ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ
ಪ್ರಾತಿನಿಧಿಕ ಚಿತ್ರ
Follow us
|

Updated on: Mar 20, 2021 | 4:04 PM

ಸಿಧಿ: ಮಹಿಳೆಯೊಬ್ಬರು, ತನ್ನ ಮೇಲೆ ಅತ್ಯಾಚಾರ ಮಾಡಲು ಬಂದವನ ಗುಪ್ತಾಂಗವನ್ನೇ ಕತ್ತರಿಸಿಹಾಕಿದ್ದಾರೆ. ಈ ಮಹಿಳೆಗೆ 45 ವರ್ಷ. ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಉಮಾರಿಹಾ ಗ್ರಾಮದಲ್ಲಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮನೆಯೊಳಗೆ ನುಗ್ಗಿ ರೇಪ್​ ಮಾಡಲು ಪ್ರಯತ್ನ ಮಾಡಿದವನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ ಸೀದಾ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾರೆ.

ಮಹಿಳೆಯ ಪತಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದರು. ಇದರಿಂದಾಗಿ ಆ ತನ್ನ 13 ವರ್ಷದ ಮಗನೊಟ್ಟಿಗೆ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ಕಳ್ಳನೊಬ್ಬ ಮನೆಯೊಳಗೆ ನುಸುಳಿದ. ಹೆದರಿದ ಮಹಿಳೆ ಮತ್ತು ಆಕೆಯ ಪುತ್ರ ತಮ್ಮ ಸುರಕ್ಷತೆಗಾಗಿ ಅಲ್ಲಿಂದ ಓಡಲು ಮುಂದಾದರು. ಆದರೆ ಆತ ಇವರಿಬ್ಬರಿಗೂ ಥಳಿಸಿದ. ಅಷ್ಟೇ ಅಲ್ಲ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ. ಸುಮಾರು 20 ನಿಮಿಷ ಆಕೆ ಕಾದಾಡಿದಳು. ನಂತರ ಬೇರೆ ದಾರಿ ಕಾಣದ ಮಹಿಳೆ ತನ್ನ ಮಲಗುವ ಮಂಚದ ಕೆಳಗೆ ಇಟ್ಟಿದ್ದ ಕುಡಗೋಲನ್ನು ತೆಗೆದುಕೊಂಡು ವ್ಯಕ್ತಿಯ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಅದಾದ ಬಳಿಕ ಮರುದಿನ ಮಧ್ಯಾಹ್ನ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಖಡ್ಡಿ ಠಾಣೆ ಅಧಿಕಾರಿ ಧರ್ಮೇಂದ್ರ ಸಿಂಗ್​ ರಜಪೂತ್ ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಯಿತು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ವಿವಿಧೆಡೆ ಪೊಲೀಸರ ಕಾರ್ಯಾರಣೆ; ಬಂಧಿತರಿಂದ ಚಿನ್ನ, ಮಾದಕ ವಸ್ತು ವಶ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್