AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ 44 ಮಹಿಳೆಯರನ್ನು ತಡೆದು, ಅವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಏರ್​ಪೋರ್ಟ್ ಅಧಿಕಾರಿಗಳು

ನಾವೀಗ 44 ಮಹಿಳೆಯರ ವಿರುದ್ಧ ಕೇಸ್​ ದಾಖಲು ಮಾಡಿಕೊಂಡಿದ್ದೇವೆ. ಇವರಿಗೆ ವೀಸಾ ಮಾಡಿಸಿಕೊಟ್ಟ ಏಜೆಂಟ್​ಗಳನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ 44 ಮಹಿಳೆಯರನ್ನು ತಡೆದು, ಅವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಏರ್​ಪೋರ್ಟ್ ಅಧಿಕಾರಿಗಳು
ಏರ್​ಪೋರ್ಟ್ ಚಿತ್ರ
TV9 Web
| Edited By: |

Updated on: Dec 08, 2021 | 8:19 AM

Share

 ಒಟ್ಟು 44 ಮಹಿಳೆಯರನ್ನು ಹೈದರಾಬಾದ್​​ನ ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಅಧಿಕಾರಿಗಳು ತಡೆದಿದ್ದಾರೆ. ಇವರೆಲ್ಲ ಹೈದರಾಬಾದ್​ನಿಂದ ಕುವೈತ್​ಗೆ ಹೊರಟಿದ್ದರು. ಆದರೆ ವೀಸಾ ನಿಯಮ ಉಲ್ಲಂಘನೆ ಮಾಡಿದ್ದರು. ಈ 44 ಮಹಿಳೆಯರು ಎರಡು ವೀಸಾ ಹೊಂದಿದ್ದರು ಎಂದು ಏರ್​ಪೋರ್ಟ್ ಅಧಿಕಾರಿ ವಿಜಯ್ ಕುಮಾರ್​ ತಿಳಿಸಿದ್ದಾರೆ.  ಎಎನ್​ಐ ಜತೆ ಮಾತನಾಡಿದ ಅವರು, ಮಹಿಳೆಯರೆಲ್ಲರೂ ತಮಿಳುನಾಡು ಮತ್ತು ಗೋವಾದವರಾಗಿದ್ದಾರೆ. ಇವರ ಬಳಿಯಿದ್ದ ಎರಡು ವೀಸಾಗಳಲ್ಲಿ ಒಂದು ಉದ್ಯೋಗಿಗಳ ವೀಸಾವಾಗಿತ್ತು, ಇನ್ನೊಂದು ಸಂದರ್ಶಕ (Visiters)ರ ವೀಸಾವಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.  

ಪ್ರಕರಣಕ್ಕೆ ಸಂಬಂಧಪಟ್ಟಂತೆ 44 ಮಹಿಳೆಯರ ವಿರುದ್ಧ ವಿಮಾನ ನಿಲ್ದಾಣ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗೆ ಎರಡು ವೀಸಾಗಳನ್ನು ಹೊಂದಿದ್ದು ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇಂಥ ಪ್ರಕರಣಗಳು ಈಗೀಗ ಹೆಚ್ಚುತ್ತಿವೆ. ಮೊದಲು ವಿಸಿಟರ್ಟ್​ ವೀಸಾವನ್ನು ಪಡೆಯಲು ಅರ್ಜಿ ಹಾಕಿ, ಅದನ್ನು ಹೊಂದುತ್ತಾರೆ. ಅದಾದ ಬಳಿಕ ವಲಸೆ ನಿಯಮದಡಿ ಉದ್ಯೋಗ ವೀಸಾ ಹೊಂದುತ್ತಾರೆ. ಇದು ವೀಸಾ ನಿಯಮ ಉಲ್ಲಂಘನೆಯಾಗಿದೆ. ನಾವೀಗ 44 ಮಹಿಳೆಯರ ವಿರುದ್ಧ ಕೇಸ್​ ದಾಖಲು ಮಾಡಿಕೊಂಡಿದ್ದೇವೆ. ಇವರಿಗೆ ವೀಸಾ ಮಾಡಿಸಿಕೊಟ್ಟ ಏಜೆಂಟ್​ಗಳನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಬೀಜಿಂಗ್​ ಚಳಿಗಾಲದ ಒಲಿಂಪಿಕ್ಸ್​ಗೆ ಆಸ್ಟ್ರೇಲಿಯಾದಿಂದಲೂ ರಾಜತಾಂತ್ರಿಕ ಬಹಿಷ್ಕಾರ; ಕ್ರೀಡಾಪಟುಗಳಿಗೆ ಇಲ್ಲ ನಿರ್ಬಂಧ 

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​