AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 20, 2021 | 4:04 PM

Share

ಸಿಧಿ: ಮಹಿಳೆಯೊಬ್ಬರು, ತನ್ನ ಮೇಲೆ ಅತ್ಯಾಚಾರ ಮಾಡಲು ಬಂದವನ ಗುಪ್ತಾಂಗವನ್ನೇ ಕತ್ತರಿಸಿಹಾಕಿದ್ದಾರೆ. ಈ ಮಹಿಳೆಗೆ 45 ವರ್ಷ. ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಉಮಾರಿಹಾ ಗ್ರಾಮದಲ್ಲಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮನೆಯೊಳಗೆ ನುಗ್ಗಿ ರೇಪ್​ ಮಾಡಲು ಪ್ರಯತ್ನ ಮಾಡಿದವನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ ಸೀದಾ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾರೆ.

ಮಹಿಳೆಯ ಪತಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದರು. ಇದರಿಂದಾಗಿ ಆ ತನ್ನ 13 ವರ್ಷದ ಮಗನೊಟ್ಟಿಗೆ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ಕಳ್ಳನೊಬ್ಬ ಮನೆಯೊಳಗೆ ನುಸುಳಿದ. ಹೆದರಿದ ಮಹಿಳೆ ಮತ್ತು ಆಕೆಯ ಪುತ್ರ ತಮ್ಮ ಸುರಕ್ಷತೆಗಾಗಿ ಅಲ್ಲಿಂದ ಓಡಲು ಮುಂದಾದರು. ಆದರೆ ಆತ ಇವರಿಬ್ಬರಿಗೂ ಥಳಿಸಿದ. ಅಷ್ಟೇ ಅಲ್ಲ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ. ಸುಮಾರು 20 ನಿಮಿಷ ಆಕೆ ಕಾದಾಡಿದಳು. ನಂತರ ಬೇರೆ ದಾರಿ ಕಾಣದ ಮಹಿಳೆ ತನ್ನ ಮಲಗುವ ಮಂಚದ ಕೆಳಗೆ ಇಟ್ಟಿದ್ದ ಕುಡಗೋಲನ್ನು ತೆಗೆದುಕೊಂಡು ವ್ಯಕ್ತಿಯ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಅದಾದ ಬಳಿಕ ಮರುದಿನ ಮಧ್ಯಾಹ್ನ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಖಡ್ಡಿ ಠಾಣೆ ಅಧಿಕಾರಿ ಧರ್ಮೇಂದ್ರ ಸಿಂಗ್​ ರಜಪೂತ್ ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಯಿತು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ವಿವಿಧೆಡೆ ಪೊಲೀಸರ ಕಾರ್ಯಾರಣೆ; ಬಂಧಿತರಿಂದ ಚಿನ್ನ, ಮಾದಕ ವಸ್ತು ವಶ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?