AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ

ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ವೆಂಟಿಲೇಟರ್​​ಗಳನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ
ವೆಂಟಿಲೇಟರ್​ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 17, 2021 | 4:39 PM

Share

ದೆಹಲಿ: ಪಿಎಂ-ಕೇರ್ಸ್​​ ಫಂಡ್​ನಡಿ ದೇಶಾದ್ಯಂತ ಸುಮಾರು 45,946 ವೆಂಟಿಲೇಟರ್​​ಗಳನ್ನು ವಿತರಿಸಲಾಗಿದೆ. ಕೊವಿಡ್ 19 ಉಲ್ಬಣಗೊಂಡಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಅನಿವಾರ್ಯತೆಯೂ ಉಂಟಾಗಿದೆ. ಅದರ ಒಂದು ಭಾಗವಾಗಿ ದೇಶಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್​ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಬಿಜೆಪಿ ಟ್ವೀಟ್​ ಮಾಡಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಕೊವಿಡ್​ 19 ಎರಡನೇ ಅಲೆ ವಿರುದ್ಧ ಧೈರ್ಯದಿಂದ ಹೋರಾಡುತ್ತಿದೆ. ಇವೆಲ್​ ಭಾರತದಲ್ಲಿಯೇ ತಯಾರಾದ ವೆಂಟಿಲೇಟರ್​​ಗಳಾಗಿವೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ಇದನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ. ಒಟ್ಟು 45,946 ವೆಂಟಿಲೇಟರ್​ಗಳ ಪೈಕಿ ಅತ್ಯಂತ ಹೆಚ್ಚು ಅಂದರೆ 5555 ವೆಂಟಿಲೇಟರ್​ಗಳನ್ನು, ಕೊರೊನಾ ಸೋಂಕಿನ ತೀವ್ರತೆ ಅತ್ಯಂತ ಹೆಚ್ಚಾಗಿರುವ ಮಹಾರಾಷ್ಟ್ರಕ್ಕೆ ವಿತರಿಸಲಾಗಿದೆ. ಹಾಗೇ ರಾಷ್ಟ್ರ ರಾಜಧಾನಿ ದೆಹಲಿಗೆ ಅತ್ಯಂತ ಕಡಿಮೆ ಸಂಖ್ಯೆ ಅಂದರೆ ಕೇವಲ 763 ವೆಂಟಿಲೇಟರ್​ ನೀಡಿದ್ದಾಗಿ ಕೇಂದ್ರಸರ್ಕಾರ ಮಾಹಿತಿ ನೀಡಿದೆ.

ಇನ್ನುಳಿದಂತೆ ಪಂಜಾಬ್​ಗೆ 810, ಉತ್ತರಪ್ರದೇಶಕ್ಕೆ 5316, ಪಶ್ಚಿಮ ಬಂಗಾಳಕ್ಕೆ 1245, ತಮಿಳುನಾಡಿಗೆ 1450 ಮತ್ತು 3569 ವೆಂಟಿಲೇಟರ್​​ಗಳನ್ನು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಕಳಿಸಲಾಗಿದೆ. ಹಾಗೇ, ಇನ್ನೂ ಜೂನ್​ ಅಂತ್ಯದೊಳಗೆ 14,000ವೆಂಟಿಲೇಟರ್​​ಗಳನ್ನು ವಿತರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಇದನ್ನೂ ಓದಿ:ಮಳೆಗಾಲ ಆರಂಭಕ್ಕೂ ಮುನ್ನ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್

Oxygen Shortage: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ