AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಳ್ಳು ಸಿದ್ಧಾಂತಗಳಿಂದ ನಿರಾಶರಾಗಿದ್ದೇವೆ ಎಂದು ಪೊಲೀಸರಿಗೆ ಶರಣಾದ 44 ನಕ್ಸಲರು

ಇದೀಗ ಶರಣಾದ ನಕ್ಸಲರು, ತಾವು ಮಾವೋವಾದಿಗಳ ಪೊಳ್ಳು ಸಿದ್ಧಾಂತಗಳಿಂದ ನಿರಾಶರಾಗಿದ್ದೇವೆ. ಅಷ್ಟೇ ಅಲ್ಲ, ಪೊಲೀಸರು ನಕ್ಸಲರಿಗಾಗಿ ರಚಿಸಿರುವ ಪುನಾ ನರ್ಕೋಮ್​ ಪುನರ್ವಸತಿ ಅಭಿಯಾನದತ್ತ ಆಕರ್ಷಿತರಾಗಿದ್ದೇವೆ ಎಂದಿದ್ದಾರೆ.

ಪೊಳ್ಳು ಸಿದ್ಧಾಂತಗಳಿಂದ ನಿರಾಶರಾಗಿದ್ದೇವೆ ಎಂದು ಪೊಲೀಸರಿಗೆ ಶರಣಾದ 44 ನಕ್ಸಲರು
ಶರಣಾದ ನಕ್ಸಲರೊಂದಿಗೆ ರಕ್ಷಣಾ ಸಿಬ್ಬಂದಿ
Follow us
TV9 Web
| Updated By: Lakshmi Hegde

Updated on: Jan 02, 2022 | 9:18 AM

ರಾಯ್ಪುರ: ಛತ್ತೀಸ್​ಗಢ್​ ಎಂಬುದು ನಕ್ಸಲ್​ ಪೀಡಿತ ರಾಜ್ಯ. ಅದರಲ್ಲೂ ಸುಕ್ಮಾ ಸೇರಿ ಕೆಲವು ಪ್ರದೇಶಗಳಲ್ಲಂತೂ ಸದಾ ನಕ್ಸಲರ ಕಾಟ, ದಂಗೆ, ಹಿಂಸಾಚಾರ ನಡೆಯುತ್ತಲೇ ಇರುತ್ತದೆ. ಆದರೆ ಇದೀಗ ಅದೇ ಸುಕ್ಮಾ ಜಿಲ್ಲೆಯಲ್ಲಿ 44 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಇದೀಗ ಶರಣಾಗಿರುವ ನಕ್ಸಲರು ಚಿಂತಾಲ್​ನರ್​, ಕಿಸ್ಟಾರಾಮ್ ಮತ್ತು ಬೇಜಿ ಪ್ರದೇಶಗಳಲ್ಲಿ ಸಕ್ರಿಯರಾಗಿದ್ದರು. ಹಾಗೇ, ಕೆಳಮಟ್ಟದ ಕೇಡರ್​ಗಳಲ್ಲಿ ಇದ್ದ ಮಾವೋವಾದಿಗಳಾಗಿದ್ದಾರೆ ಎಂದು ಸುಕ್ಮಾ ಪೊಲೀಸ್​ ವರಿಷ್ಠಾಧಿಕಾರಿ ಸುನಿಲ್​ ಶರ್ಮಾ ತಿಳಿಸಿದ್ದಾರೆ. ಅವರೆಲ್ಲ ಇದೀಗ ಶರಣಾಗಿದ್ದು, ಕರಿಗುಂಡಮ್​ ಹಳ್ಳಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪೊಲೀಸ್​ ಕ್ಯಾಂಪ್​ನಲ್ಲಿ ಬೀಡುಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. 

ಹೀಗೆ ಶರಣಾದವರಲ್ಲಿ ಮಡ್ಕಮ್​ ದುಲಾ ಎಂಬುವನೊಬ್ಬನಿದ್ದಾನೆ. ಆತನ ತಲೆಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಉಳಿದವರೆಲ್ಲ ಮಾವೋವಾದಿಗಳ ಸಾಂಸ್ಕೃತಿಕ ದಳ ಚೇತನ ನಾಟ್ಯ ಮಂಡಳಿಯ ಸದಸ್ಯರಾಗಿದ್ದಾರೆ. ಕೆಲವರು ನಕ್ಸಲ್​ ಸೇನಾ ಸಿಬ್ಬಂದಿಯೂ ಸೇರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.  ರಾಯ್ಪುರದಿಂದ 400 ಕಿಮೀ ದೂರದಲ್ಲಿ ಈ ಕರಿಗುಂಡಮ್​ ಹಳ್ಳಿಯಿದೆ. ಹೀಗೆ ನಕ್ಸಲರು ಶರಣಾದ ಸುದ್ದಿ ಕೇಳಿ, ಸುತ್ತಲಿನ ಹಳ್ಳಿಗಳ ಅನೇಕರು ಅವರನ್ನು ನೋಡಲು ಬಂದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದೀಗ ಶರಣಾದ ನಕ್ಸಲರು, ತಾವು ಮಾವೋವಾದಿಗಳ ಪೊಳ್ಳು ಸಿದ್ಧಾಂತಗಳಿಂದ ನಿರಾಶರಾಗಿದ್ದೇವೆ. ಅಷ್ಟೇ ಅಲ್ಲ, ಪೊಲೀಸರು ನಕ್ಸಲರಿಗಾಗಿ ರಚಿಸಿರುವ ಪುನಾ ನರ್ಕೋಮ್​ ಪುನರ್ವಸತಿ ಅಭಿಯಾನದತ್ತ ಆಕರ್ಷಿತರಾಗಿದ್ದೇವೆ  ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ, ಪೊಲೀಸರ ಪುನರ್ವಸತಿ ಕೇಂದ್ರಕ್ಕೆ ಬಂದಿದ್ದು, ಅವರಿಗೆ ಪೊಲೀಸರು ಊಟದ ವ್ಯವಸ್ಥೆಯನ್ನು ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; ದೆಹಲಿ ಮಾದರಿ ಕ್ರಮಕ್ಕೆ ತಜ್ಞರ ಶಿಫಾರಸು

ಸಿಎಸ್​ಕೆ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ರೊಮಾರಿಯೊ ಶೆಫರ್ಡ್
ಸಿಎಸ್​ಕೆ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ರೊಮಾರಿಯೊ ಶೆಫರ್ಡ್
ಈ ಸೀಸನ್​ನ 7ನೇ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
ಈ ಸೀಸನ್​ನ 7ನೇ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!