AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 20, 2021 | 4:04 PM

Share

ಸಿಧಿ: ಮಹಿಳೆಯೊಬ್ಬರು, ತನ್ನ ಮೇಲೆ ಅತ್ಯಾಚಾರ ಮಾಡಲು ಬಂದವನ ಗುಪ್ತಾಂಗವನ್ನೇ ಕತ್ತರಿಸಿಹಾಕಿದ್ದಾರೆ. ಈ ಮಹಿಳೆಗೆ 45 ವರ್ಷ. ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಉಮಾರಿಹಾ ಗ್ರಾಮದಲ್ಲಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮನೆಯೊಳಗೆ ನುಗ್ಗಿ ರೇಪ್​ ಮಾಡಲು ಪ್ರಯತ್ನ ಮಾಡಿದವನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ ಸೀದಾ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾರೆ.

ಮಹಿಳೆಯ ಪತಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದರು. ಇದರಿಂದಾಗಿ ಆ ತನ್ನ 13 ವರ್ಷದ ಮಗನೊಟ್ಟಿಗೆ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ಕಳ್ಳನೊಬ್ಬ ಮನೆಯೊಳಗೆ ನುಸುಳಿದ. ಹೆದರಿದ ಮಹಿಳೆ ಮತ್ತು ಆಕೆಯ ಪುತ್ರ ತಮ್ಮ ಸುರಕ್ಷತೆಗಾಗಿ ಅಲ್ಲಿಂದ ಓಡಲು ಮುಂದಾದರು. ಆದರೆ ಆತ ಇವರಿಬ್ಬರಿಗೂ ಥಳಿಸಿದ. ಅಷ್ಟೇ ಅಲ್ಲ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ. ಸುಮಾರು 20 ನಿಮಿಷ ಆಕೆ ಕಾದಾಡಿದಳು. ನಂತರ ಬೇರೆ ದಾರಿ ಕಾಣದ ಮಹಿಳೆ ತನ್ನ ಮಲಗುವ ಮಂಚದ ಕೆಳಗೆ ಇಟ್ಟಿದ್ದ ಕುಡಗೋಲನ್ನು ತೆಗೆದುಕೊಂಡು ವ್ಯಕ್ತಿಯ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಅದಾದ ಬಳಿಕ ಮರುದಿನ ಮಧ್ಯಾಹ್ನ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಖಡ್ಡಿ ಠಾಣೆ ಅಧಿಕಾರಿ ಧರ್ಮೇಂದ್ರ ಸಿಂಗ್​ ರಜಪೂತ್ ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಯಿತು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ವಿವಿಧೆಡೆ ಪೊಲೀಸರ ಕಾರ್ಯಾರಣೆ; ಬಂಧಿತರಿಂದ ಚಿನ್ನ, ಮಾದಕ ವಸ್ತು ವಶ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ