಳೆಯನ್ನು ಕಟಾವು ಮಾಡುವ ರೈತರಿಗೆ, ಎಕರೆಗೆ 46 ಸಾವಿರ ರೂಪಾಯಿ ಪರಿಹಾರ ನೀಡಲೂ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈಗೆರಡು ದಿನಗಳಿಂದಲೂ ಈ ಬಗ್ಗೆ ಸುದ್ದಿಯಾಗುತ್ತಿದ್ದರೂ, ಅದನ್ನು ಪಂಜಾಬ್​ ಸರ್ಕಾರದ ಯಾವುದೇ ಅಧಿಕಾರಿಗಳು ಅದನ್ನು ತಳ್ಳಿ ಹಾಕಿಲ್ಲ.  ಒಟ್ಟಾರೆ ಭಗವಂತ್ ಮಾನ್​ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭರ್ಜರಿ ಜನರು ಸೇರುವ ನಿರೀಕ್ಷೆಯಿದೆ.

ಖಟ್ಕಾರ್​ ಕಲಾನ್​ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿರುವ ಜಾಗ, ಅಲ್ಲಿನ ಸಿದ್ಧತೆಯನ್ನು  ಪಂಜಾಬ್ ಹೆಚ್ಚುವರಿ ಕಾರ್ಯದರ್ಶಿ ಎ.ವೇಣುಪ್ರಸಾದ್ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದ ಭಗವಂತ್ ಮಾನ್​, ನಾನು ನಿಮಗೆಲ್ಲ ಸಹೋದರನಿದ್ದಂತೆ. ಖಟ್ಕರ್​ಕಲಾನ್​​ನಲ್ಲಿ ಬೆಳಗ್ಗೆ 10ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ನೀವೆಲ್ಲ ಅಲ್ಲಿಗೆ ಬನ್ನಿ, ಮಹಿಳೆಯರು ಕೇಸರಿ ದುಪ್ಪಟ್ಟಾ, ಪುರುಷರು ಕೇಸರಿ ಪೇಟ ಧರಿಸಿ ಬನ್ನಿ. ಸಿಖ್​ ಧರ್ಮದಲ್ಲಿ ಕೇಸರಿಗೆ ತುಂಬ ಪ್ರಾಮುಖ್ಯತೆ ಇದೆ ಎಂದು ಹೇಳಿದ್ದರು.

ಇದನ್ನೂ ಓದಿ: ದೇವೇಗೌಡರ ಪುತ್ರಿ ಶೈಲಜಾ ಒಡೆತನದ ಕಟ್ಟಡದಲ್ಲಿ ಕಾಲು ಜಾರಿ ಬಿದ್ದು ಕಾರ್ಮಿಕ ಸಾವು

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?