AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ

ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ವೆಂಟಿಲೇಟರ್​​ಗಳನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ.

45,946 ವೆಂಟಿಲೇಟರ್​​ಗಳನ್ನು ವಿತರಿಸಿದ ಕೇಂದ್ರ ಸರ್ಕಾರ; ಮಹಾರಾಷ್ಟ್ರಕ್ಕೆ ಅತ್ಯಂತ ಹೆಚ್ಚು ಪೂರೈಕೆ
ವೆಂಟಿಲೇಟರ್​ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 17, 2021 | 4:39 PM

Share

ದೆಹಲಿ: ಪಿಎಂ-ಕೇರ್ಸ್​​ ಫಂಡ್​ನಡಿ ದೇಶಾದ್ಯಂತ ಸುಮಾರು 45,946 ವೆಂಟಿಲೇಟರ್​​ಗಳನ್ನು ವಿತರಿಸಲಾಗಿದೆ. ಕೊವಿಡ್ 19 ಉಲ್ಬಣಗೊಂಡಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಅನಿವಾರ್ಯತೆಯೂ ಉಂಟಾಗಿದೆ. ಅದರ ಒಂದು ಭಾಗವಾಗಿ ದೇಶಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್​ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಬಿಜೆಪಿ ಟ್ವೀಟ್​ ಮಾಡಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಕೊವಿಡ್​ 19 ಎರಡನೇ ಅಲೆ ವಿರುದ್ಧ ಧೈರ್ಯದಿಂದ ಹೋರಾಡುತ್ತಿದೆ. ಇವೆಲ್​ ಭಾರತದಲ್ಲಿಯೇ ತಯಾರಾದ ವೆಂಟಿಲೇಟರ್​​ಗಳಾಗಿವೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಕೇರ್ಸ್​ ಇದನ್ನು ಖರೀದಿಸಿ, ಅಗತ್ಯ ಇರುವ ಕಡೆಗೆ ಹಂಚಿದೆ ಎಂದೂ ಬಿಜೆಪಿ ಮಾಹಿತಿ ನೀಡಿದೆ. ಒಟ್ಟು 45,946 ವೆಂಟಿಲೇಟರ್​ಗಳ ಪೈಕಿ ಅತ್ಯಂತ ಹೆಚ್ಚು ಅಂದರೆ 5555 ವೆಂಟಿಲೇಟರ್​ಗಳನ್ನು, ಕೊರೊನಾ ಸೋಂಕಿನ ತೀವ್ರತೆ ಅತ್ಯಂತ ಹೆಚ್ಚಾಗಿರುವ ಮಹಾರಾಷ್ಟ್ರಕ್ಕೆ ವಿತರಿಸಲಾಗಿದೆ. ಹಾಗೇ ರಾಷ್ಟ್ರ ರಾಜಧಾನಿ ದೆಹಲಿಗೆ ಅತ್ಯಂತ ಕಡಿಮೆ ಸಂಖ್ಯೆ ಅಂದರೆ ಕೇವಲ 763 ವೆಂಟಿಲೇಟರ್​ ನೀಡಿದ್ದಾಗಿ ಕೇಂದ್ರಸರ್ಕಾರ ಮಾಹಿತಿ ನೀಡಿದೆ.

ಇನ್ನುಳಿದಂತೆ ಪಂಜಾಬ್​ಗೆ 810, ಉತ್ತರಪ್ರದೇಶಕ್ಕೆ 5316, ಪಶ್ಚಿಮ ಬಂಗಾಳಕ್ಕೆ 1245, ತಮಿಳುನಾಡಿಗೆ 1450 ಮತ್ತು 3569 ವೆಂಟಿಲೇಟರ್​​ಗಳನ್ನು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಕಳಿಸಲಾಗಿದೆ. ಹಾಗೇ, ಇನ್ನೂ ಜೂನ್​ ಅಂತ್ಯದೊಳಗೆ 14,000ವೆಂಟಿಲೇಟರ್​​ಗಳನ್ನು ವಿತರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಇದನ್ನೂ ಓದಿ:ಮಳೆಗಾಲ ಆರಂಭಕ್ಕೂ ಮುನ್ನ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್

Oxygen Shortage: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ