AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 20, 2021 | 4:04 PM

Share

ಸಿಧಿ: ಮಹಿಳೆಯೊಬ್ಬರು, ತನ್ನ ಮೇಲೆ ಅತ್ಯಾಚಾರ ಮಾಡಲು ಬಂದವನ ಗುಪ್ತಾಂಗವನ್ನೇ ಕತ್ತರಿಸಿಹಾಕಿದ್ದಾರೆ. ಈ ಮಹಿಳೆಗೆ 45 ವರ್ಷ. ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಉಮಾರಿಹಾ ಗ್ರಾಮದಲ್ಲಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮನೆಯೊಳಗೆ ನುಗ್ಗಿ ರೇಪ್​ ಮಾಡಲು ಪ್ರಯತ್ನ ಮಾಡಿದವನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ ಸೀದಾ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾರೆ.

ಮಹಿಳೆಯ ಪತಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದರು. ಇದರಿಂದಾಗಿ ಆ ತನ್ನ 13 ವರ್ಷದ ಮಗನೊಟ್ಟಿಗೆ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ಕಳ್ಳನೊಬ್ಬ ಮನೆಯೊಳಗೆ ನುಸುಳಿದ. ಹೆದರಿದ ಮಹಿಳೆ ಮತ್ತು ಆಕೆಯ ಪುತ್ರ ತಮ್ಮ ಸುರಕ್ಷತೆಗಾಗಿ ಅಲ್ಲಿಂದ ಓಡಲು ಮುಂದಾದರು. ಆದರೆ ಆತ ಇವರಿಬ್ಬರಿಗೂ ಥಳಿಸಿದ. ಅಷ್ಟೇ ಅಲ್ಲ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ. ಸುಮಾರು 20 ನಿಮಿಷ ಆಕೆ ಕಾದಾಡಿದಳು. ನಂತರ ಬೇರೆ ದಾರಿ ಕಾಣದ ಮಹಿಳೆ ತನ್ನ ಮಲಗುವ ಮಂಚದ ಕೆಳಗೆ ಇಟ್ಟಿದ್ದ ಕುಡಗೋಲನ್ನು ತೆಗೆದುಕೊಂಡು ವ್ಯಕ್ತಿಯ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಅದಾದ ಬಳಿಕ ಮರುದಿನ ಮಧ್ಯಾಹ್ನ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಖಡ್ಡಿ ಠಾಣೆ ಅಧಿಕಾರಿ ಧರ್ಮೇಂದ್ರ ಸಿಂಗ್​ ರಜಪೂತ್ ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಯಿತು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ವಿವಿಧೆಡೆ ಪೊಲೀಸರ ಕಾರ್ಯಾರಣೆ; ಬಂಧಿತರಿಂದ ಚಿನ್ನ, ಮಾದಕ ವಸ್ತು ವಶ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು