AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ 44 ಮಹಿಳೆಯರನ್ನು ತಡೆದು, ಅವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಏರ್​ಪೋರ್ಟ್ ಅಧಿಕಾರಿಗಳು

ನಾವೀಗ 44 ಮಹಿಳೆಯರ ವಿರುದ್ಧ ಕೇಸ್​ ದಾಖಲು ಮಾಡಿಕೊಂಡಿದ್ದೇವೆ. ಇವರಿಗೆ ವೀಸಾ ಮಾಡಿಸಿಕೊಟ್ಟ ಏಜೆಂಟ್​ಗಳನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ 44 ಮಹಿಳೆಯರನ್ನು ತಡೆದು, ಅವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಏರ್​ಪೋರ್ಟ್ ಅಧಿಕಾರಿಗಳು
ಏರ್​ಪೋರ್ಟ್ ಚಿತ್ರ
TV9 Web
| Edited By: |

Updated on: Dec 08, 2021 | 8:19 AM

Share

 ಒಟ್ಟು 44 ಮಹಿಳೆಯರನ್ನು ಹೈದರಾಬಾದ್​​ನ ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಅಧಿಕಾರಿಗಳು ತಡೆದಿದ್ದಾರೆ. ಇವರೆಲ್ಲ ಹೈದರಾಬಾದ್​ನಿಂದ ಕುವೈತ್​ಗೆ ಹೊರಟಿದ್ದರು. ಆದರೆ ವೀಸಾ ನಿಯಮ ಉಲ್ಲಂಘನೆ ಮಾಡಿದ್ದರು. ಈ 44 ಮಹಿಳೆಯರು ಎರಡು ವೀಸಾ ಹೊಂದಿದ್ದರು ಎಂದು ಏರ್​ಪೋರ್ಟ್ ಅಧಿಕಾರಿ ವಿಜಯ್ ಕುಮಾರ್​ ತಿಳಿಸಿದ್ದಾರೆ.  ಎಎನ್​ಐ ಜತೆ ಮಾತನಾಡಿದ ಅವರು, ಮಹಿಳೆಯರೆಲ್ಲರೂ ತಮಿಳುನಾಡು ಮತ್ತು ಗೋವಾದವರಾಗಿದ್ದಾರೆ. ಇವರ ಬಳಿಯಿದ್ದ ಎರಡು ವೀಸಾಗಳಲ್ಲಿ ಒಂದು ಉದ್ಯೋಗಿಗಳ ವೀಸಾವಾಗಿತ್ತು, ಇನ್ನೊಂದು ಸಂದರ್ಶಕ (Visiters)ರ ವೀಸಾವಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.  

ಪ್ರಕರಣಕ್ಕೆ ಸಂಬಂಧಪಟ್ಟಂತೆ 44 ಮಹಿಳೆಯರ ವಿರುದ್ಧ ವಿಮಾನ ನಿಲ್ದಾಣ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗೆ ಎರಡು ವೀಸಾಗಳನ್ನು ಹೊಂದಿದ್ದು ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇಂಥ ಪ್ರಕರಣಗಳು ಈಗೀಗ ಹೆಚ್ಚುತ್ತಿವೆ. ಮೊದಲು ವಿಸಿಟರ್ಟ್​ ವೀಸಾವನ್ನು ಪಡೆಯಲು ಅರ್ಜಿ ಹಾಕಿ, ಅದನ್ನು ಹೊಂದುತ್ತಾರೆ. ಅದಾದ ಬಳಿಕ ವಲಸೆ ನಿಯಮದಡಿ ಉದ್ಯೋಗ ವೀಸಾ ಹೊಂದುತ್ತಾರೆ. ಇದು ವೀಸಾ ನಿಯಮ ಉಲ್ಲಂಘನೆಯಾಗಿದೆ. ನಾವೀಗ 44 ಮಹಿಳೆಯರ ವಿರುದ್ಧ ಕೇಸ್​ ದಾಖಲು ಮಾಡಿಕೊಂಡಿದ್ದೇವೆ. ಇವರಿಗೆ ವೀಸಾ ಮಾಡಿಸಿಕೊಟ್ಟ ಏಜೆಂಟ್​ಗಳನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಬೀಜಿಂಗ್​ ಚಳಿಗಾಲದ ಒಲಿಂಪಿಕ್ಸ್​ಗೆ ಆಸ್ಟ್ರೇಲಿಯಾದಿಂದಲೂ ರಾಜತಾಂತ್ರಿಕ ಬಹಿಷ್ಕಾರ; ಕ್ರೀಡಾಪಟುಗಳಿಗೆ ಇಲ್ಲ ನಿರ್ಬಂಧ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ