AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ

ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ವೆಂಟಿಲೇಟರ್​​ಗಳನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ
ವೆಂಟಿಲೇಟರ್​ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 17, 2021 | 4:39 PM

Share

ದೆಹಲಿ: ಪಿಎಂ-ಕೇರ್ಸ್​​ ಫಂಡ್​ನಡಿ ದೇಶಾದ್ಯಂತ ಸುಮಾರು 45,946 ವೆಂಟಿಲೇಟರ್​​ಗಳನ್ನು ವಿತರಿಸಲಾಗಿದೆ. ಕೊವಿಡ್ 19 ಉಲ್ಬಣಗೊಂಡಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಅನಿವಾರ್ಯತೆಯೂ ಉಂಟಾಗಿದೆ. ಅದರ ಒಂದು ಭಾಗವಾಗಿ ದೇಶಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್​ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಬಿಜೆಪಿ ಟ್ವೀಟ್​ ಮಾಡಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಕೊವಿಡ್​ 19 ಎರಡನೇ ಅಲೆ ವಿರುದ್ಧ ಧೈರ್ಯದಿಂದ ಹೋರಾಡುತ್ತಿದೆ. ಇವೆಲ್​ ಭಾರತದಲ್ಲಿಯೇ ತಯಾರಾದ ವೆಂಟಿಲೇಟರ್​​ಗಳಾಗಿವೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ಇದನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ. ಒಟ್ಟು 45,946 ವೆಂಟಿಲೇಟರ್​ಗಳ ಪೈಕಿ ಅತ್ಯಂತ ಹೆಚ್ಚು ಅಂದರೆ 5555 ವೆಂಟಿಲೇಟರ್​ಗಳನ್ನು, ಕೊರೊನಾ ಸೋಂಕಿನ ತೀವ್ರತೆ ಅತ್ಯಂತ ಹೆಚ್ಚಾಗಿರುವ ಮಹಾರಾಷ್ಟ್ರಕ್ಕೆ ವಿತರಿಸಲಾಗಿದೆ. ಹಾಗೇ ರಾಷ್ಟ್ರ ರಾಜಧಾನಿ ದೆಹಲಿಗೆ ಅತ್ಯಂತ ಕಡಿಮೆ ಸಂಖ್ಯೆ ಅಂದರೆ ಕೇವಲ 763 ವೆಂಟಿಲೇಟರ್​ ನೀಡಿದ್ದಾಗಿ ಕೇಂದ್ರಸರ್ಕಾರ ಮಾಹಿತಿ ನೀಡಿದೆ.

ಇನ್ನುಳಿದಂತೆ ಪಂಜಾಬ್​ಗೆ 810, ಉತ್ತರಪ್ರದೇಶಕ್ಕೆ 5316, ಪಶ್ಚಿಮ ಬಂಗಾಳಕ್ಕೆ 1245, ತಮಿಳುನಾಡಿಗೆ 1450 ಮತ್ತು 3569 ವೆಂಟಿಲೇಟರ್​​ಗಳನ್ನು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಕಳಿಸಲಾಗಿದೆ. ಹಾಗೇ, ಇನ್ನೂ ಜೂನ್​ ಅಂತ್ಯದೊಳಗೆ 14,000ವೆಂಟಿಲೇಟರ್​​ಗಳನ್ನು ವಿತರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಇದನ್ನೂ ಓದಿ:ಮಳೆಗಾಲ ಆರಂಭಕ್ಕೂ ಮುನ್ನ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್

Oxygen Shortage: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ