AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ

ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ವೆಂಟಿಲೇಟರ್​​ಗಳನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ
ವೆಂಟಿಲೇಟರ್​ ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 17, 2021 | 4:39 PM

ದೆಹಲಿ: ಪಿಎಂ-ಕೇರ್ಸ್​​ ಫಂಡ್​ನಡಿ ದೇಶಾದ್ಯಂತ ಸುಮಾರು 45,946 ವೆಂಟಿಲೇಟರ್​​ಗಳನ್ನು ವಿತರಿಸಲಾಗಿದೆ. ಕೊವಿಡ್ 19 ಉಲ್ಬಣಗೊಂಡಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಅನಿವಾರ್ಯತೆಯೂ ಉಂಟಾಗಿದೆ. ಅದರ ಒಂದು ಭಾಗವಾಗಿ ದೇಶಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್​ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಬಿಜೆಪಿ ಟ್ವೀಟ್​ ಮಾಡಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಕೊವಿಡ್​ 19 ಎರಡನೇ ಅಲೆ ವಿರುದ್ಧ ಧೈರ್ಯದಿಂದ ಹೋರಾಡುತ್ತಿದೆ. ಇವೆಲ್​ ಭಾರತದಲ್ಲಿಯೇ ತಯಾರಾದ ವೆಂಟಿಲೇಟರ್​​ಗಳಾಗಿವೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ಇದನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ. ಒಟ್ಟು 45,946 ವೆಂಟಿಲೇಟರ್​ಗಳ ಪೈಕಿ ಅತ್ಯಂತ ಹೆಚ್ಚು ಅಂದರೆ 5555 ವೆಂಟಿಲೇಟರ್​ಗಳನ್ನು, ಕೊರೊನಾ ಸೋಂಕಿನ ತೀವ್ರತೆ ಅತ್ಯಂತ ಹೆಚ್ಚಾಗಿರುವ ಮಹಾರಾಷ್ಟ್ರಕ್ಕೆ ವಿತರಿಸಲಾಗಿದೆ. ಹಾಗೇ ರಾಷ್ಟ್ರ ರಾಜಧಾನಿ ದೆಹಲಿಗೆ ಅತ್ಯಂತ ಕಡಿಮೆ ಸಂಖ್ಯೆ ಅಂದರೆ ಕೇವಲ 763 ವೆಂಟಿಲೇಟರ್​ ನೀಡಿದ್ದಾಗಿ ಕೇಂದ್ರಸರ್ಕಾರ ಮಾಹಿತಿ ನೀಡಿದೆ.

ಇನ್ನುಳಿದಂತೆ ಪಂಜಾಬ್​ಗೆ 810, ಉತ್ತರಪ್ರದೇಶಕ್ಕೆ 5316, ಪಶ್ಚಿಮ ಬಂಗಾಳಕ್ಕೆ 1245, ತಮಿಳುನಾಡಿಗೆ 1450 ಮತ್ತು 3569 ವೆಂಟಿಲೇಟರ್​​ಗಳನ್ನು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಕಳಿಸಲಾಗಿದೆ. ಹಾಗೇ, ಇನ್ನೂ ಜೂನ್​ ಅಂತ್ಯದೊಳಗೆ 14,000ವೆಂಟಿಲೇಟರ್​​ಗಳನ್ನು ವಿತರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಇದನ್ನೂ ಓದಿ:ಮಳೆಗಾಲ ಆರಂಭಕ್ಕೂ ಮುನ್ನ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್

Oxygen Shortage: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು

Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ