AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಒಂದೇ ದಿನ 4,187 ಮಂದಿ ಕೊರೊನಾದಿಂದ ಸಾವು; ಮರಣದ ಸಂಖ್ಯೆಯಲ್ಲಿ ದಾಖಲೆ, ಚೇತರಿಕೆ ಪ್ರಮಾಣದಲ್ಲಿ ಕುಸಿತ

Covid 19 Death: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,01,078 ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,18,92,676ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಒಂದೇ ದಿನ 4,187 ಮಂದಿ ಕೊರೊನಾದಿಂದ ಸಾವು; ಮರಣದ ಸಂಖ್ಯೆಯಲ್ಲಿ ದಾಖಲೆ, ಚೇತರಿಕೆ ಪ್ರಮಾಣದಲ್ಲಿ ಕುಸಿತ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 08, 2021 | 11:19 AM

Share

ದೆಹಲಿ: ದೇಶದಲ್ಲಿ ದಿನೇದಿನೆ ಕೊವಿಡ್ ಸೋಂಕಿತರ ಸಂಖ್ಯೆ ಏರುತ್ತಿದೆ. ಅದರೊಂದಿಗೆ ಸೋಂಕಿನಿಂದ ಸಾಯುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದೀಗ ಕಳೆದ 24ಗಂಟೆಯಲ್ಲಿ 4187 ಮಂದಿ ಕೊವಿಡ್​ 19 ಸೋಂಕಿನಿಂದ ಸಾವನ್ನಪ್ಪಿದ್ದು, ಒಂದು ಹೊಸ ದಾಖಲೆಯೇ ಆಗಿದೆ. ಜೂನ್​ ಮೊದಲವಾರದಲ್ಲಿ ಕೊರೊನಾದಿಂದ ಒಂದು ದಿನದಲ್ಲಿ ಸಾಯುವವರ ಸಂಖ್ಯೆ 3 ಸಾವಿರಕ್ಕೆ ಏರಬಹುದು ಎಂದು ತಜ್ಞರು ಅಂದಾಜಿಸಿದ್ದರು. ಆದರೆ ಮೇ ಮೊದಲವಾರದ ಕೊನೆಯಲ್ಲೇ ಸಾವಿನ ಸಂಖ್ಯೆ 4 ಸಾವಿರ ದಾಟಿರುವುದು ಆತಂಕ ಮೂಡಿಸಿದೆ. ಹಾಗೇ ದೇಶದಲ್ಲಿ ಕೊರೊನಾದಿಂದ ಪ್ರಾಣ ಕಳೆದುಕೊಂಡವರ ಒಟ್ಟು ಸಂಖ್ಯೆ 2,38,270ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊವಿಡ್​ 19 ನಿಂದ ಸಾಯುವವರ ಪ್ರಮಾಣ ಶೇ. 1.09ರಷ್ಟಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,01,078 ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,18,92,676ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು ಒಂದೇ ದಿನದಲ್ಲಿ 3,18,609 ಮಂದಿ ಚೇತರಿಸಿಕೊಂಡು ಡಿಸ್​​ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೊನಾದಿಂದ ಚೇತರಿಸಿಕೊಂಡವರು ಒಟ್ಟು 1,79,30,960. ಆದರೆ ಒಂದು ಬ್ಯಾಡ್ ನ್ಯೂಸ್​ ಎಂದರೆ ದೇಶದಲ್ಲಿ ಕೊವಿಡ್​ನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಶೇ. 81.90ಕ್ಕೆ ಕುಸಿದಿದೆ. ಇದು ಮೊದಲ ಅಲೆಯಲ್ಲಿ ಶೇ.96ರವರೆಗೂ ಏರಿಕೆಯಾಗಿತ್ತು.

ಸದ್ಯ ಭಾರತದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 37,23,446 ಇದ್ದು, ಸೋಂಕಿನ ವಿರುದ್ಧ ಹೋರಾಟ ದಿನೇದಿನೇ ಕಷ್ಟವೇ ಆಗುತ್ತಿದೆ. ಒಂದೊಂದೇ ರಾಜ್ಯಗಳು ಲಾಕ್​ಡೌನ್ ಮೊರೆ ಹೋಗುತ್ತಿವೆ. ದೇಶಾದ್ಯಂತ ಆಕ್ಸಿಜನ್​, ಬೆಡ್​, ವೆಂಟಿಲೇಟರ್​, ಲಸಿಕೆ ಅಭಾವ ಬಹುದೊಡ್ಡ ಸವಾಲಾಗಿ ಕಾಡುತ್ತಿದೆ.

ಇದನ್ನೂ ಓದಿ: ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ

ಎಚ್ಚರಾ! ಭಾರತದಲ್ಲಿ ಆಗಸ್ಟ್​ 1ರೊಳಗೆ ಕೊರೊನಾ ಸೋಂಕಿಗೆ 10 ಲಕ್ಷ ಜನ ಸಾವು -ಇದು ಬ್ರಿಟಿಷ್ ಮೆಡಿಕಲ್ ಜರ್ನಲ್ ವರದಿ

4,187 deaths by covid 19 is new record in India

Published On - 11:18 am, Sat, 8 May 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ