AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಲ್ಲಿಯವರೆಗೆ 44 ಲಕ್ಷ ಡೋಸ್ ಲಸಿಕೆ ವ್ಯರ್ಥ; ಅತಿ ಹೆಚ್ಚು ಪೋಲಾಗಿದ್ದು ತಮಿಳುನಾಡಿನಲ್ಲಿ

ಭಾರತದಲ್ಲಿ ಏಪ್ರಿಲ್ 11ರವರೆಗೆ ರಾಜ್ಯಗಳು 10 ಕೋಟಿ ಡೋಸ್ ಲಸಿಕೆಯನ್ನು ಬಳಸಿದ್ದು, ಅದರಲ್ಲಿ 44 ಲಕ್ಷ ಡೋಸ್​​ಗಳು ವ್ಯರ್ಥವಾಗಿವೆ ಎಂದು ಆರ್​ಟಿಐ ಮಾಹಿತಿ ಬಹಿರಂಗಗೊಳಿಸಿದೆ.

ದೇಶದಲ್ಲಿ ಇಲ್ಲಿಯವರೆಗೆ 44 ಲಕ್ಷ ಡೋಸ್ ಲಸಿಕೆ ವ್ಯರ್ಥ; ಅತಿ ಹೆಚ್ಚು ಪೋಲಾಗಿದ್ದು ತಮಿಳುನಾಡಿನಲ್ಲಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 20, 2021 | 5:44 PM

Share

ಭಾರತದಲ್ಲಿ ಎರಡನೇ ವಾರದಿಂದ ಕೊರೊನಾ ಲಸಿಕೆ ವಿತರಣೆ ಅಭಿಯಾನ ಶುರುವಾಗಿದೆ. ಇಲ್ಲಯವರೆಗೆ ಅನೇಕರಿಗೆ ಲಸಿಕೆ ನೀಡಲಾಗಿದೆ. ಈ ಮಧ್ಯೆ ಕೆಲವು ರಾಜ್ಯಗಳು ಕೊರೊನಾ ಲಸಿಕೆ ಅಭಾವವಾಗಿದೆ ಎಂದು ಹೇಳುತ್ತಿವೆ. ಆದರೆ ಇದೀಗ ಆರ್​ಟಿಐನಿಂದ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ.

ಭಾರತದಲ್ಲಿ ಏಪ್ರಿಲ್ 11ರವರೆಗೆ ರಾಜ್ಯಗಳು 10 ಕೋಟಿ ಡೋಸ್ ಲಸಿಕೆಯನ್ನು ಬಳಸಿದ್ದು, ಅದರಲ್ಲಿ 44 ಲಕ್ಷ ಡೋಸ್​​ಗಳು ವ್ಯರ್ಥವಾಗಿವೆ ಎಂದು ಆರ್​ಟಿಐ ಮಾಹಿತಿ ಬಹಿರಂಗಗೊಳಿಸಿದೆ. ಅದರಲ್ಲಿ ತಮಿಳುನಾಡಿನಲ್ಲೇ ಹೆಚ್ಚು ಅಂದರೆ ಶೇ.12.10 ಡೋಸ್ ಲಸಿಕೆ ಪೋಲಾಗಿದೆ. ಇನ್ನುಳಿದಂತೆ ಹರ್ಯಾಣದಲ್ಲಿ ಶೇ.9.74, ಪಂಜಾಬ್​ನಲ್ಲಿ ಶೇ.8.12, ಮಣಿಪುರದಲ್ಲಿ ಶೇ.7.8 ಮತ್ತು ತೆಲಂಗಾಣದಲ್ಲಿ ಶೇ.7.55 ಡೋಸ್​ಗಳಷ್ಟು ಲಸಿಕೆ ಹಾಳಾಗಿದೆ ಎಂದು ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೆ ಕೇರಳ, ಪಶ್ಚಿಮಬಂಗಾಳ, ಹಿಮಾಚಲಪ್ರದೇಶ, ಮಿಜೋರಾಂ, ಗೋವಾ, ದಮನ್, ದಿಯು, ಅಂಡಮಾನ್​, ನಿಕೋಬಾರ್​ ಮತ್ತು ಲಕ್ಷದ್ವೀಪ್​ಗಳಲ್ಲಿ ಲಸಿಕೆ ವ್ಯರ್ಥದ ಪ್ರಮಾಣ ತೀರ ಕಡಿಮೆ ಇರುವುದಾಗಿ ಆರ್​ಟಿಐ ತಿಳಿಸಿದೆ.

ಸದ್ಯ ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರ, ಪಂಜಾಬ್​, ದೆಹಲಿಗಳ ನಡುವೆ ಲಸಿಕೆ ಅಭಾವದ ಬಗ್ಗೆ ಜಟಾಪಟಿ ನಡೆಯುತ್ತಿದೆ. ನಮ್ಮಲ್ಲಿರುವ ನಮ್ಮಲ್ಲಿರುವ ಜನಸಂಖ್ಯೆಗೂ, ಹಂಚಿಕೆಯಾಗಿರುವ ಲಸಿಕೆಗೂ ಸಂಬಂಧವೇ ಇಲ್ಲವೆಂದು ದೆಹಲಿ ಸರ್ಕಾರ ಆರೋಪ ಮಾಡಿದೆ. ಈ ಮಧ್ಯೆ ಮಾಹಿತಿ ಹಕ್ಕು ಕಾಯ್ದೆ, ಲಸಿಕೆ ವ್ಯರ್ಥವಾಗುತ್ತಿರುವ ಮಾಹಿತಿಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ