AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ

ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ವೆಂಟಿಲೇಟರ್​​ಗಳನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ
ವೆಂಟಿಲೇಟರ್​ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 17, 2021 | 4:39 PM

Share

ದೆಹಲಿ: ಪಿಎಂ-ಕೇರ್ಸ್​​ ಫಂಡ್​ನಡಿ ದೇಶಾದ್ಯಂತ ಸುಮಾರು 45,946 ವೆಂಟಿಲೇಟರ್​​ಗಳನ್ನು ವಿತರಿಸಲಾಗಿದೆ. ಕೊವಿಡ್ 19 ಉಲ್ಬಣಗೊಂಡಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಅನಿವಾರ್ಯತೆಯೂ ಉಂಟಾಗಿದೆ. ಅದರ ಒಂದು ಭಾಗವಾಗಿ ದೇಶಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್​ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಬಿಜೆಪಿ ಟ್ವೀಟ್​ ಮಾಡಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಕೊವಿಡ್​ 19 ಎರಡನೇ ಅಲೆ ವಿರುದ್ಧ ಧೈರ್ಯದಿಂದ ಹೋರಾಡುತ್ತಿದೆ. ಇವೆಲ್​ ಭಾರತದಲ್ಲಿಯೇ ತಯಾರಾದ ವೆಂಟಿಲೇಟರ್​​ಗಳಾಗಿವೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ಇದನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ. ಒಟ್ಟು 45,946 ವೆಂಟಿಲೇಟರ್​ಗಳ ಪೈಕಿ ಅತ್ಯಂತ ಹೆಚ್ಚು ಅಂದರೆ 5555 ವೆಂಟಿಲೇಟರ್​ಗಳನ್ನು, ಕೊರೊನಾ ಸೋಂಕಿನ ತೀವ್ರತೆ ಅತ್ಯಂತ ಹೆಚ್ಚಾಗಿರುವ ಮಹಾರಾಷ್ಟ್ರಕ್ಕೆ ವಿತರಿಸಲಾಗಿದೆ. ಹಾಗೇ ರಾಷ್ಟ್ರ ರಾಜಧಾನಿ ದೆಹಲಿಗೆ ಅತ್ಯಂತ ಕಡಿಮೆ ಸಂಖ್ಯೆ ಅಂದರೆ ಕೇವಲ 763 ವೆಂಟಿಲೇಟರ್​ ನೀಡಿದ್ದಾಗಿ ಕೇಂದ್ರಸರ್ಕಾರ ಮಾಹಿತಿ ನೀಡಿದೆ.

ಇನ್ನುಳಿದಂತೆ ಪಂಜಾಬ್​ಗೆ 810, ಉತ್ತರಪ್ರದೇಶಕ್ಕೆ 5316, ಪಶ್ಚಿಮ ಬಂಗಾಳಕ್ಕೆ 1245, ತಮಿಳುನಾಡಿಗೆ 1450 ಮತ್ತು 3569 ವೆಂಟಿಲೇಟರ್​​ಗಳನ್ನು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಕಳಿಸಲಾಗಿದೆ. ಹಾಗೇ, ಇನ್ನೂ ಜೂನ್​ ಅಂತ್ಯದೊಳಗೆ 14,000ವೆಂಟಿಲೇಟರ್​​ಗಳನ್ನು ವಿತರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಇದನ್ನೂ ಓದಿ:ಮಳೆಗಾಲ ಆರಂಭಕ್ಕೂ ಮುನ್ನ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್

Oxygen Shortage: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್